ನಟಿ ವಿಜಯಶಾಂತಿ ಅವರ ಪಕ್ಷ ಬದಲಾವಣೆ ಬಗ್ಗೆ ಇದ್ದ ಎಲ್ಲ ಕುತೂಹಲಕ್ಕೆ ತೆರೆಬಿದ್ದಿದೆ. ನಟಿ ಖುಷ್ಬು ಇತ್ತೀಚೆಗಷ್ಟೇ ಬಿಜೆಪಿ ಸೇರಿದ ಬಳಿಕ, ಇದೀಗ ತೆಲಂಗಾಣದಲ್ಲಿ ನಟಿ ವಿಜಯಶಾಂತಿ ಕಾಂಗ್ರೆಸ್ಗೆ ಗುಡ್ ಬೈ ಹೇಳಿದ್ದು, ನಾಳೆಯೇ ಬಿಜೆಪಿ ಸೇರಲಿದ್ದಾರೆ.
ಕೆಲವು ಸಮಯದಿಂದ ಪಕ್ಷದ ಚಟುವಟಿಕೆಗಳಿಂದ ದೂರವಿದ್ದ ಹಿರಿಯ ನಾಯಕಿ ವಿಜಯಶಾಂತಿ ಅವರು ಕಾಂಗ್ರೆಸ್ಗೆ ವಿದಾಯ ಹೇಳಿದ್ದಾರೆ.
ಅವರು ನಾಳೆ ದೆಹಲಿಗೆ ತೆರಳಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಸಮ್ಮುಖದಲ್ಲಿ ಬಿಜೆಪಿ ಸೇರಲಿದ್ದಾರೆ. ತದನಂತರ ಹಲವಾರು ಹಿರಿಯ ನಾಯಕರೊಂದಿಗೆ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲಿದ್ದಾರೆ.
ವಿಜಯಶಾಂತಿ ಈಗಾಗಲೇ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ದುಬಕಾ ಚುನಾವಣೆಯ ಗೆಲುವಿನೊಂದಿಗೆ ಉತ್ತಮ ಮನಸ್ಥಿತಿಯಲ್ಲಿರುವ ಬಿಜೆಪಿ ವಿಜಯಶಾಂತಿಯ ಸೇವೆಗಳನ್ನು ಜಿಎಚ್ಎಂಸಿ ಚುನಾವಣೆಯಲ್ಲಿ ಬಳಸಿಕೊಳ್ಳಲಿದೆ. ಹಾಗೂ ಪಕ್ಷದ ಅಭ್ಯರ್ಥಿಗಳ ಪರವಾಗಿ ಅವರು ಪ್ರಚಾರ ನಡೆಸಲಿದ್ದಾರೆ.
54ರ ಹರೆಯದ ಪಂಚಭಾಷಾ ನಟಿ ವಿಜಯಶಾಂತಿ ಕನ್ನಡ, ತೆಲುಗು, ತಮಿಳು, ಮಳಯಾಳಂ ಮತ್ತು ಹಿಂದಿಯಲ್ಲಿ ನಟಿಸಿದ್ದಾರೆ. ಸುಮಾರು 40 ವರ್ಷಗಳ ಕಾಲ ಅನೇಕ ಪಾತ್ರಗಳಲ್ಲಿ 180ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿ ಸಿನಿ ಪ್ರಿಯರನ್ನ ರಂಜಿಸಿದ್ದಾರೆ. ದಕ್ಷಿಣ ಭಾರತ ಚಿತ್ರರಂಗದ ದಿ ಲೇಡಿ ಸೂಪರ್ ಸ್ಟಾರ್, ಮತ್ತು ಲೇಡಿ ಅಮಿತಾಬ್ ಎಂದು ಅಭಿಮಾನಿಗಳು ಇವರನ್ನ ಕರೆಯುತ್ತಾರೆ. ಇವರಿಗೆ ಅನೇಕ ಪ್ರಶಸ್ತಿಗಳು ಸಹ ಲಭಿಸಿವೆ.
2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More
ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More
ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More
ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್ನಲ್ಲಿ ಘೋಷಣೆ… Read More
ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More
ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More
This website uses cookies.
Leave a Comment