crime

ನಟಿ ಸವಿ ಆತ್ಮಹತ್ಯೆ:ನಟ ವಿವೇಕ್,ಪಿಎ ಮಹೇಶ್ ಕಾರಣ ? ಇಬ್ಬರ ವಿರುದ್ದ ಎಫ್ ಐ ಆರ್

  • ನನ್ನ ಮಗಳ ಸಾವಿಗೆ ತೆಲುಗು ನಟ ವಿವೇಕ್ ನೇರ ಕಾರಷ ಸೌಜನ್ಯ ತಂದೆ ದೂರು
  • ಪಿಎ ಮಹೇಶ್ ವಶ ಪಡೆದು ವಿಚಾರಣೆ ಆರಂಭಿಸಿದ ಪೋಲಿಸರು

ಕಿರುತೆರೆ ನಟಿ ಸವಿ (ಸೌಜನ್ಯ) ಮಾದಪ್ಪ ಆತ್ಮಹತ್ಯೆಗೆ ತೆಲುಗು ನಟ ವಿವೇಕ್ ಹಾಗೂ ಸವಿ ಪಿಎ ಮಹೇಶ್ ಕಾರಣ ಎಂದು ನಟಿ ತಂದೆ ಮಾದಪ್ಪ ನೀಡಿರುವ ದೂರಿನ ಅನ್ವಯ ಎಫ್ ಐ ಆರ್ ದಾಖಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಕುಂಬಳಗೋಡು ಪೊಲೀಸರು ತನಿಖೆಯನ್ನು ಚುರುಕು ಗೊಳಿಸಿ, ಪಿಎ ಮಹೇಶ್ ನನ್ನು ವಿಚಾರಣೆಗೆ ಒಳಪಡಿಸಿದ್ದಾರೆ.

ಈ ಇಬ್ಬರು ಅನುಮಾನಿತರ ವಿರುದ್ದ ಕುಂಬಳಗೋಡು ಪೊಲೀಸರು ಐಪಿಸಿ ಸೆಕ್ಷನ್ 306(ಆತ್ಮಹತ್ಯೆಗೆ ಪ್ರಚೋದನೆ) ಅಡಿಯಲ್ಲಿ ಕೇಸ್ ದಾಖಲು ಮಾಡಿ, ದೂರಿನನ್ವಯ ವಿವೇಕ್ ನಂ.1 ಆರೋಪಿ ಹಾಗೂ ಮಹೇಶ್ ನಂ.2 ಆರೋಪಿಯಾಗಿದ್ದಾರೆ.

ಮದುವೆ ಆಗದೇ ಹೋದರೆ ಕೊಲೆ ಮಾಡುವೆ – ವಿವೇಕ್

ನಟಿ ಸೌಜನ್ಯ ಮಾದಪ್ಪ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ನನ್ನ ಮಗಳ ಸಾವಿಗೆ ನಟ ವಿವೇಕ್ ಹಾಗೂ ಮಹೇಶ್ ಕಿರುಕುಳವೇ ಕಾರಣ. ನನ್ನ ಮಗಳು ಸೌಜನ್ಯ ಮಾದಪ್ಪ ಸಿನಿಮಾ ಹಾಗೂ ಧಾರವಾಹಿಗಳಲ್ಲಿ ನಟಿಸುವ ಸಲುವಾಗಿ 5 ವರ್ಷಗಳ ಹಿಂದೆ ಬೆಂಗಳೂರಿಗೆ ಬಂದಿದ್ದಳು.

ಒಂದು ವರ್ಷದ ಹಿಂದೆ ಕುಂಬಳಗೋಡು ಬಳಿಯ ಸನ್ವರ್ಥ್ ಅಪಾರ್ಟ್‍ಮೆಂಟ್ ನಲ್ಲಿ ವಾಸವಾಗಿದ್ದಳು.

ಈ ವೇಳೆ ನನ್ನ ಮಗಳು ಸೌಜನ್ಯ ಳಿಗೆ ವಿವೇಕ್ ಎಂಬುವನ ಪರಿಚಯ ವಾಗಿತ್ತು. ವಿವೇಕ್ ನನ್ನ ಮಗಳನ್ನು ಪ್ರೀತಿಸುತ್ತೇನೆ, ನಿನ್ನನ್ನೇ ಮದುವೆಯಾಗುತ್ತೇನೆ ಎಂದು ಪೀಡಿಸುತ್ತಿದ್ದ. ಈ ವಿಚಾರವನ್ನು ಮಗಳು ಸೌಜನ್ಯ, ನನ್ನ ಪತ್ನಿ ರೇಣುಕಾಳಿಗೆ ತಿಳಿಸಿದ್ದಳು.

