Trending

ಮಂಡ್ಯದಲ್ಲಿ 30 ವರ್ಷಗಳ ಬಳಿಕ ಒಂದಾದ ವೃದ್ದ ಪ್ರೇಮಿಗಳು : ಆತ್ಮತೃಪ್ತಿಗಾಗಿ ಮದುವೆಯಾದ ವೃದ್ದ ಜೋಡಿ !

ಇದೊಂದು ಅಪರೂಪದ ಪ್ರೇಮ ಮದುವೆ. ಆಕೆ ಆತನಿಗೆ ಅತ್ತೆ ಮಗಳಾಗಬೇಕಿತ್ತು. ಅವರಿಬ್ಬರೂ ಪರಸ್ಪರ ಪ್ರೀತಿ ಮಾಡಿದ್ದರು.
ಕೂಲಿ ಮಾಡಿಕೊಂಡು ಬದುಕು ಸಾಗಿಸುತ್ತಿದ್ದ ಆತನಿಗೆ ಆಕೆಯನ್ನು ಕೊಟ್ಟು ಮದುವೆ ಮಾಡಿಕೊಡಲು ಆಕೆಯ ಮನೆಯವರು ಒಪ್ಪಲಿಲ್ಲ.ಇದು ಹಳೇ ಕಥೆ.

ಮೂರು ದಶಕಗಳ ಹಿಂದೆ ಈ ಪ್ರೇಮಿಗಳನ್ನು ಬೇರೆ ಮಾಡಿದ ಮನೆಯವರು
ಬೇರೊಬ್ಬನ ಜೊತೆ ಮದುವೆಯನ್ನೂ ಮಾಡಿದ್ದರು.

ಈಗ 30 ವರ್ಷಗಳ ಬಳಿಕ ಆಕೆಯನ್ನೇ ಆತ ಮದುವೆಯಾಗಿದ್ದಾನೆ. ಬದುಕಿನ ಸುದೀರ್ಘ ಪಯಣದ ನಂತರ ಇವರ ಪ್ರೇಮ ಫಲಿಸಿದೆ.

ಇಂಥದ್ದೊಂದು ವಿಶಿಷ್ಟ ಮದುವೆಗೆ ಸಾಕ್ಷಿಯಾಗಿದ್ದು ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಮೇಲುಕೋಟೆಯ ಯತಿರಾಜದಾಸರ ಗುರುಪೀಠದಲ್ಲಿ.

ಗುರುವಾರ ನಡೆದ ಮದುವೆಯಲ್ಲಿ ಮೈಸೂರು ಮೂಲದ ಚಿಕ್ಕಣ್ಣ ಮತ್ತು ಜಯಮ್ಮ ಸತಿಪತಿಗಳಾದರು.

ಚಿಕ್ಕಣ್ಣಗೆ( 65 ), ಜಯಮ್ಮಗೆ (58. )ಇಳಿವಯಸ್ಸಿನ ಈ ಜೋಡಿಗಳಾದರು

ಮೂಲತಃ ಹಾಸನ ಜಿಲ್ಲೆ ಹೊಳೆನರಸೀಪುರ ಗ್ರಾಮದ ಚಿಕ್ಕಣ್ಣ ಸದ್ಯ ಮೈಸೂರಿನಲ್ಲಿ ಕೂಲಿ ಮಾಡಿಕೊಂಡು ಬದುಕು ಸಾಗಿಸುತ್ತಿದ್ದಾರೆ.

ತನ್ನ ಅತ್ತೆ ಮಗಳಾದ ಜಯಮ್ಮಳನ್ನು ಪ್ರೀತಿಸುತ್ತಿದ್ದ ಅವರು, ಮದುವೆಯಾಗಲು ನಿರ್ಧರಿಸಿದ್ದರು. ಆದರೆ ಚಿಕ್ಕಣ್ಣ ಕೂಲಿ ಮಾಡುತ್ತಾರೆ ಎಂಬ ಕಾರಣಕ್ಕೆ ಜಯಮ್ಮರ ಮನೆಯವರು ಮದುವೆಗೆ ನಿರಾಕರಿಸಿ, ಬೇರೊಬ್ಬರ ಜೊತೆಗೆ ಮದುವೆ ಮಾಡಿದ್ದರು.

ಜಯಮ್ಮರಿಗೆ ಮದುವೆಯಾಗಿ 3 ದಶಕಗಳೇ ಕಳೆದಿದ್ದು ಒಬ್ಬ ಮಗನಿದ್ದಾನೆ. ತನ್ನ ಗಂಡ ಹಾಗೂ ಮಗನ ಜೊತೆಯಲ್ಲಿ ಮೈಸೂರಿನಲ್ಲಿದ್ದರು.

ಜಯಮ್ಮ. ಈ ನಡುವೆ ಜಯಮ್ಮರ ಕುಟುಂಬದಲ್ಲಿ ಬಿರುಕು ಮೂಡಿತ್ತು. ಇತ್ತ ಚಿಕ್ಕಣ್ಣ ಆಕೆಯ ನೆನಪಿನಲ್ಲೇ ದಿನ ದೂಡುತ್ತಿದ್ದ. ಅತ್ತ ತನ್ನ ಗಂಡನ ಜೊತೆಗೆ ಸೌಹಾರ್ದಯುತ ಬದುಕು ಸಾಗಿಸಲಾಗದ ಜಯಮ್ಮ ತನ್ನ ಕೊನೆಯ ದಿನಗಳನ್ನು ಚಿಕ್ಕಣ್ಣರ ಜೊತೆಗೆ ಕಳೆಯಲು ನಿರ್ಧರಿಸಿದ್ದರು.

