ಕಾಲಿವುಡ್ ನಟ ಧನುಷ್ ಹಾಗೂ ಸೂಪರ್ ಸ್ಟಾರ್ ರಜನಿಕಾಂತ್ ಪುತ್ರಿ ಐಶ್ವರ್ಯಾ 18 ವಷ೯ಗಳ ಸುಧೀಘ೯ ದಾಂಪತ್ಯಕ್ಕೆ ಪರಸ್ಪರ ಒಪ್ಪಿಗೆ ಮೇರಿಗೆ ವಿಚ್ಛೇದನ ಪಡೆದು ದೂರವಾಗಿದ್ದಾರೆ.
2004 ರಲ್ಲಿ ಐಶ್ವರ್ಯಾ ಹಾಗೂ ಧನುಷ್ ಪ್ರೀತಿಸಿ ಮದುವೆಯಾಗಿದ್ದ ತಾವು ದೂರವಾಗುತ್ತಿರುವ ಬಗ್ಗೆ ಅಧಿಕೃತ ಮಾಹಿತಿಯನ್ನು ಧನುಷ್ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
ನಾವಿಬ್ಬರು 18 ವರ್ಷಗಳಿಂದ ಸ್ನೇಹಿತರಾಗಿ, ಪ್ರೇಮಿಗಳಾಗಿ, ದಂಪತಿಯಾಗಿ , ಪೋಷಕರಾಗಿ, ಪರಸ್ಪರ ಒಳ್ಳೆಯದನ್ನು ಬಯಸುತ್ತಾ, ಅರ್ಥಮಾಡಿಕೊಳ್ಳುತ್ತಾ, ಸಹಕರಿಸುತ್ತಾ ಜೀವನ ನಡೆಸಿದ್ದೇವೆ. ಒಬ್ಬರಿಗೆ ಒಬ್ಬರು ಆಸರೆಯಾಗಿದ್ದೇವೆ. ಇಂದು ನಮ್ಮಿಬ್ಬರ ದಾರಿ ಬೇರೆ ಬೇರೆಯಾಗಿದೆ. ನಾನು ಹಾಗೂ ಐಶ್ವರ್ಯಾ ಸಮಯ ತೆಗೆದುಕೊಂಡು ಕೊನೆಗೆ ತೀರ್ಮಾನಿಸಿ ಪರಸ್ಪರ ಒಪ್ಪಿ ದಾಂಪತ್ಯ ಜೀವನದಿಂದ ದೂರಾಗುತ್ತಿದ್ದೇವೆ. ನಮ್ಮ ನಿರ್ಧಾರಕ್ಕೆ ನಿಮ್ಮ ಬೆಂಬಲ ಹಾಗೂ ಸಹಕಾರ ಇರಲಿ ಎಂದು ಆಶಿಸುತ್ತೇನೆ.
ದಯಮಾಡಿ ನಮ್ಮ ಖಾಸಗಿ ನಿರ್ಧಾರವನ್ನು ಗೌರವಿಸಿ ಎಂದು ಧನುಷ್ ಟ್ವೀಟ್ ಮಾಡಿದ್ದಾರೆ.
ಧನುಷ್ ಅವರ ಪೋಸ್ಟ್ನ್ನು ಇನ್ಸ್ಟಾಗ್ರಾಮ್ನಲ್ಲಿ ಶೇರ್ ಮಾಡಿಕೊಂಡ ಐಶ್ವರ್ಯಾ, ಇದಕ್ಕೆ ಶೀರ್ಷಿಕೆ ಅಗತ್ಯವಿಲ್ಲ. ನಿಮ್ಮ ತಿಳುವಳಿಕೆ ಮತ್ತು ನಿಮ್ಮ ಪ್ರೀತಿ ಮಾತ್ರ ಅಗತ್ಯ ಎಂದು ಬರೆದುಕೊಂಡು ದಾಂಪತ್ಯ ಜೀವನದಿಂದ ಇಬ್ಬರು ದೂರವಾಗುತ್ತಿರುವ ಕುರಿತಾಗಿ ತಿಳಿಸಿದ್ದಾರೆ.
ದಂಪತಿಗಳಿಗೆ 2006 ಹಾಗೂ 2010 ರಲ್ಲಿ ಜನಿಸಿದ ಯಾತ್ರಾ ಮತ್ತು ಲಿಂಗ ಎಂಬ ಇಬ್ಬರು ಗಂಡು ಮಕ್ಕಳಿದ್ದಾರೆ. ಐಶ್ವರ್ಯಾ ಅವರ ಮೊದಲ ನಿರ್ದೇಶನದ ‘3’ ನಲ್ಲಿ ಧನುಷ್ ಕೆಲಸ ಮಾಡಿದ್ದರು ಮತ್ತು ಚಿತ್ರದ ‘ಕೊಲವೆರಿ ಡಿ’ ಹಾಡು ಸೂಪರ್ ಹಿಟ್ ಆಗಿ ಎಲ್ಲಾ ಕಡೆ ಸದ್ದು ಮಾಡಿತ್ತು.
ಎರಡನೇ ಪುತ್ರಿ ಸೌಂದರ್ಯ ಕೂಡ ಮೊದಲ ಮದುವೆ ಮುರಿದುಕೊಂಡು ಕೆಲವೇ ವರ್ಷಗಳ ಹಿಂದೆ ಎರಡನೇ ವಿವಾಹವಾಗಿದ್ದರು.
ರಾಯಚೂರು : ರಾಯಚೂರಿನ ತಾಪಮಾನ ಹೆಚ್ಚಳದಿಂದ ಇಬ್ಬರು ಮಕ್ಕಳು ಮೃತಪಟ್ಟಿರುವ ಘಟನೆ ನಡೆದಿದೆ. ಜನರು ಬಿಸಿ ಗಾಳಿಯಿಂದಾಗಿ ತತ್ತರಿಸುತ್ತಿದ್ದು ,… Read More
ಬೆಂಗಳೂರು : ರಾಜ್ಯದಲ್ಲಿ 14 ಕ್ಷೇತ್ರಗಳ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಮುಕ್ತಾಯವಾಗಿದ್ದು , ಮೇ 7ರಂದು ಉತ್ತರ… Read More
ಮೈಸೂರು: ಮೈಸೂರು ಕೊಡುಗು ಲೋಕಸಭಾ ಚುನಾವಣೆ ಶಾಂತಿಯುತವಾಗಿ ನಡೆದಿದ್ದು ಮೈಸೂರಿನ ಪಡುವಾರಹಳ್ಳಿಯಲ್ಲಿರುವ ಮಹಾರಾಣಿ ನಿರ್ವಹಣಾ ಕಾಲೇಜಿಗೆ ಚುನಾವಣಾ ಸಿಬ್ಬಂದಿ ಇವಿಎಂ,… Read More
ತಮಿಳನಾಡಿಗೆ 275 ಕೋಟಿ ರೂ.'ನೆರೆ ಪರಿಹಾರ' ಘೋಷಣೆ ನವದೆಹಲಿ : ಕೇಂದ್ರವು ಕರ್ನಾಟಕಕ್ಕೆ 3,454 ಕೋಟಿ ರೂ. ಬರಪರಿಹಾರ, ತಮಿಳಿನಾಡಿಗೆ… Read More
ಮಂಡ್ಯ : ನಿನ್ನೆ ನಡೆದ 14 ಲೋಕಸಭಾ ಕ್ಷೇತ್ರಗಳ ಪೈಕಿ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಶೇ.81.67 ಮತದಾನವಾಗಿದೆ ಕಳೆದ ಬಾರಿಗಿಂತ… Read More
ಮಂಡ್ಯ : ಮಂಡ್ಯ ಲೋಕಸಭಾ ಕ್ಷೇತ್ರ 9 ಗಂಟೆಗೆ ಶೇ. 7.70% ಮತದಾನ Join WhatsApp Group ವಿಧಾನಸಭಾ ಕ್ಷೇತ್ರವಾರು… Read More
This website uses cookies.
Leave a Comment