Karnataka

2 ಗಂಟೆ ಜಿಮ್ ಮಾಡಿದ್ದ ಅಪ್ಪುನನ್ನು 3 ತಾಸು ಚಿಕಿತ್ಸೆ ಮಾಡಿದರೂ ಬದುಕಲಿಲ್ಲ…….

ಪುನೀತ್ 2 ಗಂಟೆಗಳ ಜಿಮ್ ನಲ್ಲಿ ಕಸರತ್ತು ಮಾಡಿದ್ದಾರೆ. ತೀವ್ರ ಹೃದಯಾಘಾತವಾಗಿದೆ.
ಆಸ್ಪತ್ರೆಯಲ್ಲಿ ವೈದ್ಯರು ಸತತ 3 ಗಂಟೆಗಳ ಕಾಲ ಚಿಕಿತ್ಸೆ ನೀಡಿದ್ದರೂ ವೈದ್ಯರ ಪ್ರಯತ್ನಕ್ಕೆ ಪುನೀತ್ ರಾಜ್‍ಕುಮಾರ್ ದೇಹ ಸ್ಪಂದಿಸಲಿಲ್ಲ.

ಪ್ರತಿನಿತ್ಯ ಮಾಡುವಂತೆ ಇಂದೂ ಪುನೀತ್ ಜಿಮ್‍ನಲ್ಲಿ ಕಸರತ್ತು ನಡೆಸಿದ್ದಾರೆ. ಸತತ ಎರಡು ಗಂಟೆ ವ್ಯಾಯಾಮ ಮಾಡಿದ ಬಳಿಕ ಅವರಿಗೆ ಹೃದಯದಲ್ಲಿ ನೋವು ಕಾಣಿಸಿಕೊಂಡಿದೆ.

ವಿಕ್ರಂ ಆಸ್ಪತ್ರೆಯ ವೈದ್ಯ ಡಾ. ರಂಗನಾಥ್ ಮಾತನಾಡಿ, ಎದೆ ನೋವು ಎಂದು ಪುನೀತ್ ರಾಜ್‍ಕುಮಾರ್ ಅವರು ಕುಟುಂಬದ ವೈದ್ಯರ ಬಳಿ ಹೋಗಿದ್ದಾರೆ. ಅಲ್ಲಿ ಇಸಿಜಿ ಮಾಡಿಸಿದಾಗ ಹೃದಯಾಘಾತವಾಗಿರುವುದು ತಿಳಿದುಬಂದಿದೆ.

ಅಲ್ಲಿಂದ ನೇರವಾಗಿ ವಿಕ್ರಮ ಆಸ್ಪತ್ರೆಗೆ ಪುನೀತ್ ಅವರನ್ನು ಕರೆತರಲಾಗುತ್ತಿತ್ತು. ಮಾರ್ಗ ಮಧ್ಯೆದಲ್ಲಿಯೇ ಅವರಿಗೆ ಹಾರ್ಟ್
ಅಸಿಸ್ಟೋಲ್ (ಹೃದಯದ ಚಲನೆ ನಿಲ್ಲುವುದು) ಆಗಿತ್ತು. ಭಾರೀ ಹೃದಯಾಘಾತವೇ ಆಗಿತ್ತು ಎಂದು ಹೇಳಿದ್ದಾರೆ.

ಆದರೂ ಮೂರು ಗಂಟೆಗಳ ಕಾಲ ಅವರನ್ನು ವೆಂಟಿಲೇಟರ್ ನಲ್ಲಿ ಇಟ್ಟು ಬದುಕುಳಿಸಲು ನಾನಾ ರೀತಿಯಲ್ಲಿ ಪ್ರಯತ್ನ ಪಟ್ಟೆವು. ಹೃದಯ ಚಿಕಿತ್ಸೆಗೆ ಸಂಬಂಧಿಸಿದ ಎಲ್ಲಾ ರೀತಿಯ ಪ್ರಯತ್ನಗಳನ್ನು ಮಾಡಿದೆವು. ಆದರೆ ಅವರಿಂದ ಯಾವುದೇ ರೀತಿಯ ಸ್ಪಂದನೆ ಸಿಗಲಿಲ್ಲ.

