ಮಹಾರಾಷ್ಟ್ರ ಕ್ಯಾಬಿನೆಟ್ ಸಚಿವ ಆದಿತ್ಯಾ ಠಾಕ್ರೆಗೆ ಬೆದರಿಕೆ ಹಾಕಿದ ವ್ಯಕ್ತಿಯನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ.
ಜೈ ಸಿಂಗ್ ರಜಪೂತ್ ಬಂಧಿತ ಆರೋಪಿ. ಡಿಸೆಂಬರ್ 18 ರಂದು ಆರೋಪಿಯನ್ನು ಬಂಧಿಸಿ ಮುಂಬೈಗೆ ಕರೆ ತಂದಿದ್ದೇವೆ ಎಂದು ಮುಂಬೈ ಅಪರಾಧ ವಿಭಾಗದ ಸೈಬರ್ ತಂಡ ತಿಳಿಸಿದೆ.
ಆದಿತ್ಯಾ ಠಾಕ್ರೆ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ದವ್ ಠಾಕ್ರೆಯವರ ಮಗ. ಈ ಆರೋಪಿಯು ಡಿಸೆಂಬರ್ 8 ರಂದು ಆದಿತ್ಯ ಠಾಕ್ರೆಗೆ ಕರೆ ಮಾಡಿದ್ದಾನೆ. ಆದರೆ ಆ ಕರೆಯನ್ನು ಅವರು ತೆಗೆದಿಲ್ಲ. ನಂತರದಲ್ಲಿ ಆರೋಪಿಯು ಸಚಿವರಿಗೆ ಬೆದರಿಕೆಯ ಸಂದೇಶಗಳನ್ನು ಕಳುಹಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಸೈಬರ್ ಪೊಲೀಸ್ ತಂಡವು ತನಿಖೆ ನಡೆಸಿದಾಗ ಆರೋಪಿಯು ಬೆಂಗಳೂರಿನಿಂದ ಕರೆ ಮಾಡಿರುವುದು ಗೊತ್ತಾಗಿದೆ. ಈ ಆಧಾರದಲ್ಲಿ ಜಾಡು ಹಿಡಿದು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಆ ವ್ಯಕ್ತಿಯನ್ನು ಹುಡುಕಿಕೊಂಡು ಪೊಲೀಸರು ಬೆಂಗಳೂರಿಗೆ ಬಂದಿದ್ದಾರೆ ಎಂದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ
ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