Trending

ರಾಜಸ್ಥಾನವನ್ನು ಸೋಲಿಸಿ ಮತ್ತೆ ಅಗ್ರಸ್ಥಾನಕ್ಕೇರಿದ ಡೆಲ್ಲಿ

ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 30ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್​ ವಿರುದ್ದ ಡೆಲ್ಲಿ ಕ್ಯಾಪಿಟಲ್ಸ್ 13 ರನ್​ಗಳ ರೋಚಕ ಜಯ ಸಾಧಿಸಿದೆ. ಅಂತಿಮ ಐದು ಓವರ್​ಗಳಲ್ಲಿ ಸಂಘಟಿತ ದಾಳಿ ನಡೆಸಿದ ಡೆಲ್ಲಿ ಬೌಲರುಗಳು ರಾಜಸ್ಥಾನ್ ರಾಯಲ್ಸ್ ಬ್ಯಾಟ್ಸ್​ಮನ್​ಗಳನ್ನು 148ಕ್ಕೆ ನಿಯಂತ್ರಿಸಿ ತಂಡಕ್ಕೆ ಗೆಲುವು ತಂದುಕೊಟ್ಟರು. ಅಲ್ಲದೆ, 12 ಅಂಕ ಗಳಿಸಿ ಅಂಕಪಟ್ಟಿಯಲ್ಲಿ ಅಗ್ರ ಸ್ಥಾನಕ್ಕೇ ಏರಿದರು.  ಸಾಕಷ್ಟು ಅಡೆತಡೆಗಳನ್ನು ಎದುರಿಸಿ 13ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಪ್ರಾರಂಭಿಸಲಾಗಿದೆ. ಪ್ರತಿ ವರ್ಷ ಭಾರತದಲ್ಲಿ ಐಪಿಎಲ್​ ನಡೆಯುತ್ತಿತ್ತು. ಆದರೆ, ಈ ಬಾರಿ ಐಪಿಎಲ್​ ಯುಎಇಗೆ ಶಿಫ್ಟ್​ ಆಗಿದೆ. ಸೆಪ್ಟೆಂಬರ್ 19ರಿಂದ ಹೊಡಿಬಡಿ ಆಟ ಅಭಿಮಾನಿಗಳನ್ನು ರಂಜಿಸುತ್ತಿದೆ.

ಡೆಲ್ಲಿ ಕ್ಯಾಪಿಟಲ್ಸ್​ ಆಡಿದ 8 ಪಂದ್ಯಗಳಲ್ಲಿ ಆರರಲ್ಲಿ ಗೆದ್ದು ಎರಡಲ್ಲಿ ಸೋತಿದೆ. ಈ ಮೂಲಕ 12 ಅಂಕ ಪಡೆದು ಅಂಕಪಟ್ಟಿಯಲ್ಲಿ ಮೇಲಿದೆ. ಮುಂಬೈ ಇಂಡಿಯನ್ಸ್​​  ಹಾಗೂ ಆರ್​ಸಿಬಿ ಆಡಿದ ಏಳು ಪಂದ್ಯಗಳಲ್ಲಿ ಐದರಲ್ಲಿ ಗೆದ್ದು ಅನುಕ್ರಮವಾಗಿ ಎರಡು ಹಾಗೂ ಮೂರನೇ ಸ್ಥಾನದಲ್ಲಿವೆ. ಪಾತಾಳಕ್ಕೆ ಕುಸಿದಿದ್ದ ಆರ್​ಸಿಬಿ ರನ್​ ರೇಟ್​  ನಿಧಾನವಾಗಿ ಚೇತರಿಕೆ ಕಾಣುತ್ತಿದೆ.

credits – iplt20

ಕೋಲ್ಕತ್ತಾ 7 ಪಂದ್ಯಗಳಲ್ಲಿ 4ರಲ್ಲಿ ಗೆದ್ದು ನಾಲ್ಕನೇ ಸ್ಥಾನದಲ್ಲಿದೆ. ಹೈದರಾಬಾದ್​, ಸಿಎಸ್​ಕೆ ಹಾಗೂ ರಾಜಸ್ಥಾನ ಅನುಕ್ರಮವಾಗಿ ಐದು, ಆರು ಹಾಗೂ ಏಳನೇ ಸ್ಥಾನಗಳಲ್ಲಿವೆ. ಕಿಂಗ್ಸ್​ ಇಲವೆನ್ ಪಂಜಾಬ್ ಎರಡು ಅಂಕ ಪಡೆಯುವ ಮೂಲಕ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ.

source –

https://www.iplt20.com/points-table/2020

Team Newsnap
Leave a Comment
Share
Published by
Team Newsnap

Recent Posts

ಕುಸ್ತಿಪಟು ಭಜರಂಗ್ ಪುನಿಯಾ ನಾಡಾದಿಂದ ಅಮಾನತು

ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More

May 5, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More

May 5, 2024

ಲೋಕಾಯುಕ್ತರ ಹೆಸರಿನಲ್ಲಿ ಬೆಸ್ಕಾಂ ಎಂಡಿಗೆ ಬೆದರಿಕೆ – ದೂರು ದಾಖಲು

ಬೆಂಗಳೂರು : ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆದರಿಕೆ ಕರೆಗಳು ಬಂದ… Read More

May 5, 2024

ಸಂಚಾರ ನಿಯಮಗಳ ಉಲ್ಲಂಘನೆ: ರಾಜ್ಯದಲ್ಲಿ 1,700 ಕೋಟಿ ರೂ. ದಂಡ ಬಾಕಿ

ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More

May 4, 2024

ಜಾಮೀನು ಅರ್ಜಿ ವಜಾ : ಮಾಜಿ ಸಚಿವ HD ರೇವಣ್ಣ ಬಂಧನ

ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್​.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More

May 4, 2024

ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ

ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More

May 4, 2024