ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕೈ ಮುಗಿದು ಮನವಿ ಮಾಡುತ್ತೇನೆ, ಮುರುಘಾ ಮಠಕ್ಕೆ ನೇಮಕ ಮಾಡಲಾಗಿರುವ ಆಡಳಿತಾಧಿಕಾರಿ ಆದೇಶವನ್ನು ವಾಪಸ್ ಪಡೆಯಿರಿ ಎಂದು ಬಸವಪ್ರಭು ಶ್ರೀಗಳು ಮನವಿ ಮಾಡಿದರು.
ಸುದ್ದಿಗಾರರ ಜೊತೆ ಮಾತನಾಡಿದ ಬಸವಪ್ರಭು ಶ್ರೀಗಳು ರಾಜ್ಯ ಸರ್ಕಾರದಿಂದ ಮುರುಘಾ ಮಠಕ್ಕೆ ನೇಮಕ ಮಾಡಿರುವ ಆಡಳಿತಾಧಿಕಾರಿ ನಿಯೋಜನೆ ಆದೇಶವನ್ನು ವಾಪಸ್ ಪಡೆಯಬೇಕು. ಇಲ್ಲವಾದಲ್ಲಿ ಡಿ.26ರಂದು ಮಠಾಧೀಶರಿಂದ ಧರಣಿಯನ್ನು ಮಾಡಲು ನಿರ್ಧರಿಸಲಾಗಿದೆ ಎಂದು ಎಚ್ಚರಿಕೆ ನೀಡಿದರು. ಜಾಮಿಯಾ ಮಸೀದಿಯಲ್ಲಿ : ಅಕ್ರಮ ಮದರಸಾ : ತೆರವಿಗೆ ಹಿಂದೂ ಜಾಗರಣ ವೇದಿಕೆ ಗಡುವು
ಮುರುಘಾಮಠಕ್ಕೆ ರಾಜ್ಯ ಸರ್ಕಾರದಿಂದ ಆಡಳಿತಾಧಿಕಾರಿಯನ್ನು ನೇಮಿಸಿದ್ದನ್ನು ಪ್ರಶ್ನಿಸಿ, ರಿಟ್ ಅರ್ಜಿಯನ್ನು ಸಲ್ಲಿಸಲಾಗಿದೆ. ಅಲ್ಲದೇ ನಿವೃತ್ತ ಐಎಎಸ್ ಅಧಿಕಾರಿ ಪಿ.ಎಸ್ ವಸ್ತ್ರದ್ ನೇಮಕವನ್ನು ರದ್ದುಗೊಳಿಸುವಂತೆ ಕೋರಲಾಗಿತ್ತು.ಚಿತ್ರದುರ್ಗದ ಮುರುಘಾಮಠಕ್ಕೆ ಆಡಳಿತಾಧಿಕಾರಿ ನೇಮಕ ಪ್ರಶ್ನಿಸಿ ರಿಟ್ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ತೀರ್ಪು ಕಾಯ್ದಿರಿಸಿ ಆದೇಶ ಹೊರಡಿಸಿದೆ.
ಎರಡು ದಿನಗಳ ಹಿಂದೆ ರಾಜ್ಯ ಸರ್ಕಾರದಿಂದ ಮುರುಘಾ ಮಠಕ್ಕೆ ನಿವೃತ್ತ ಐಎಎಸ್ ಅಧಿಕಾರಿ ಪಿ ಎಸ್ ವಸ್ತ್ರದ್ ನೇಮಕ ಮಾಡಲಾಗಿತ್ತು. ಈ ನೇಮಕ ಪ್ರಶ್ನಿಸಿ ಚಿತ್ರದುರ್ಗದ ಡಿಎಸ್ ಮಲ್ಲಿಕಾರ್ಜುನ ಮತ್ತಿತ್ತರರು ರಿಟ್ ಅರ್ಜಿಯನ್ನು ಸಲ್ಲಿಸಿದ್ದಾರೆ.
ರಿಟ್ ಅರ್ಜಿಯಲ್ಲಿ ನಿವೃತ್ತ ಐಎಎಸ್ ಅಧಿಕಾರಿ ಪಿ.ಎಸ್ ವಸ್ತ್ರದ್ ನೇಮಕ ರದ್ದುಪಡಿಸಬೇಕು. ಇನ್ನೂ ಮಠಾಧಿಪತಿ ಜೈಲಿನಲ್ಲಿರುವುದನ್ನು ಕಾರಣವಾಗಿ ಆಡಳಿತಾಧಿಕಾರಿ ನೇಮಿಸುವುದು ಸಕಾರಣವಲ್ಲ. ಹೀಗಾಗಿ ರಾಜ್ಯ ಸರ್ಕಾರ ನೇಮಿಸಿರುವಂತ ಆಡಳಿತಾಧಿಕಾರಿ ನೇಮಕ ರದ್ದುಗೊಳಿಸುವಂತೆ ಕೋರಿದ್ದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು