ನಟಿ ಪ್ರಿಯಾ ನಿತ್ಯಾನಂದನ ಜೊತೆ ಮದುವೆಯಾಗಲು ಬಯಸಿದ್ದಾರೆ??

Team Newsnap
1 Min Read

ಮಲಯಾಳಂನ ಚೆಲುವೆ ಮತ್ತು ‘ಜೇಮ್ಸ್’ ಖ್ಯಾತ ನಟಿ ಪ್ರಿಯಾ ಆನಂದ್ ಶಾಕಿಂಗ್‌ ಹೇಳಿಕೆಯೊಂದನ್ನು ನೀಡಿದ್ದಾರೆ.

ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರೊಂದಿಗೆ ಜೇಮ್ಸ್ ಸೇರಿದಂತೆ ಕನ್ನಡದ ಕೆಲ ಚಿತ್ರಗಳಲ್ಲಿ ನಟಿಸಿದ ಹೆಗ್ಗಳಿಕೆಯೂ ಇವರದ್ದು. ಸೋಷಿಯಲ್‌ ಮೀಡಿಯಾದಲ್ಲಿ ಅಷ್ಟೇನು ಆಕ್ಟಿವ್‌ ಆಗಿರದ ನಟಿ ಪ್ರಿಯಾ ಆನಂದ್‌, ವಿವಾದಿತ ದೇವಮಾನವ ಸ್ವಾಮಿ ನಿತ್ಯಾನಂದ ಕುರಿತ ಉಲ್ಲೇಖಗಳನ್ನು ತಿಂಗಳಿಗೆ ಎರಡು ಬಾರಿ ಹಂಚಿಕೊಳ್ಳುವುದನ್ನು ಅಭಿಮಾನಿಗಳು ಗಮನಿಸಿದ್ದಾರೆ.ಇದನ್ನು ಓದಿ –ಮಂಡ್ಯ : ವಿದ್ಯುತ್ ಶಾಕ್ ತಗುಲಿ ಚಿಕಿತ್ಸೆ ಪಡೆಯುತ್ತಿದ್ದ ರಾಷ್ಟ್ರೀಯ ಫುಟ್ಬಾಲ್ ಆಟಗಾರ ವಿಶ್ವಾಸ್ ನಿಧನ 

ವರ್ಚಸ್ಸಿನ ಮೂಲಕ ತನ್ನನ್ನು ಸೆಳೆಯುವ ಕಾರಣ ಸಾವಿರಾರು ಜನ ಆತನನ್ನು ಹಿಂಬಾಲಿಸುತ್ತಾರೆ ಎಂದು ಪ್ರಿಯಾ ಬಿಡದಿಯ ನಿತ್ಯಾನಂದ ಸ್ವಾಮಿಯನ್ನು ಮದುವೆಯಾಗಲು ಬಯಸಿದ್ದೇನೆ ಎಂದಿದ್ದಾರೆ. ನಿತ್ಯಾನಂದ ವಿಚಿತ್ರ ಕಾಯಿಲೆಯಿಂದ ಬಳಲುತ್ತಿದ್ದು, ಅವರು ಸತ್ತಿದ್ದಾರೆ ಎಂಬ ವದಂತಿಯಿರುವ ಸಮಯದಲ್ಲಿ ಈ ಹೇಳಿಕೆ ನೀಡಿರುವುದು ಆಸಕ್ತಿದಾಯಕವಾಗಿದೆ.

ನಿತ್ಯಾನಂದನನ್ನು ಮದುವೆಯಾದರೆ ತನ್ನ ಹೆಸರನ್ನು ಬದಲಾಯಿಸಬೇಕಾಗಿಲ್ಲ, ಏಕೆಂದರೆ ಅದು ಈಗಾಗಲೇ ಹೆಚ್ಚು ಕಡಿಮೆ ಹೋಲುತ್ತದೆ ಎಂದು ಪ್ರಿಯಾ ಹಾಸ್ಯಮಯವಾಗಿ ಹೇಳುತ್ತಾರೆ.ನಿತ್ಯಾನಂದ ಅವರಿಗೆ ಈ ವಿಷಯವನ್ನು ತಲುಪಿಸುವುದು ಹೇಗೆ ಎಂಬ ಚರ್ಚೆ ಕೂಡ ನಡೆದಿದೆ.

ಇದೊಂದು ತಮಾಷೆಯ ಮಾತಾಗಿದ್ದರೂ, ಪ್ರಿಯಾ ಆನಂದ್ ಗೆ ನಿತ್ಯಾನಂದನ ಮೇಲೆ ಅದು ಹೇಗೆ ಪ್ರೀತಿ ಮೂಡಿತು ಎನ್ನುವುದೇ ಸದ್ಯಕ್ಕಿರುವ ಪ್ರಶ್ನೆ.

Share This Article
Leave a comment