crime

ನಟಿ ಅರ್ಪಿತಾ ಮುಖರ್ಜಿ ಐಷಾರಾಮಿ 4 ಕಾರುಗಳು ನಾಪತ್ತೆ : ಮತ್ತಷ್ಟು ಚಿನ್ನಾಭರಣ, ನಗದಿಗೆ ಶೋಧ

ಶಿಕ್ಷಕರ ನೇಮಕಾತಿ ಹಗರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಪಾರ್ಥ ಚಟರ್ಜಿ ಲಾಕ್​ ಆಗಿದ್ದಾರೆ. ಈ ನಡುವೆ ಪ್ರಕರಣ ವಿಚಾರಣೆಗೆ ವೇಗ ತುಂಬಿರುವ ಇ.ಡಿ ಅಧಿಕಾರಿಗಳು ಅರ್ಪಿತಾ ಬಳಿ ಇದ್ದ ಮೂರು ಕಾರುಗಳು ನಾಪತ್ತೆ ಬಗ್ಗೆ ತನಿಖೆ ಆರಂಭಿಸಿದ್ದಾರೆ.

ಅರ್ಪಿತಾ ಕಾಂಪ್ಲೆಕ್ಸ್​​ನ ಪಾರ್ಕಿಂಗ್​​ನಿಂದ ಆಡಿ ಎ4, ಮರ್ಸಿಡಿಸ್ ಬೆಂಜ್, 2 ಹೋಂಡಾ CRV ನಾಲ್ಕು ಕಾರುಗಳು ಪಾರ್ಕಿಂಗ್ ಸ್ಥಳದಿಂದ ನಾಪತ್ತೆಯಾಗಿದೆ. ಸುಂದರಿಯ ನಾಲ್ಕು ಕಾರುಗಳಲ್ಲಿ ಝಣ ಝಣ ಕಾಂಚಾಣ ಇರೋ ಬಗ್ಗೆ ಅಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ.

ನಟಿ ಅರ್ಪಿತಾ ನಿರ್ದೇಶಕಿಯಾಗಿರುವ ಸಿಂಬಿಯೋಸಿಸ್ ಮರ್ಚೆಂಟ್ಸ್ ಪ್ರೈವೇಟ್ ಲಿಮಿಟೆಡ್, ಸೆಂಟ್ರಿ ಇಂಜಿನಿಯರಿಂಗ್ ಪ್ರೈವೇಟ್ ಲಿಮಿಟೆಡ್ ಹಾಗೂ ಅರ್ಪಿತಾ ಎಚಯ್ ಎಂಟರ್‌ಟೈನ್‌ಮೆಂಟ್ ಪ್ರೈವೇಟ್ ಲಿಮಿಟೆಡ್ ಸೇರಿ ಮೂರು ಕಂಪನಿಗಳ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ ಈ ಕಂಪನಿಗಳಲ್ಲಿ ಆಕೆಯ ಸೋದರ ಮಾವ ಕಲ್ಯಾಣ್ ಧರ್ ಕೂಡ ನಿರ್ದೇಶಕರಾಗಿದ್ದಾರೆ.

ಅರ್ಪಿತಾ ಮುಖರ್ಜಿಯ 4 ವಾಹನಗಳಿಗಾಗಿ ಇ.ಡಿ ಅಧಿಕಾರಿಗಳು ತೀವ್ರ ಶೋಧ ನಡೆಸುತ್ತಿದ್ದಾರೆ. ಕೋಲ್ಕತ್ತದ ಡೈಮಂಡ್ ಸಿಟಿ ಕಾಂಪ್ಲೆಕ್ಸ್‌ನಲ್ಲಿರುವ ಅರ್ಪಿತಾ ಮುಖರ್ಜಿ ನಿವಾಸದ ಪಾರ್ಕಿಂಗ್ ಪ್ರದೇಶದಿಂದ ನಾಲ್ಕು ವಾಹನಗಳು ನಾಪತ್ತೆಯಾಗಿವೆ ಎನ್ನಲಾಗಿದೆ. ಜುಲೈ 22ರಂದು ಇ.ಡಿ ದಾಳಿ ನಡೆಸುವ ಮುನ್ನ ಇದ್ದ 2 ಮರ್ಸಿಡಿಸ್ ಬೆನ್ಜ್, ಒಂದು ಹೋಂಡಾ ಸಿಟಿ, ಒಂದು ಹೋಂಡಾ ಸಿಆರ್​ವಿ ಹಾಗೂ ಆಡಿ ಎ4 ಪೈಕಿ ನಾಲ್ಕು ನಾಪತ್ತೆಯಾಗಿದೆ ಒಂದು ಮಾತ್ರ ಪತ್ತೆಯಾಗಿದೆ ಅಂತ ತಿಳಿದುಬಂದಿದೆ.

ನಾಪತ್ತೆಯಾಗಿರುವ ವಾಹನಗಳಲ್ಲಿ ನಗದು, ಚಿನ್ನ ಅಥವಾ ಇತರ ಬೆಲೆಬಾಳುವ ವಸ್ತುಗಳು ಇವೆ ಅಂತ ಅಧಿಕಾರಿಗಳು ಶಂಕಿಸಿದ್ದಾರೆ.

ಈ ಮಧ್ಯೆ ಪಾರ್ಥ ಚಟರ್ಜಿ ಮತ್ತು ಅರ್ಪಿತಾ ಮುಖರ್ಜಿ ಅವರನ್ನು ಜೋಕಾದಲ್ಲಿನ ಇಎಸ್‌ಐ ಆಸ್ಪತ್ರೆಗೆ ವೈದ್ಯಕೀಯ ತಪಾಸಣೆಗಾಗಿ ಹಾಜರುಪಡಿಸಲಾಗಿದೆ.

Team Newsnap
Leave a Comment
Share
Published by
Team Newsnap

Recent Posts

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 2 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,550 ರೂಪಾಯಿ ದಾಖಲಾಗಿದೆ. 24… Read More

May 2, 2024

ಪಿಎಚ್ಡಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಅನುಮಾನಾಸ್ಪದ ಸಾವು

ಬೆಂಗಳೂರು: ವಿದ್ಯಾರ್ಥಿಯೊಬ್ಬ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಪಿಹೆಚ್‌ಡಿ (PhD) ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪವಾಗಿ ಮೃತಪಟ್ಟಿದ್ದಾನೆ. ರಂಗನಾಥ್ ನಾಯಕ್ (27)… Read More

May 2, 2024

ಪ್ರೀತಿಯೆಂದರೆ…. ಇಷ್ಟೇನಾ

(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More

May 1, 2024

2024ರ ಟಿ20 ವಿಶ್ವಕಪ್ ಟೂರ್ನಿಗೆ ಭಾರತ ತಂಡ ಪ್ರಕಟ

ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್‍ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More

April 30, 2024

ಅಧಿಕೃತವಾಗಿ ಪ್ರಜ್ವಲ್ ರೇವಣ್ಣ ಜೆಡಿಎಸ್ ಪಕ್ಷದಿಂದ ಅಮಾನತು

ಹುಬ್ಬಳ್ಳಿ : ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ಬಳಿಕ ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣರನ್ನು ಅಮಾನತು ಮಾಡಿ ಜೆಡಿಎಸ್… Read More

April 30, 2024

ನಾಳೆಯಿಂದ 14 ಕ್ಷೇತ್ರಗಳಲ್ಲಿ 2ನೇ ಹಂತದ ಅಂಚೆ ಮತದಾನ

ಬೆಂಗಳೂರು : ರಾಜ್ಯದ ಎರಡನೇ ಹಂತದ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಗತ್ಯ ಸೇವೆಗಳ ಇಲಾಖೆಗಳ ಸಿಬ್ಬಂದಿಗೆ ನಾಳೆಯಿಂದ 3 ದಿನಗಳ… Read More

April 30, 2024