ರಾಜ್ಯದಲ್ಲಿ ಭಾವೈಕ್ಯತೆ ಸಂದೇಶ ಸಾರುವ ಅಪರೂಪದ ಸನ್ನಿವೇಶ ಬೇಲೂರಿನ ಚನ್ನಕೇಶವ ಸ್ವಾಮಿ ಸನ್ನಿಧಿಯಲ್ಲಿ ನಡೆದಿದೆ.
ಐತಿಹಾಸಿಕ ಶ್ರೀ ಚನ್ನಕೇಶವಸ್ವಾಮಿಯ ಗಳಿಗೆ ತೇರು ಬುಧವಾರ ನಡೆದಿದೆ. ಈ ಗಳಿಗೆ ತೇರು ಎಳೆಯುವ ಮುನ್ನ ಕುರಾನ್ ಪಠಣ ಮಾಡುವ ಸಂಪ್ರದಾಯ ಹಿಂದಿನಿಂದಲೂ ನಡೆದು ಬಂದಿದೆ. ಅದರಂತೆ ಖಾಜ ಸಾಹೇಬರು ತೇರಿನ ಹಗ್ಗ ಹಿಡಿದು ಕುರಾನ್ ಪಠಣ ಮಾಡಿದ ನಂತರ ಭಕ್ತರು ತೇರು ಎಳೆದು ಭಕ್ತಿ ಸಮರ್ಪಿಸಿದ್ದಾರೆ.
ಬೇಲೂರು ತಾಲೂಕಿನ ದೊಡ್ಡ ಮೇದೂರು ಗ್ರಾಮದ ಸಯ್ಯದ್ ಸಜ್ಜಾದ್ ಭಾಷಾ ಖಾದ್ರಿ ಖುರಾನ್ ಪಠಣ ಮಾಡಿದವರು.
ಈ ಕುರಿತು ಮಾತನಾಡಿದಭಾಷಾ ಅವರು, ಬಹಳ ಹಿಂದಿನಿಂದಲೂ ಈ ಸಂಪ್ರದಾಯ ನಡೆದುಕೊಂಡು ಬಂದಿದೆ. ನಾನು ಐವತ್ತು ವರ್ಷದಿಂದ ಕುರಾನ್ ಪಠಣ ಮಾಡುತ್ತಿದ್ದೇನೆ. ನನ್ನ ನಂತರ ನನ್ನ ಮಗ, ಅವನ ನಂತರ ಮೊಮ್ಮಗ ಈ ಸಂಪ್ರದಾಯ ಮುಂದುವರಿಸಿಕೊಂಡು ಹೋಗುತ್ತಾರೆ. ಎಲ್ಲಾ ಧರ್ಮದವರಿಗೂ ಒಳ್ಳೆಯದಾಗಲಿ ಎಂದು ಕುರಾನ್ ಪಠಣ ಮಾಡುತ್ತೇವೆ ಎಂದು ತಿಳಿಸಿದರು.
ಈಗ ರಾಜ್ಯದಲ್ಲಿ ನಡೆಯುತ್ತಿರುವ ಎಲ್ಲ ವಿವಾದಗಳನ್ನು ನಾವು ಹುಟ್ಟು ಹಾಕಿರುವುದು. ನಮ್ಮ ಸ್ವಾರ್ಥಕ್ಕಾಗಿ ನಾವು ಮಾಡಿಕೊಳ್ಳುತ್ತಿರುವುದು. ಹಿಂದೂಗಳ ಮೈಯಲ್ಲಿ ಹರಿಯುತ್ತಿರುವುದು ಒಂದೇ ರಕ್ತ, ನಮ್ಮ ಮೈಯಲ್ಲಿ ಹರಿಯುತ್ತಿರುವುದು ಒಂದೇ ರಕ್ತ. ಎಲ್ಲರೂ ಶಾಂತಿ, ಸಹಬಾಳ್ವೆಯಿಂದ ಬಾಳಬೇಕು ಎಂದರು ಭಾಷಾ.
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ
- ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ
- ಪ್ರಜ್ವಲ್ ಪೆಂಡ್ರೈವ್ ಪ್ರಕರಣ : 10 ಪೆನ್ ಡ್ರೈವ್ ಪ್ರೀತಂ ಗೌಡ ಆಪ್ತರ ಮನೆಯಲ್ಲಿ ಪತ್ತೆ
- ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಕ್ಕೆ ಸಂಚು; ಮೈಸೂರಿನಲ್ಲಿ ಶಂಕಿತ ಉಗ್ರನನ್ನು ಬಂಧಿಸಿದ ಎನ್ಐಎ