ವಿಧಾನಸಭೆಯಲ್ಲಿ 10 ನೇ ಚಾಮರಾಜ ಒಡೆಯರ್, ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಭಾವಚಿತ್ರ ಅಳವಡಿಸಿ: ಸ್ಪೀಕರ್ ಗೆ ಸಚಿವ ಎಸ್.ಟಿ.ಎಸ್ ಪತ್ರ

Team Newsnap
1 Min Read
Dasara 2022- This time gold pass canceled: Minister Somashekhar ನಾಡಹಬ್ಬ ದಸರಾ - 2022 ಈ ಬಾರಿ ಗೋಲ್ಡ್‌ ಪಾಸ್‌ ರದ್ದು: ಸಚಿವ ಸೋಮಶೇಖರ್‌ ಸ್ಪಷ್ಟನೆ

ವಿಧಾನಸಭೆಯಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಹಾಗೂ 10 ನೇ ಚಾಮರಾಜ ಒಡೆಯರ್ ಅವರ ಭಾವಚಿತ್ರವನ್ನು ಅಳವಡಿಸಬೇಕು ಎಂದು ವಿಧಾನಸಭೆ ಅಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಪತ್ರ ಬರೆದು ಮನವಿ ಮಾಡಿದ್ದಾರೆ.

ವಿಧಾನ ಪರಿಷತ್ ನಲ್ಲಿ , ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಭಾವಚಿತ್ರವನ್ನು ಅಳವಡಿಸಿರುವ ಕ್ರಮವನ್ನು ಸ್ವಾಗತಿಸಿರುವ ಸಚಿವ ಎಸ್.ಟಿ.ಸೋಮಶೇಖರ್ ಅವರು, ರಾಜ್ಯದ ಹೆಸರನ್ನು ಉತ್ತುಂಗಗಕ್ಕೆ ತಂದ ಅನೇಕ ಮಹನೀಯರನ್ನು ನಾವು ಇಂದು ನೆನೆಯಬೇಕಿದೆ ಎಂದು ಹೇಳಿದ್ದಾರೆ.

ರಾಜಪರಂಪರೆಯ ಕಾಲದಲ್ಲಿಯೇ ಪ್ರಜಾಪ್ರಭುತ್ವದ ಪರಿಕಲ್ಪನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿದ್ದ
ಮೈಸೂರು ಮಹಾಸಂಸ್ಥಾನದ ರಾಜರು. ಪ್ರಜಾಪ್ರಭುತ್ವ ಪರಿಕಲ್ಪನೆಗೆ ಮೂಲ ಕಾರಣರಾದವರ ಭಾವಚಿತ್ರವನ್ನು ಪ್ರಜಾಪ್ರಭುತ್ವದ ಪವಿತ್ರ ದೇಗುಲವಾದ ವಿಧಾನಸಭೆಯಲ್ಲಿ ಅಳವಡಿಸಬೇಕಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ‌.

ಭಾರತದಲ್ಲಿ ಪ್ರಜಾಪ್ರತಿನಿಧಿ ಸಭೆಯ ಪರಿಕಲ್ಪನೆಯನ್ನು ಹುಟ್ಟುಹಾಕಿದ್ದು, 10ನೇ ಚಾಮರಾಜ ಒಡೆಯರ್ ಅವರು. 1881ರಲ್ಲಿ ಈ ವ್ಯವಸ್ಥೆಯನ್ನು ಜಾರಿಗೆ ತಂದರು 1923ರಲ್ಲಿ ಹೊಸ ಪ್ರಜಾಪ್ರತಿನಿಧಿ ಸಭೆಯನ್ನು ಸ್ಥಾಪಿಸಿ ಈ ಸಭೆಯನ್ನು ನಡೆಸಿ, ಜಾತಿ, ವರ್ಗಗಳನ್ನು ನೋಡದೆ ಎಲ್ಲರಿಗೂ ಸಮಾನ ಅವಕಾಶವನ್ನು ಕಲ್ಪಿಸಿ ಆದರ್ಶ ಪ್ರಜಾಪ್ರಭುತ್ವದ ಮಾದರಿಯನ್ನು ಹಾಕಿಕೊಟ್ಟವರು ನಾಲ್ವಡಿ ಅವರು.

ಅಲ್ಲದೆ, ಇವರು ಕೃಷ್ಣರಾಜ ಸಾಗರ ಅಣೆಕಟ್ಟು, ಹೊಸ ರೈಲು ಸಂಪರ್ಕಕ್ಕೆ ಮಾರ್ಗಗಳು, ಸಾಮಾಜಿಕ ಕಾನೂನುಗಳ ಜಾರಿ ಸೇರಿದಂತೆ ಅನೇಕ ಕ್ರಮಗಳನ್ನು ತೆಗೆದುಕೊಂಡಿದ್ದಾರೆ. ಇಂಥ ಮಹನೀಯರನ್ನು ಗೌರವಿಸುವ ಮೂಲಕ ಆ ಭಾಗಕ್ಕೆ ಮನ್ನಣೆಯನ್ನು ಕೊಡಬೇಕಿದೆ ಎಂದು ಸಚಿವರು ಮನವಿ ಮಾಡಿದ್ದಾರೆ.

Share This Article
Leave a comment