ಚಿಕ್ಕಣ್ಣರ ಮನೆ ದೇವರು ಮೇಲುಕೋಟೆಯ ಶ್ರೀಚೆಲುವನಾರಾಯಣಸ್ವಾಮಿ. ಹೀಗಾಗಿ ಅಲ್ಲೇ ಮದುವೆಯಾಗಲು ನಿರ್ಧರಿಸಿದ್ದರು. ಅದರಂತೆ ಗುರುವಾರ (ಡಿ.2) ಮೇಲುಕೋಟೆಗೆ ಬಂದ ಚಿಕ್ಕಣ್ಣ ಹಾಗೂ ಜಯಮ್ಮ ಇಬ್ಬರೂ ಇಲ್ಲಿನ ಯತಿರಾಜ ದಾಸರ ಗುರುಪೀಠದಲ್ಲಿ ಮದುವೆಯಾಗಿದ್ದಾರೆ. ಗುರುಪೀಠದ ಶ್ರೀ ಶ್ರೀನಿವಾಸನ್ ನರಸಿಂಹನ್ ಗುರೂಜಿ ಅವರ ಸಮ್ಮುಖದಲ್ಲಿ ದಾಂಪತ್ಯಕ್ಕೆ ಕಾಲಿಟ್ಟಿದ್ದಾರೆ. ಆ ಮೂಲಕ ಚಿಕ್ಕಣ್ಣ ತನ್ನ ಮೂರು ದಶಕಗಳ ಪ್ರೀತಿಯನ್ನು ಕಡೆಗೂ ಪಡೆದುಕೊಂಡಿದ್ದಾರೆ.

ಮೇಲುಕೋಟೆಯಲ್ಲಿ ಮದುವೆಯಾದ ಜಯಮ್ಮ ಮತ್ತು ಚಿಕ್ಕಣ್ಣ

ಈ ಸಂದರ್ಭದಲ್ಲಿ ಮಾತನಾಡಿದ ಚಿಕ್ಕಣ್ಣ ಹಾಗೂ ಜಯಮ್ಮ ದಂಪತಿ ಈ ವಯಸ್ಸಿನಲ್ಲಿ ನಮಗೆ ಮದುವೆ ಅಗತ್ಯವಿರಲಿಲ್ಲವಾದರೂ ನಾವು ನಮ್ಮ ಆತ್ಮತೃಪ್ತಿಗಾಗಿ ಮದುವೆಯಾಗಲು ನಿರ್ಧರಿಸಿ ದಾಂಪತ್ಯಕ್ಕೆ ಕಾಲಿಟ್ಟಿದ್ದೇವೆ.

ಮನೆ ದೇವರ ವಾಸ ಸ್ಥಾನ ಮೇಲುಕೋಟೆಯಲ್ಲಿ ಮದುವೆಯಾಗಿರುವುದು ನಮಗೆ ತೃಪ್ತಿ ತಂದಿದೆ ಎಂದಿದ್ದಾರೆ. ಇವರಿಗೆ ಮದುವೆ ಮಾಡಿಸಿದ ಶ್ರೀ ಶ್ರೀನಿವಾಸನ್ ನರಸಿಂಹನ್ ಗುರೂಜಿ ಅವರು ನಮ್ಮ ಗುರುಪೀಠದಲ್ಲಿ ವರ್ಷಕ್ಕೆ 200 ರಿಂದ 300 ಮದುವೆಯಾಗುತ್ತವೆ. ಆದರೆ ಇಂದು ನಡೆದ ಮದುವೆ ವಿಶೇಷವಾದುದು. ಇಬ್ಬರೂ ಆತ್ಮಸಂತೋಷಕ್ಕಾಗಿ ಮದುವೆಯಾಗಿರುವುದಾಗಿ ಹೇಳಿದ್ದಾರೆ.

Team Newsnap
Leave a Comment
Share
Published by
Team Newsnap

Recent Posts

ಕುಸ್ತಿಪಟು ಭಜರಂಗ್ ಪುನಿಯಾ ನಾಡಾದಿಂದ ಅಮಾನತು

ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More

May 5, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More

May 5, 2024

ಲೋಕಾಯುಕ್ತರ ಹೆಸರಿನಲ್ಲಿ ಬೆಸ್ಕಾಂ ಎಂಡಿಗೆ ಬೆದರಿಕೆ – ದೂರು ದಾಖಲು

ಬೆಂಗಳೂರು : ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆದರಿಕೆ ಕರೆಗಳು ಬಂದ… Read More

May 5, 2024

ಸಂಚಾರ ನಿಯಮಗಳ ಉಲ್ಲಂಘನೆ: ರಾಜ್ಯದಲ್ಲಿ 1,700 ಕೋಟಿ ರೂ. ದಂಡ ಬಾಕಿ

ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More

May 4, 2024

ಜಾಮೀನು ಅರ್ಜಿ ವಜಾ : ಮಾಜಿ ಸಚಿವ HD ರೇವಣ್ಣ ಬಂಧನ

ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್​.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More

May 4, 2024

ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ

ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More

May 4, 2024