Main News

ಅಗ್ನಿಪಥ್‌ ನೇಮಕಾತಿ ಅಗ್ನಿವೀರರ ನೌಕಾಪಡೆಯಲ್ಲಿ ಶೇ.20ರಷ್ಟು ಹುದ್ದೆ ಮಹಿಳೆಯರಿಗೆ ಮೀಸಲು

ಅಗ್ನಿಪಥ್ ನೇಮಕಾತಿ ಯೋಜನೆಗಾಗಿ ಅಗ್ನಿವೀರರ ಮೊದಲ ಬ್ಯಾಚ್‌ನಲ್ಲಿ ಶೇ.20ರಷ್ಟು ಅಭ್ಯರ್ಥಿಗಳು ಮಹಿಳೆಯರಾಗಿರುತ್ತಾರೆ ಎಂದು ಭಾರತೀಯ ನೌಕಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.ಇವರನ್ನು ನೌಕಾಪಡೆಯ ವಿವಿಧ ಭಾಗಗಳಿಗೆ ಮತ್ತು ಶಾಖೆಗಳಿಗೆ ನೇಮಕ ಮಾಡಲಾಗುತ್ತದೆ.

ಭಾರತೀಯ ನೌಕಾಪಡೆಯು 2022ರಲ್ಲಿ 3000 ‘ಅಗ್ನಿವೀರ’ರನ್ನು ಸೇರ್ಪಡೆ ಮಾಡಿಕೊಳ್ಳಲು ಸಜ್ಜಾಗಿದೆ. ಜುಲೈ 1 ರಂದು ಮೊದಲ ಬ್ಯಾಚ್‌ಗಾಗಿ ನೇಮಕಾತಿ ಪ್ರಕ್ರಿಯೆ ಪ್ರಾರಂಭವಾಗಿದೆ. ಸುಮಾರು 10,000 ಮಹಿಳೆಯರು ಹೆಸರು ನೋಂದಾಯಿಸಿರುವ ಬಗ್ಗೆ ಮಾಹಿತಿ ಸಿಕ್ಕಿದೆ.

ಭಾರತೀಯ ನೌಕಾಪಡೆಗೆ ಆನ್‌ಲೈನ್ ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಜೂನ್ 15 ರಿಂದ ಆರಂಭವಾಗಿದ್ದು, ಜುಲೈ 30ರವರೆಗೂ ಕಾಲಾವಕಾಶವಿದೆ. ಅಗ್ನಿವೀರರ ನೇಮಕಾತಿಯಲ್ಲಿ ಪುರುಷರು ಮಹಿಳೆಯರೆಂಬ ಬೇಧ ಭಾವವಿರುವುದಿಲ್ಲ. ನೇಮಕಾತಿ ಲಿಂಗ ತಟಸ್ಥವಾಗಿರಲಿದೆ ಎಂದು ವೈಸ್ ಅಡ್ಮಿರಲ್ ದಿನೇಶ್ ತ್ರಿಪಾಠಿ ತಿಳಿಸಿದ್ದಾರೆ.

ಭಾರತೀಯ ನೌಕಾಪಡೆಯಲ್ಲಿ 30 ಮಹಿಳಾ ಅಧಿಕಾರಿಗಳು ವಿವಿಧ ಹುದ್ದೆಗಳನ್ನು ನಿಭಾಯಿಸುತ್ತಿದ್ದಾರೆ. ಹಾಗಾಗಿ ಅಗ್ನಿಪಥ್ ಯೋಜನೆಯಡಿಯಲ್ಲಿ ಮಹಿಳೆಯರನ್ನು ನೇಮಿಸಿಕೊಳ್ಳಲು ನಿರ್ಧರಿಸಿದ್ದೇವೆ. ಅವರನ್ನು ಯುದ್ಧನೌಕೆಗಳಲ್ಲಿಯೂ ನಿಯೋಜಿಸಲಾಗುವುದು ಎಂದು ತ್ರಿಪಾಠಿ ಅಭಯ ನೀಡಿದ್ದಾರೆ.

ಹುಬ್ಬಳ್ಳಿಯ ಹೋಟೆಲ್ ನಲ್ಲಿ ಸರಳ ವಾಸ್ತು ಗುರೂಜಿ ಚಂದ್ರಶೇಖರ್ ಹತ್ಯೆ

ನವೆಂಬರ್ 21 ರಿಂದ ಒಡಿಶಾದ INS ಚಿಲ್ಕಾದಲ್ಲಿ ನೌಕಾಪಡೆಯ ಮೊದಲ ಬ್ಯಾಚ್‌ನ ಅಗ್ನಿವೀರರಿಗೆ ತರಬೇತಿ ಆರಂಭವಾಗಲಿದೆ. ಆದ್ರೆ ‘ ಅಗ್ನಿಪಥ್ ಯೋಜನೆಯ ವಿರುದ್ಧ ಪ್ರತಿಭಟನೆ ಮತ್ತು ವಿಧ್ವಂಸಕ ಕೃತ್ಯಗಳ ಭಾಗವಾಗಿರುವ ಆಕಾಂಕ್ಷಿಗಳಿಗೆ ಸೇನೆಯಲ್ಲಿ ಸ್ಥಾನವಿಲ್ಲ’ ಎಂದು ಮಿಲಿಟರಿ ವ್ಯವಹಾರಗಳ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಲೆಫ್ಟಿನೆಂಟ್ ಜನರಲ್ ಅನಿಲ್ ಪುರಿ ಸ್ಪಷ್ಟಪಡಿಸಿದ್ದಾರೆ.

ಶಿಸ್ತು ಭಾರತೀಯ ಸೇನೆಯ ಅಡಿಯಾಯ.ಸೇನೆ ಸೇರಲು ಅರ್ಜಿ ಸಲ್ಲಿಸುವವರು ಹಿಂಸೆ, ಪ್ರತಿಭಟನೆ ಅಥವಾ ವಿಧ್ವಂಸಕ ಕೃತ್ಯಗಳಲ್ಲಿ ಭಾಗಿಯಾಗಿಲ್ಲ ಎಂಬ ಬಗ್ಗೆ ಪ್ರಮಾಣಪತ್ರ ನೀಡಬೇಕು. ಪೊಲೀಸರು ಇದನ್ನು ಪರಿಶೀಲನೆ ನಡೆಸಲಿದ್ದಾರೆ. ಆಕಾಂಕ್ಷಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದ್ದರೆ ಅಂಥವರು ಸೇನೆ ಸೇರಲು ಸಾಧ್ಯವಿಲ್ಲ ಎಂದು ಅನಿಲ್‌ ಪುರಿ ಹೇಳಿದ್ದಾರೆ.

Team Newsnap
Leave a Comment
Share
Published by
Team Newsnap

Recent Posts

ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ

2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್​ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More

May 18, 2024

SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ

ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More

May 17, 2024

ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More

May 17, 2024

ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್‌ನಲ್ಲಿ ಘೋಷಣೆ… Read More

May 16, 2024

ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ

ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More

May 16, 2024

ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ

ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More

May 16, 2024