ಮಧ್ಯಮ ವ್ಯಾಪ್ತಿಯ ‘ಅಗ್ನಿ-4’ ಬ್ಯಾಲಿಸ್ಟಿಕ್ ಕ್ಷಿಪಣಿಯನ್ನು ಭಾರತ ಯಶಸ್ವಿಯಾಗಿ ಪರೀಕ್ಷಿಸಿದೆ.
ಇದನ್ನು ಓದಿ –ಜೂ.13ರಿಂದ ಎರಡು ದಿನ ರಾಷ್ಟ್ರಪತಿ ಕೋವಿಂದ್ ಕರ್ನಾಟಕ ಭೇಟಿ
ಈ ಮೂಲಕ ಭಾರತ ಸೇನೆಗೆ ಮತ್ತಷ್ಟು ಬಲ ಬಂದಿದೆ . 4000 ಕಿ.ಮೀ. ದೂರದಿಂದಲೇ ಶತ್ರುಪಡೆಗಳಿಗೆ ಗುರಿ ಇಡಬಹುದಾಗಿದೆ. ಒಡಿಶಾದ ಎಪಿಜೆ ಅಬ್ದುಲ್ ಕಲಾಂ ದ್ವೀಪದಲ್ಲಿ ಸೋಮವಾರ ರಾತ್ರಿ 7.30ರ ಸುಮಾರಿಗೆ ಕ್ಷಿಪಣಿ ಪರೀಕ್ಷೆ ಯಶಸ್ವಿಯಾಗಿದೆ.
ಅಗ್ನಿ-IV ಕ್ಷಿಪಣಿಯ ಯಶಸ್ವಿ ಪರೀಕ್ಷಾರ್ಥ ಉಡಾವಣೆಯು ದೇಶದ ಸೇನಾ ಸಾಮರ್ಥ್ಯದ ಗಮನಾರ್ಹ ಹೆಚ್ಚಳದ ಸಂಕೇತವಾಗಿದೆ ಎಂದು ರಕ್ಷಣಾ ಸಚಿವಾಲಯ ಬಣ್ಣಿಸಿದೆ.
ಅಗ್ನಿ-4 ರ ಯಶಸ್ವಿ ಪರೀಕ್ಷೆಯು ಭಾರತದ ‘ವಿಶ್ವಾಸಾರ್ಹ ಕನಿಷ್ಠ ತಡೆ’ ನೀತಿಯನ್ನು ಪುನರುಚ್ಚರಿಸುತ್ತದೆ.
ಅಗ್ನಿ-4 ಕ್ಷಿಪಣಿಯು ಅಗ್ನಿ ಸರಣಿಯ 4ನೇ ಮಿಸೈಲ್ ಆಗಿದೆ. ಈ ಹಿಂದೆ ಅಗ್ನಿ-2 ಕ್ಷಿಪಣಿಯ ಪರೀಕ್ಷಾರ್ಥ ಉಡಾವಣಿ ಯಶಸ್ವಿಯಾಗಿತ್ತು. ಅಗ್ನಿ-2 ಕ್ಷಿಪಣಿಯು 1000 ದಿಂದ 2000 ಕಿ.ಮೀ. ಗುರಿ ವ್ಯಾಪ್ತಿ ಹೊಂದಿತ್ತು. ಇದೀಗ ಅಗ್ನಿ -4 ಕ್ಷಿಪಣಿ ಕೂಡ ಯಶಸ್ವಿಯಾಗಿದೆ, ಇದು ಅಗ್ನಿ ಸರಣಿಯ ಕ್ಷಿಪಣಿಗಳಲ್ಲಿ ಸುಧಾರಿತ ಸರಣಿಯಾಗಿದೆ. ಈ ಕ್ಷಿಪಣಿಗಳನ್ನು ರಕ್ಷಣಾ ಸಂಶೋಧನಾ ಮತ್ತು ಅಭಿವೃದ್ಧಿ ಸಂಸ್ಥೆಅಭಿವೃದ್ಧಿಪಡಿಸಿದೆ. ಈ ಮೂಲಕ ಭಾರತ ಸೇನೆ ಬತ್ತಳಿಕೆಗೆ ಮತ್ತೊಂದು ಪ್ರಬಲ ಅಸ್ತ್ರ ಸೇರ್ಪಡೆಯಾದಂತಾಗಿದೆ.
ಕ್ಷಿಪಣಿ ಪರೀಕ್ಷೆಯು ಎಲ್ಲಾ ಕಾರ್ಯಾಚರಣೆಗಳು ಮತ್ತು ವ್ಯವಸ್ಥೆಯ ವಿಶ್ವಾಸಾರ್ಹತೆಯನ್ನು ಸಾಬೀತುಪಡಿಸಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು