ಉಕ್ರೇನ್ ಮೇಲೆ ರಷ್ಯಾ ಯುದ್ಧ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ಉಕ್ರೇನ್ನಲ್ಲಿ ವಾಸವಾಗಿರುವ ಭಾರತೀಯ ಪ್ರಜೆಗಳನ್ನು ಕರೆತರಲು ಉಕ್ರೇನ್ಗೆ ಹೋಗುತ್ತಿದ್ದ ಏರ್ ಇಂಡಿಯಾ ವಿಮಾನ ಮಾರ್ಗಮಧ್ಯೆಯೇ ದೆಹಲಿಗೆ ವಾಪಸ್ ಆಗಿದೆ.
ಈಗಾಗಲೇ ಉಕ್ರೇನ್ನ ಪೂರ್ವ ಪ್ರದೇಶಗಳಲ್ಲಿ ರಷ್ಯಾದ ಮಿಲಿಟರಿ ಕಾರ್ಯಚರಣೆ ನಡೆಸುತ್ತಿದೆ.
ಈ ಮಧ್ಯೆ ಉಕ್ರೇನ್ ತನ್ನ ಭದ್ರತೆಗಾಗಿ ವಾಯುಪ್ರದೇಶವನ್ನು ಮುಚ್ಚಿದೆ. ಇದರಿಂದಾಗಿ ಸಾವಿರಾರು ಭಾರತೀಯರು ಉಕ್ರೇನ್ನಲ್ಲಿ ಸಿಲುಕಿಕೊಂಡಿದ್ದಾರೆ ಸ್ವದೇಶಕ್ಕೆ ಬರಲು ಕಾಯುತ್ತಿದ್ದಾರೆ.
ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಇಂದು ಬೆಳಗ್ಗೆ ಉಕ್ರೇನ್ ಮೇಲೆ ಮಿಲಿಟರಿ ದಾಳಿ ನಡೆಸುವಂತೆ ತನ್ನ ಸೇನೆಗೆ ಪುಟಿನ್ ಸೂಚನೆ ನೀಡಿದ್ದಾರೆ.
ಈ ಸೂಚನೆ ಬೆನ್ನಲ್ಲೇ ರಷ್ಯಾ ಸೇನೆಯು ವೈಮಾನಿಕ ದಾಳಿ ನಡೆಸಿದೆ. ಇದರಿಂದಾಗಿ ಉಕ್ರೇನ್ನ ಪೂರ್ವ ಪ್ರದೇಶಗಳಲ್ಲಿ ಮಿಲಿಟರಿ ಕಾರ್ಯಚರಣೆ ನಡೆಯುತ್ತಿದೆ. , ಎಲ್ಲಾ ವಾಣಿಜ್ಯ ವಿಮಾನಗಳು ಹೆಚ್ಚಿನ ಅಪಾಯದಲ್ಲಿವೆ. ಈ ಹಿನ್ನೆಲೆಯಲ್ಲಿ ಆದರೆ ಉಕ್ರೇನ್ಗೆ ಹೋಗುವ ಎಲ್ಲಾ ವಿಮಾನಗಳಿಗೆ ಏರ್ಮೆನ್ಗಳಿಗೆ ಸರ್ಕಾರ ಸೂಚನೆಯನ್ನು ನೀಡಿದ ನಂತರ ಏರ್ ಇಂಡಿಯಾ ವಿಮಾನವು ದೆಹಲಿಗೆ ವಾಪಾಸಾಗಲು ನಿರ್ಧರಿಸಿತು.
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ
- ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ
- ಪ್ರಜ್ವಲ್ ಪೆಂಡ್ರೈವ್ ಪ್ರಕರಣ : 10 ಪೆನ್ ಡ್ರೈವ್ ಪ್ರೀತಂ ಗೌಡ ಆಪ್ತರ ಮನೆಯಲ್ಲಿ ಪತ್ತೆ
- ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಕ್ಕೆ ಸಂಚು; ಮೈಸೂರಿನಲ್ಲಿ ಶಂಕಿತ ಉಗ್ರನನ್ನು ಬಂಧಿಸಿದ ಎನ್ಐಎ