ಪತ್ನಿ ಗೆ ಫೋನ್ ಮಾಡಿ ಬೆದರಿಕೆ :

ಸೆಪ್ಟೆಂಬರ್ 30ರಂದು ವಿವೇಕ್ ನನ್ನ ಪತ್ನಿ ರೇಣುಕಾಗೆ ಬೆಳಗ್ಗೆ 9ಕ್ಕೆ ಫೋನ್ ಮಾಡಿದ್ದ. ಇದಾದ ಒಂದು ಗಂಟೆ ನಂತರ ನನ್ನ ದೊಡ್ಡ ಮಗಳು ಭಾಗ್ಯಶ್ರೀ ಕರೆಮಾಡಿ, ಸವಿ ಸತ್ತು ಹೋಗಿದ್ದಾಳೆ ಎಂದು ತಿಳಿಸಿದ್ದಾಳೆ.

ನನ್ನ ಮಗಳ ಸಾವಿಗೆ ವಿವೇಕ್ ಹಾಗೂ ಅವಳ ಸಹಾಯಕನಾಗಿದ್ದ ಮಹೇಶ್ ಕಾರಣ. ನನ್ನ ಮಗಳ ಬಳಿ 6 ಲಕ್ಷ ರೂ. ಹಣವಿತ್ತು. ಎರಡು ದಿನಗಳ ಹಿಂದೆ 1 ಲಕ್ಷ ರೂ.ಗಳನ್ನು ಕಳುಹಿಸಿದ್ದೆ. ನನ್ನ ಮಗಳ ಜೊತೆಯಲ್ಲಿದ್ದ ವಿವೇಕ್ ಹಾಗೂ ಮಹೇಶ್ ಕಿರುಕುಳ ತಾಳಲಾರದೆ ಸೆಪ್ಟೆಂಬರ್ 30ರಂದು 10:30ರ ಸುಮಾರಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಹೀಗಾಗಿ ವಿವೇಕ್ ಹಾಗೂ ಮಹೇಶ್ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ನಟಿಯ ತಂದೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

Team Newsnap
Leave a Comment
Share
Published by
Team Newsnap

Recent Posts

ಹೆಚ್.ಡಿ ರೇವಣ್ಣ ವಿರುದ್ಧ ಕಿಡ್ನಾಪ್ ಕೇಸ್ ದಾಖಲು

ಮೈಸೂರು : ಮೈಸೂರು ಜಿಲ್ಲೆ ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಮಗನಿಂದ ರೇವಣ್ಣ ವಿರುದ್ಧ ದೂರು ದಾಖಲಿಸಲಾಗಿದ್ದು ,ಎಫ್‍ಐಆರ್… Read More

May 3, 2024

ರಾಮನಗರ : ಐಜೂರಿನಲ್ಲಿ ಕರಡಿ ಪ್ರತ್ಯಕ್ಷ

ರಾಮನಗರ : ಮೂರು ದಿನಗಳ ಹಿಂದೆ ಕರಡಿಯೊಂದು ಐಜೂರಿನ ಜನವಸತಿ ಪ್ರದೇಶದಲ್ಲಿ ನಿರ್ಭೀತಿಯಿಂದ ಓಡಾಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.… Read More

May 3, 2024

ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಕೇಸ್ ದಾಖಲು

ಬೆಂಗಳೂರು : . ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದ್ದು , ಸಂತ್ರಸ್ತೆಯೊಬ್ಬರು ಜಡ್ಜ್ ಮುಂದೆ ಸಿಆರ್ ಪಿಸಿ… Read More

May 3, 2024

ಪೊಲೀಸ್ ಠಾಣೆ ಸಮೀಪದಲ್ಲೇ ಪತ್ನಿಯನ್ನು ಕೊಂದ ಪತಿ

ಬೆಂಗಳೂರು : ಕೋರಮಂಗಲದ ಆರನೇ ಬ್ಲಾಕ್ ನಲ್ಲಿ , ಕಿರುಕುಳದ ದೂರು ನೀಡಿದ ಪತ್ನಿಯನ್ನು ಪೊಲೀಸ್ ಠಾಣೆ ಎದುರಲ್ಲೇ ಪತಿ… Read More

May 3, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 3 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,250 ರೂಪಾಯಿ ದಾಖಲಾಗಿದೆ. 24… Read More

May 3, 2024

SIT ಯಿಂದ ಸಂಸದ ಪ್ರಜ್ವಲ್ ರೇವಣ್ಣಗೆ ಲುಕ್ ಔಟ್ ನೋಟಿಸ್ ಜಾರಿ

ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More

May 2, 2024