January 28, 2026

Newsnap Kannada

The World at your finger tips!

BJP , JDS , alliance

ಐಶ್ವರ್ಯ ಗೌಡ ಪ್ರಕರಣ: ಸರ್ಕಾರದ ವಿರುದ್ಧ ಹೆಚ್‌ಡಿಕೆ ವಾಗ್ದಾಳಿ

Spread the love

ಬೆಂಗಳೂರು: ಐಶ್ವರ್ಯ ಗೌಡ ಪ್ರಕರಣದಲ್ಲಿ ನಿಖಿಲ್ ಮತ್ತು ಅನಿತಾ ಕುಮಾರಸ್ವಾಮಿ ಹೆಸರು ಪ್ರಸ್ತಾಪವಾಗಿರುವ ಕುರಿತು ಮಾಜಿ ಮುಖ್ಯಮಂತ್ರಿ ಹೆಚ್‌.ಡಿ. ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಹೆಚ್‌.ಡಿ. ಕುಮಾರಸ್ವಾಮಿ, “ಚಿನ್ನ-ಬೆಳ್ಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಖಿಲ್ ಮತ್ತು ಅನಿತಾ ಕುಮಾರಸ್ವಾಮಿ ಪರಿಚಯದ ಕುರಿತು ಸುದ್ದಿಗಳು ಹರಿದಾಡುತ್ತಿವೆ. ಐಶ್ವರ್ಯ ಗೌಡ ಅವರು ಯಾವಾಗ, ಎಲ್ಲಿ ಅವರನ್ನು ಭೇಟಿ ಮಾಡಿದರು ಎಂಬುದರ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ.

ಮಾಧ್ಯಮಗಳಲ್ಲಿ ಸುದ್ದಿ ಬಂದ ನಂತರ ಮಾತ್ರ ನಾನು ಈ ಪ್ರಕರಣದ ಬಗ್ಗೆ ಮಾಹಿತಿ ಪಡೆದೆ. 2016ರಲ್ಲಿ ಪ್ರಕರಣ ನಡೆದಿದೆ, ಆದರೆ ನಾನೇ 2018ರಲ್ಲಿ ಮುಖ್ಯಮಂತ್ರಿಯಾಗಿದ್ದಾಗ ಈ ವಿಷಯ ನನಗೆ ಯಾಕೆ ತಿಳಿಸಿದ್ದಾರೆ , ಇಲ್ಲ?” ಎಂದು ಪ್ರಶ್ನಿಸಿದರು.

ಹೆಚ್‌.ಡಿ. ಕುಮಾರಸ್ವಾಮಿ ಅವರು, “ಈ ಸರ್ಕಾರ ಯಾವುದೇ ವಿಚಾರದಲ್ಲಿ ತನಿಖೆಯನ್ನು ಸೂಕ್ತವಾಗಿ ನಡೆಸುತ್ತಿಲ್ಲ. ಇವರು ಯಾರನ್ನು ಬೇಕಾದರೂ ತಮ್ಮ ಅಜೆಂಡಾಕ್ಕೆ ತಕ್ಕಂತೆ ಬಳಸುತ್ತಿದ್ದಾರೆ. 2016ರಲ್ಲಿ ನಡೆದ ಪ್ರಕರಣಕ್ಕೆ ಈಗ ನನ್ನ ಕುಟುಂಬದ ಸದಸ್ಯರ ಹೆಸರನ್ನು ಎಳೆಯುತ್ತಿರುವುದು ರಾಜಕೀಯ ಪ್ರೇರಿತ ಕೃತ್ಯ. ನಿಖಿಲ್ ಮತ್ತು ಅನಿತಾ ಅವರ ಮುಖಗಳನ್ನೂ ನಾನು ಈಗಾಗಲೇ ನೋಡಿಲ್ಲ. ಇಂತಹ ಸುಳ್ಳು ಆರೋಪಗಳನ್ನು ಮಾಡಿಸುತ್ತಿರುವುದರ ಹಿಂದೆ ಯಾರಿದ್ದಾರೆ?” ಎಂದು ಹೇಳಿದ್ದಾರೆ. ಇದನ್ನು ಓದಿ -ಸಾರಿಗೆ ನೌಕರರಿಗೆ ಸರ್ಕಾರದ ಭರವಸೆ: 2 ಸಾವಿರ ಕೋಟಿ PF ನಿಧಿ ಬಿಡುಗಡೆ

ಈ ವಿಚಾರವನ್ನು ರಾಜಕೀಯ ಪ್ರೇರಿತ ಕೃತ್ಯ ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು, “ಸರ್ಕಾರದ ಈ ಹಾಸ್ಯಾಸ್ಪದ ನಡೆ ಅವರನ್ನು ಯಾವ ಮಟ್ಟಕ್ಕಾಗಿಯೂ ತೊಡಗಿಸಿಕೊಳ್ಳುತ್ತದೆ ಎಂಬುದಕ್ಕೆ ನಾನೇ ಸಾಕ್ಷಿಯಾಗಿದ್ದೇನೆ. ಇದು ಸರ್ಕಾರವೇ?” ಎಂದು ತೀವ್ರ ಟೀಕಿಸಿದ್ದಾರೆ.

error: Content is protected !!