6 ವರ್ಷಗಳ ನಂತರ ದೇವೇಗೌಡರ ಮನೆಗೆ ಸಿದ್ದು : ರಾಜಕೀಯದಲ್ಲಿ ಕುತೂಹಲ

Team Newsnap
1 Min Read

6 ವರ್ಷಗಳ ನಂತರ ದೇವೇಗೌಡರ ಮನೆಗೆ ಸಿದ್ದರಾಮಯ್ಯ ಸೋಮವಾರ ಸಂಜೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು, ಆದರೆ ಈ ಭೇಟಿ ರಾಜ್ಯ ರಾಜಕಾರಣದಲ್ಲಿ ಕೂತುಹಲ ಮೂಡಿಸಿದೆ. ವಿಧಾನಸಭೆ ಕಲಾಪ ಮುಗಿದ ಕೂಡಲೇ ಪದ್ಮನಾಭ ನಗರದ ನಿವಾಸಕ್ಕೆ ತೆರಳಿ ಸಿದ್ದರಾಮಯ್ಯ ದೇವೇಗೌಡರನ್ನು ಭೇಟಿಯಾದರು. ಶಾಸಕರಾದ ಜಮೀರ್​, ಭೈರತಿ ಸುರೇಶ್ ಸಾಥ್ ನೀಡಿದರು.

ಜೆಡಿಎಸ್‌ ವಲಯದಿಂದ ತಮ್ಮ ರಾಜಕೀಯ ಜೀವನವನ್ನು ಆರಂಭಿಸಿದ್ದ ಸಿದ್ದರಾಮಯ್ಯ 2005 ರಲ್ಲಿ ಅಹಿಂದ ಸಮಾವೇಶದ ನಂತರ ಜೆಡಿಎಸ್‌ನಿಂದ ಹೊರ ಬಂದು ಕಾಂಗ್ರೆಸ್ ಸೇರಿ ಮುಖ್ಯಮಂತ್ರಿಯಾದದ್ದು ಈಗ ಇತಿಹಾಸ. ಸಂಸದೆ ಆಣೆ – ಪ್ರಮಾಣದ ಸವಾಲು ಸ್ವೀಕರಿಸಿದ ಶಾಸಕ ಪುಟ್ಟರಾಜು: ದಿನಾಂಕ, ಸಮಯ ನಿಗದಿ ಮಾಡಿ – ಪ್ರತಿ ಸವಾಲು

ರಾಜ್ಯಸಭೆ ಸದಸ್ಯರಾಗಿರುವ ದೇವೇಗೌಡರು ಕಳೆದ ಕೆಲ ದಿನಗಳಿಂದ ಕಾಲು ನೋವಿನ ಹಿನ್ನೆಲೆಯಲ್ಲಿ ಅವರು ಮನೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ, ಈ ಹಿನ್ನಲೆಯಲ್ಲಿ ಸಿದ್ದರಾಮಯ್ಯ ಅವರು ದೇವೇಗೌಡರ ಮನೆಗೆ ಭೇಟಿ ನೀಡಿ ಅವರ ಆರೋಗ್ಯದ ಬಗ್ಗೆ ಮಾಹಿತಿ ಪಡೆದುಕೊಂಡು ಶೀಘ್ರ ಗುಣಮುಖರಾಗುವಂತೆ ಆಶಿಸಿದರು.

Share This Article
Leave a comment