ವೈದ್ಯರ ತಂಡ ಸಾಕಷ್ಟು ಪ್ರಯತ್ನಪಟ್ಟರು ಅವರನ್ನು ಉಳಿಸಿಕೊಳ್ಳಲು ಆಗಲಿಲ್ಲ. ಶುಕ್ರವಾರ ಮಧ್ಯಾಹ್ನ 2.30ರ ಹೊತ್ತಿಗೆ ಪುನೀತ್ ರಾಜ್‍ಕುಮಾರ್ ಇನ್ನಿಲ್ಲ ಎಂಬ ಸುದ್ದಿಯನ್ನು ಘೋಷಿಸಲೇಬೇಕಾಯಿತು ಎಂದು ವೈದ್ಯರು ತಿಳಿಸಿದ್ದಾರೆ.

Team Newsnap
Leave a Comment
Share
Published by
Team Newsnap

Recent Posts

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,240 ರೂಪಾಯಿ ದಾಖಲಾಗಿದೆ. 24… Read More

September 20, 2024

ಅತ್ಯಾಚಾರ ಆರೋಪ : ಶಾಸಕ ಮುನಿರತ್ನ ಬಂಧನ

ಬೆಂಗಳೂರು: ಇಂದು ಆರ್.ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಇಂದಿನಿಂದ… Read More

September 20, 2024

ಅಕ್ಟೋಬರ್ 4 ರಿಂದ 7 ವರೆಗೆ ಶ್ರೀರಂಗಪಟ್ಟಣ ದಸರ

ಶ್ರೀರಂಗಪಟ್ಟಣ : ಅಕ್ಟೋಬರ್ 4 ರಿಂದ 7 ವರೆಗೆ ವಿಜೃಂಭಣೆಯಿಂದ ಶ್ರೀರಂಗಪಟ್ಟಣ ಆಚರಿಸಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ… Read More

September 19, 2024

ತುಪ್ಪದ ಬದಲು ಪ್ರಾಣಿಗಳ ಕೊಬ್ಬಿನಿಂದ ತಿರುಪತಿ ಲಡ್ಡನ್ನು ತಯಾರಿಸಲಾಗುತ್ತಿತ್ತು: ಚಂದ್ರಬಾಬು ನಾಯ್ಡು

ಆಂಧ್ರಪ್ರದೇಶ: ಹಿಂದಿನ ಸರ್ಕಾರ ತಿರುಪತಿ ಲಡ್ಡುವನ್ನು ತುಪ್ಪದ ಬದಲು ಪ್ರಾಣಿಗಳ ಕೊಬ್ಬಿನಿಂದ ತಯಾರಿಸಲಾಗಿದೆ ಎಂದು ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು… Read More

September 19, 2024

ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಕೇಸ್‌ ದಾಖಲು

ಬೆಂಗಳೂರು: ಜೆಪಿ ಶಾಸಕ ಮುನಿರತ್ನವಿರುದ್ಧ ಮತ್ತೊಂದು ಕೇಸ್‌ ದಾಖಲಾಗಿದ್ದು , ಇದೀಗ ಶಾಸಕನ ವಿರುದ್ಧ ಅತ್ಯಾಚಾರ ಕೇಸ್‌ ದಾಖಲಾಗಿದೆ. ಶಾಸಕ… Read More

September 19, 2024

ಮೆಜೆಸ್ಟಿಕ್‌ ಬಸ್‌ ನಿಲ್ದಾಣದಲ್ಲಿ ಬಿಎಂಟಿಸಿ ಬಸ್‌ಗೆ ವಿಶೇಷ ಚೇತನ ಬಲಿ

ಬೆಂಗಳೂರು: ಮೆಜೆಸ್ಟಿಕ್‌ ಬಸ್‌ ನಿಲ್ದಾಣದಲ್ಲಿ ಬಿಎಂಟಿಸಿ ಬಸ್‌ ಅಪಘಾತಕ್ಕೆ ವಿಶೇಷ ಚೇತನ ಬಲಿಯಾಗಿರುವ ಘಟನೆ ನಡೆದಿದೆ. ಬಿಎಂಟಿಸಿ ಬಸ್ ಯಶವಂತಪುರದಿಂದ… Read More

September 18, 2024