ಇಂದು CWC ಸಭೆ ನಡೆಯಲಿದೆ. ಈ ಸಭೆಯ ಬಳಿಕ ಅಧಿಕೃತ ಘೋಷಣೆ ಮಾಡುವ ನಿರೀಕ್ಷೆಗಳಿವೆ ರಾಹುಲ್ ಗಾಂಧಿ ಅಧ್ಯಕ್ಷರಾಗಲು ನಿರಾಕರಿಸಿದ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.ಇದನ್ನು ಓದಿ –ಬೊಮ್ಮಾಯಿ ಸರ್ಕಾರದ ವಿರುದ್ಧ ಮತ್ತೆ 40% ಕಮೀಷನ್ ಗುಮ್ಮ : ಮೋದಿಗೆ ಪತ್ರ ಬರೆಯಲು ನಿರ್ಧಾರ
ಈ ಹಿಂದೆ ಘೋಷಣೆ ಮಾಡಿದಂತೆ ಆಗಸ್ಟ್ 22ರಿಂದ ಅಧ್ಯಕ್ಷರ ಆಯ್ಕೆಗೆ ಚುನಾವಣೆ ಪ್ರಕ್ರಿಯೆಗಳು ಆರಂಭವಾಗಬೇಕಿತ್ತು. ರಾಹುಲ್ ಗಾಂಧಿ ಅವರಿಗೆ ಮತ್ತೆ ಅಧಿಕಾರ ವಹಿಸಿಕೊಳ್ಳಲು ಕೆಲವು ಹಿರಿಯ ನಾಯಕರು ಮನವಿ ಮಾಡಿದ್ದರು. ಆದರೆ ರಾಹುಲ್ ಗಾಂಧಿ ನಿರಾಕರಿಸಿದ ಹಿನ್ನಲೆ ಚುನಾವಣೆ ಘೋಷಣೆ ವಿಳಂಬವಾಗಿದೆ.
ರಾಹುಲ್ ಗಾಂಧಿ ನಿರಾಕರಣೆ ಹಿನ್ನಲೆ ಪಕ್ಷದಲ್ಲಿ ಹಿರಿಯರಾಗಿರುವ ಹಾಗೂ ಸಿಎಂ ಸ್ಥಾನದಲ್ಲಿರುವ ಅಶೋಕ್ ಗೆಹ್ಲೋಟ್ ಅವರನ್ನು ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡಲು ಚಿಂತನೆಗಳು ನಡೆದಿವೆ. ಈ ಸಂಬಂಧ ಸೋನಿಯಾಗಾಂಧಿ ಕೂಡಾ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.
ಅಶೋಕ್ ಗೆಹ್ಲೋಟ್ಗೆ ಅಧ್ಯಕ್ಷ ಸ್ಥಾನ ನೀಡುವುದರಿಂದ ಸಿಎಂ ಸ್ಥಾನ ಖಾಲಿಯಾಗಲಿದ್ದು, ಈ ಜಾಗಕ್ಕೆ ಸಚಿನ್ ಪೈಲಟ್ ಅವರನ್ನು ಆಯ್ಕೆ ಮಾಡಿದ್ದಲ್ಲಿ ರಾಜಸ್ಥಾನ ರಾಜಕೀಯದಲ್ಲಿರುವ ಸಮಸ್ಯೆಯನ್ನು ಪರಿಹರಿಸಬಹುದು ಎಂದು ಕಾಂಗ್ರೆಸ್ ಹೈಕಮಾಂಡ್ ಲೆಕ್ಕಾಚಾರ ಹಾಕಿಕೊಂಡಿದೆ.
ಅಧ್ಯಕ್ಷ ಸ್ಥಾನಕ್ಕೆ ಅಂಬಿಕಾ ಸೋನಿ ಅವರ ಹೆಸರು ಕೇಳಿ ಬಂದಿದೆ. ಸೋನಿಯಾಗಾಂಧಿ ಅತ್ಯಾಪ್ತೆ ಹಾಗೂ ಹಿರಿಯ ನಾಯಕಿಯಾಗಿರುವುದರಿಂದ ಅವರ ಹೆಸರು ರೇಸ್ ನಲ್ಲಿ ಕೇಳಿ ಬಂದಿದೆ. ಆದರೆ ಅವರಿಗೆ ವಯಸ್ಸು, ಅನಾರೋಗ್ಯದ ಕಾರಣ ಅವರು ಈ ಆಫರ್ ಒಪ್ಪಿಕೊಳ್ಳುವುದು ಅನುಮಾನ ಎನ್ನಲಾಗುತ್ತಿದೆ.
ಬೆಂಗಳೂರು: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ (76) ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು ಮೂತ್ರಕೋಶ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದ ಅವರು… Read More
ರಾಯಚೂರು : ರಾಯಚೂರಿನ ತಾಪಮಾನ ಹೆಚ್ಚಳದಿಂದ ಇಬ್ಬರು ಮಕ್ಕಳು ಮೃತಪಟ್ಟಿರುವ ಘಟನೆ ನಡೆದಿದೆ. ಜನರು ಬಿಸಿ ಗಾಳಿಯಿಂದಾಗಿ ತತ್ತರಿಸುತ್ತಿದ್ದು ,… Read More
ಬೆಂಗಳೂರು : ರಾಜ್ಯದಲ್ಲಿ 14 ಕ್ಷೇತ್ರಗಳ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಮುಕ್ತಾಯವಾಗಿದ್ದು , ಮೇ 7ರಂದು ಉತ್ತರ… Read More
ಮೈಸೂರು: ಮೈಸೂರು ಕೊಡುಗು ಲೋಕಸಭಾ ಚುನಾವಣೆ ಶಾಂತಿಯುತವಾಗಿ ನಡೆದಿದ್ದು ಮೈಸೂರಿನ ಪಡುವಾರಹಳ್ಳಿಯಲ್ಲಿರುವ ಮಹಾರಾಣಿ ನಿರ್ವಹಣಾ ಕಾಲೇಜಿಗೆ ಚುನಾವಣಾ ಸಿಬ್ಬಂದಿ ಇವಿಎಂ,… Read More
ತಮಿಳನಾಡಿಗೆ 275 ಕೋಟಿ ರೂ.'ನೆರೆ ಪರಿಹಾರ' ಘೋಷಣೆ ನವದೆಹಲಿ : ಕೇಂದ್ರವು ಕರ್ನಾಟಕಕ್ಕೆ 3,454 ಕೋಟಿ ರೂ. ಬರಪರಿಹಾರ, ತಮಿಳಿನಾಡಿಗೆ… Read More
ಮಂಡ್ಯ : ನಿನ್ನೆ ನಡೆದ 14 ಲೋಕಸಭಾ ಕ್ಷೇತ್ರಗಳ ಪೈಕಿ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಶೇ.81.67 ಮತದಾನವಾಗಿದೆ ಕಳೆದ ಬಾರಿಗಿಂತ… Read More
This website uses cookies.
Leave a Comment