ಸಚಿವ ವಿ.ಸೋಮಣ್ಣ ಪುತ್ರ ಅರುಣ್ ಸೋಮಣ್ಣ ಹಾಗೂ ನಟ ಸೃಜನ್ ಲೋಕೇಶ್ ಟೀಮ್ ತಂಡದ ನಡುವೆ ಗಲಾಟೆ ನಡೆದಿದೆ.
ಸೋಮವಾರ ರಾತ್ರಿ ಬೆಂಗಳೂರಿನ ಮುದ್ದಿನಪಾಳ್ಯದ ಕಿಂಗ್ಸ್ ಕ್ಲಬ್ನಲ್ಲಿ ಘಟನೆ ನಡೆದಿದೆ, ಬ್ಯಾಡ್ಮಿಂಟನ್ ಟೂರ್ನಮೆಂಟ್ಗಾಗಿ ಪ್ರಾಕ್ಟಿಸ್ ನಡೆಸುತ್ತಿದ್ದ ವೇಳೆ ಸೃಜನ್ ಲೋಕೇಶ್ ಟೀಮ್, ಪ್ರಾಕ್ಟಿಸ್ ಮುಗಿದ ನಂತರ ರಾತ್ರಿ ಪಾರ್ಟಿ ಮಾಡಿ, ಏರು ಧ್ವನಿಯಲ್ಲಿ ಕಿರುಚಾಡುತ್ತಿದ್ದರಂತೆ.
ಈ ವೇಳೆ ಅರುಣ್ ಸೋಮಣ್ಣ ಟೀಮ್ ಕ್ಲಬ್ಗೆ ಬಂದಿದ್ದು, ಯಾಕೆ ಜೋರಾಗಿ ಗಲಾಟೆ ಮಾಡ್ತೀರಾ ಅಂತ ಪ್ರಶ್ನೆ ಮಾಡಿದ್ದಾರೆ. ಆಗ ಮಾತಿಗೆ ಮಾತು ಬೆಳೆದು ಹೊಡೆದಾಟ ಕೂಡ ನಡೆದಿದೆ ಎನ್ನಲಾಗಿದೆ.
ಅನ್ನಪೂರ್ಣೇಶ್ವರಿ ನಗರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ, ಯಾರೂ ದೂರು ನೀಡಿಲ್ಲ ಎಂಬ ಮಾಹಿತಿ ಸಿಕ್ಕಿದೆ.
More Stories
ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಐದು ಷರತ್ತು
ಒಡಿಶಾ ರೈಲು ಅಪಘಾತ: ಸಿಬಿಐ ತನಿಖೆಗೆ ಶಿಫಾರಸ್ಸು -ಕೇಂದ್ರ ರೈಲ್ವೆ ಸಚಿವ ಪ್ರಕಟ
ಮಂಡ್ಯ : ಲಾರಿಗೆ ಕಾರು ಡಿಕ್ಕಿ – ನೆಲಮಂಗಲದ ನಾಲ್ವರು ಸಾವು