ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಪುತ್ರಿ ಐಶ್ವರ್ಯ ಮತ್ತು ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರ ಅಳಿಯ ದಿವಗಂತ ಸಿದ್ದಾರ್ಥ್ ಹೆಗಡೆ ಪುತ್ರ ಅಮರ್ತ್ಯ ಹೆಗಡೆಯವರ ವಿವಾಹ ದಿನಾಂಕ ನಿಗದಿಯಾಗಿದೆ.
ಐಶ್ವರ್ಯ ಹಾಗೂ ಅಮರ್ಥ್ಯ ಹೆಗ್ಡೆ ಮದುವೆ ಫೆಬ್ರವರಿ 14 ರಂದು ನಿಶ್ಚಯವಾಗಿದೆ.
ಕಳೆದ ಗುರುವಾರ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆದ ನಿಶ್ಚಿತಾರ್ಥ ಸಮಾರಂಭದಲ್ಲಿ ಐಶ್ವರ್ಯ ಹಾಗೂ ಅಮರ್ಥ್ಯ ಗುರು- ಹಿರಿಯರ ಸಮ್ಮುಖದಲ್ಲಿ ವಜ್ರದ ಉಂಗುರ ಬದಲಾಯಿಸಿಕೊಂಡಿದ್ದರು.
ನಿಶ್ಚಿತಾರ್ಥ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನಾಯಕರಿಗಿಂತ ಬಿಜೆಪಿ ನಾಯಕರೇ ಹೆಚ್ಚಾಗಿ ಕಾಣಿಸಿಕೊಂಡಿದ್ದು ಕುತೂಹಲ ಮೂಡಿಸಿ ಅಚ್ಚರಿಗೆ ಕಾರಣವಾಗಿತ್ತು.
ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಸಚಿವ ಆರ್.ಅಶೋಕ್, ಸುಧಾಕರ್, ವಿ.ಸೋಮಣ್ಣ ಸೇರಿದಂತೆ ಅನೇಕ ಬಿಜೆಪಿ ನಾಯಕರು ನಿಶ್ಚಿತಾರ್ಥ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಮಗಳ ಮದುವೆಯ ಸಂಭ್ರಮ ದಲ್ಲಿದ್ದ ಡಿಕೆ ಶಿವಕುಮಾರ್ ಗೆ ಖುದ್ದು ವಿಚಾರಣೆಗೆ ಹಾಜರಾಗುವಂತೆ ಸಿಬಿಐ ಮತ್ತೆ ನೋಟಿಸ್ ಜಾರಿ ಮಾಡಿದೆ.
ಅಕ್ಟೋಬರ್ 5 ರಂದು ಡಿಕೆಶಿ ನಿವಾಸದ ಮೇಲೆ ದಾಳಿ ಮಾಡಿದ್ದ ಸಿಬಿಐ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನವೆಂಬರ್ 25 ರಂದು ಖುದ್ದು ವಿಚಾರಣೆಗೆ ಬರುವಂತೆ ನೋಟಿಸ್ ಜಾರಿ ಮಾಡಿದ್ದಾರೆ.
ಒತ್ತಡದಲ್ಲಿರುವ ಡಿಕೆಶಿ ಸಧ್ಯಕ್ಕೆ ನೆಮ್ಮದಿ ಎಂಬುದಿಲ್ಲ ಎನ್ನುವಂತಾಗಿದೆ
ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More
ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More
ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More
ಎಳ್ಳು ನೋಡಲು ಪುಟ್ಟದಾಗಿದ್ದು ಕಟುವಾದ ಯಾವ ವಾಸನೆಯೂ ಇಲ್ಲದ, ತನ್ನೊಡನೆ ಬೆರೆತ ಇತರ ವಸ್ತುಗಳ ಪರಿಮಳವನ್ನು ತನ್ನೊಡನೆ ಹೀರಿಕೊಳ್ಳುವ ವಿಶೇಷಗುಣ… Read More
ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,240 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ಇಂದು ಆರ್.ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಇಂದಿನಿಂದ… Read More
This website uses cookies.
Leave a Comment