ಮೀಟೂ ಪ್ರಕರಣದ ನಂತರ ದೇಶದಾದ್ಯಂತ ಸುದ್ದಿಯಲ್ಲಿದ್ದ ಬಾಲಿವುಡ್ ತಾರೆ ತನುಶ್ರೀ ದತ್ತಾ ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿದೆ. ಅವರ ಕಾಲಿಗೆ ಗಾಯಗಳಾಗಿವೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ನಟಿ ತನುಶ್ರೀ ಉಜ್ಜಯಿನಿಯ ಮಹಾಕಾಲ್ ದೇವಸ್ಥಾನಕ್ಕೆ ಹೊರಟಿದ್ದರು. ಮಾರ್ಗ ಮಧ್ಯೆ ಕಾರಿನ ಬ್ರೇಕ್ ಫೇಲ್ ಆಗಿದೆ. ಚಾಲಕನ ನಿಯಂತ್ರಣ ತಪ್ಪಿದ್ದರಿಂದ ಕಾರು ಅಪಘಾತಕ್ಕೀಡಾಗಿದೆ.

ಅವರ ಕಾಲಿಗೆ ಅನೇಕ ಗಾಯಗಳು ಆಗಿವೆ. ಆದರೂ, ದತ್ತಾ ದೇವರ ದರ್ಶನವನ್ನು ತಪ್ಪಿಸಿಲ್ಲ. ಆ ನೋವಿನಲ್ಲೇ ದೇವರ ದರ್ಶನ ಪಡೆದಿದ್ದಾರಂತೆ.
ಮಹಾಕಲ್ ದೇವಸ್ಥಾನಕ್ಕೆ ಹೋಗುವುದು ನನ್ನ ಸಂಕಲ್ಪವಾಗಿತ್ತು. ಹೀಗಾಗಿ ಕಾರು ಅಪಘಾತವಾದರೂ, ನಾನು ದೇವರ ದರ್ಶನವನ್ನು ತಪ್ಪಿಸಲಿಲ್ಲ. ನೋವಿನಿಂದ ಕೂಡಿದ ಕಾಲುಗಳಿಂದಲೇ ದೇವಸ್ಥಾನಕ್ಕೆ ಹೋದೆ. ದೇವರ ದರ್ಶನ ಮಾಡಿದೆ ಎಂದಿದ್ದಾರೆ.
ಆ ದೇವರ ಅನುಗ್ರಹದಿಂದಾಗಿ ನನಗೆ ಯಾವುದೇ ರೀತಿಯ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಅವರು ಇನ್ಸ್ಟಾಗ್ರಾಮ್ ನಲ್ಲಿ ಬರೆದುಕೊಂಡಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಕನ್ನಡ ಸಿನಿಮಾ ಕ್ಷೇತ್ರಕ್ಕೆ ಉದ್ಯಮ ಸ್ಥಾನಮಾನ
ರಾಜ್ಯ ಸರ್ಕಾರದಿಂದ ಸಿನಿಮಾ ಟಿಕೆಟ್ ದರ ನಿಯಂತ್ರಣದ ಚಿಂತನೆ: ಗೃಹ ಸಚಿವ ಜಿ. ಪರಮೇಶ್ವರ್