ನಟಿ ವಿಜಯಶಾಂತಿ ಅವರ ಪಕ್ಷ ಬದಲಾವಣೆ ಬಗ್ಗೆ ಇದ್ದ ಎಲ್ಲ ಕುತೂಹಲಕ್ಕೆ ತೆರೆಬಿದ್ದಿದೆ. ನಟಿ ಖುಷ್ಬು ಇತ್ತೀಚೆಗಷ್ಟೇ ಬಿಜೆಪಿ ಸೇರಿದ ಬಳಿಕ, ಇದೀಗ ತೆಲಂಗಾಣದಲ್ಲಿ ನಟಿ ವಿಜಯಶಾಂತಿ ಕಾಂಗ್ರೆಸ್ಗೆ ಗುಡ್ ಬೈ ಹೇಳಿದ್ದು, ನಾಳೆಯೇ ಬಿಜೆಪಿ ಸೇರಲಿದ್ದಾರೆ.
ಕೆಲವು ಸಮಯದಿಂದ ಪಕ್ಷದ ಚಟುವಟಿಕೆಗಳಿಂದ ದೂರವಿದ್ದ ಹಿರಿಯ ನಾಯಕಿ ವಿಜಯಶಾಂತಿ ಅವರು ಕಾಂಗ್ರೆಸ್ಗೆ ವಿದಾಯ ಹೇಳಿದ್ದಾರೆ.
ಅವರು ನಾಳೆ ದೆಹಲಿಗೆ ತೆರಳಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಸಮ್ಮುಖದಲ್ಲಿ ಬಿಜೆಪಿ ಸೇರಲಿದ್ದಾರೆ. ತದನಂತರ ಹಲವಾರು ಹಿರಿಯ ನಾಯಕರೊಂದಿಗೆ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲಿದ್ದಾರೆ.
ವಿಜಯಶಾಂತಿ ಈಗಾಗಲೇ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ದುಬಕಾ ಚುನಾವಣೆಯ ಗೆಲುವಿನೊಂದಿಗೆ ಉತ್ತಮ ಮನಸ್ಥಿತಿಯಲ್ಲಿರುವ ಬಿಜೆಪಿ ವಿಜಯಶಾಂತಿಯ ಸೇವೆಗಳನ್ನು ಜಿಎಚ್ಎಂಸಿ ಚುನಾವಣೆಯಲ್ಲಿ ಬಳಸಿಕೊಳ್ಳಲಿದೆ. ಹಾಗೂ ಪಕ್ಷದ ಅಭ್ಯರ್ಥಿಗಳ ಪರವಾಗಿ ಅವರು ಪ್ರಚಾರ ನಡೆಸಲಿದ್ದಾರೆ.
54ರ ಹರೆಯದ ಪಂಚಭಾಷಾ ನಟಿ ವಿಜಯಶಾಂತಿ ಕನ್ನಡ, ತೆಲುಗು, ತಮಿಳು, ಮಳಯಾಳಂ ಮತ್ತು ಹಿಂದಿಯಲ್ಲಿ ನಟಿಸಿದ್ದಾರೆ. ಸುಮಾರು 40 ವರ್ಷಗಳ ಕಾಲ ಅನೇಕ ಪಾತ್ರಗಳಲ್ಲಿ 180ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿ ಸಿನಿ ಪ್ರಿಯರನ್ನ ರಂಜಿಸಿದ್ದಾರೆ. ದಕ್ಷಿಣ ಭಾರತ ಚಿತ್ರರಂಗದ ದಿ ಲೇಡಿ ಸೂಪರ್ ಸ್ಟಾರ್, ಮತ್ತು ಲೇಡಿ ಅಮಿತಾಬ್ ಎಂದು ಅಭಿಮಾನಿಗಳು ಇವರನ್ನ ಕರೆಯುತ್ತಾರೆ. ಇವರಿಗೆ ಅನೇಕ ಪ್ರಶಸ್ತಿಗಳು ಸಹ ಲಭಿಸಿವೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು