ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದ ಕ್ರೇಜಿಸ್ಟಾರ್ ರವಿಚಂದ್ರನ್ ತಾಯಿ ಪಟ್ಟಮ್ಮಾಳ್ ವೀರಸ್ವಾಮಿ (83) ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.
ಪಟ್ಟಮ್ಮಾಳ್ ವೀರಸ್ವಾಮಿ ಮೂವರು ಹೆಣ್ಣು ಮಕ್ಕಳು, ಇಬ್ಬರು ಗಂಡು ಮಕ್ಕಳು ಸೇರಿದಂತೆ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.
ಹಲವು ವರ್ಷಗಳಿಂದ ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರು, ಕೆಲವು ದಿನಗಳಿಂದ ನಗರದ ಸುಗುಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ನಾಲ್ಕೈದು ವರ್ಷಗಳಿಂದ ಯಾರ ಜೊತೆಯೂ ಮಾತನಾಡದ ಅವರು, ಕೇವಲ ರವಿಚಂದ್ರನ್ ಧ್ವನಿಯನ್ನು ಮಾತ್ರ ಕಂಡು ಹಿಡಿಯುತ್ತಿದ್ದರು.
ನನ್ನಮ್ಮ ನನ್ನ ಗೆಲುವನ್ನು ಮತ್ತೊಮ್ಮೆ ನೋಡಿಯೇ ನಮ್ಮನ್ನು ಅಗಲುತ್ತಾರೆ ಎಂದು ರವಿಚಂದ್ರನ್ ಹೇಳುತ್ತಿದ್ದರು.
ಈಗ ತಾಯಿಯ ಅಗಲಿಕೆ ರವಿಚಂದ್ರನ್ ಹಾಗೂ ಕುಟುಂಬದವರನ್ನು ನೋವಿನ ಮಡುವಿಗೆ ನೂಕಿದೆ.
- Bengaluru Airport : ವಿಮಾನದಲ್ಲಿ ಅಕ್ರಮವಾಗಿ 10 ಅನಕೊಂಡ ಹಾವುಗಳ ಕಳ್ಳಸಾಗಾಟ
- ಏಪ್ರಿಲ್ 26ರಂದು ಮೈಸೂರಿನ ಪ್ರವಾಸಿ ತಾಣಗಳು ಬಂದ್
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ಈಶ್ವರಪ್ಪ ಬಿಜೆಪಿಯಿಂದ 6 ವರ್ಷ ಉಚ್ಛಾಟನೆ : ಶಿಸ್ತು ಸಮಿತಿ ನಿರ್ಧಾರ
- ನೇಹಾ ಹತ್ಯೆ ಪ್ರಕರಣ ಸಿಐಡಿಗೆ ವರ್ಗಾವಣೆ : ರಾಜ್ಯ ಸರ್ಕಾರದಿಂದ ಘೋಷಣೆ
- ಒಂದೇ ಕುಟುಂಬದ 6 ಮಂದಿ ನೀರಿನ ಪಾಲು