ದೇಶಾದ್ಯಂತ 2022ರ ಅಕ್ಷಯ ತೃತೀಯದಂದು 15,000 ಕೋಟಿ ರೂ. ಮೌಲ್ಯದ ಆಭರಣ ಮಾರಾಟವಾಗಿದೆ.
ಇದು ಕೋವಿಡ್ನಿಂದ ವಿಧಿಸಲಾದ ಲಾಕ್ಡೌನ್ ಬಳಿಕದ ಅತಿ ದೊಡ್ಡ ಆಭರಣ ವ್ಯವಹಾರವಾಗಿದೆ ಎಂದು ಅಖಿಲ ಭಾರತ ವ್ಯಾಪರಗಳ ಒಕ್ಕೂಟ(ಸಿಎಐಟಿ) ತಿಳಿಸಿದೆ.
ಕೋವಿಡ್ ನಿಂದಾಗಿ ದೇಶಾದ್ಯಂತ ಚಿನ್ನದ ಮಾರಾಟದಲ್ಲಿ ಶೇ.80 ರಷ್ಟು ಭಾರೀ ಇಳಿಕೆ ಕಂಡು ಬಂದಿತ್ತು. ಈ ಬಾರಿ ಕೋವಿಡ್ ಹಾವಳಿ ಕಡಿಮೆಯಿರುವುದರಿಂದ ಹಾಗೂ ಹಬ್ಬದ ಪ್ರಯುಕ್ತ ರಜೆ ಇದ್ದಿದ್ದರಿಂದ ಚಿನ್ನ ಖರೀದಿಗೆ ಜನರು ಮುಗಿ ಬಿದ್ದಿದ್ದಾರೆ. ದೇಶಾದ್ಯಂತ ಒಂದೇ ದಿನ ಬರೋಬ್ಬರಿ 30 ಟನ್ ಚಿನ್ನ ಮಾರಾಟವಾಗಿದೆ.
2 ತಿಂಗಳ ಹಿಂದೆ ಚಿನ್ನದ ಬೆಲೆ 55,000 ದಿಂದ 58,000 ರೂ. ವರೆಗೂ ತಲುಪಿತ್ತು. ಇದೀಗ ಚಿನ್ನದ ಬೆಲೆ 50,000 ರೂ.ಗೆ ಇಳಿಕೆಯಾಗಿರುವುದರಿಂದ ಹಾಗೂ ಇದು ಮದುವೆ ಸಮಾರಂಭಗಳಂತಹ ಸಮಯವಾಗಿರುವುದರಿಂದ ಹೆಚ್ಚಿನ ಪ್ರಮಾಣದಲ್ಲಿ ಚಿನ್ನಾಭರಣ ಮಾರಾಟವಾಗಿದೆ
ಕರ್ನಾಟಕದಲ್ಲೂ ಅಕ್ಷಯ ತೃತೀಯ ಅಂಗವಾಗಿ ಜನರು ಚಿನ್ನಾಭರಣ ಖರೀದಿಗೆ ಮುಗಿಬಿದ್ದಿದ್ದಾರೆ. ಮಂಗಳವಾರ ಒಂದೇ ದಿನ ಸುಮಾರು 1,680 ಕೋಟಿ ರೂ. ವ್ಯವಹಾರ ನಡೆದಿದೆ. ಬೆಂಗಳೂರಿನಲ್ಲಿ 650 ಕೋಟಿ ರೂ. ವ್ಯಾಪಾರ ನಡೆದಿದೆ.
ಮೈಸೂರು : ಉದಯಗಿರಿ ಪೊಲೀಸ್ ಠಾಣೆಯಲ್ಲಿ ಭ್ರೂಣ ಲಿಂಗ ಪತ್ತೆ ಹಾಗೂ ಗರ್ಭಪಾತ ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ 17 ಮಂದಿ… Read More
ಬೆಂಗಳೂರು: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ (76) ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು ಮೂತ್ರಕೋಶ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದ ಅವರು… Read More
ರಾಯಚೂರು : ರಾಯಚೂರಿನ ತಾಪಮಾನ ಹೆಚ್ಚಳದಿಂದ ಇಬ್ಬರು ಮಕ್ಕಳು ಮೃತಪಟ್ಟಿರುವ ಘಟನೆ ನಡೆದಿದೆ. ಜನರು ಬಿಸಿ ಗಾಳಿಯಿಂದಾಗಿ ತತ್ತರಿಸುತ್ತಿದ್ದು ,… Read More
ಬೆಂಗಳೂರು : ರಾಜ್ಯದಲ್ಲಿ 14 ಕ್ಷೇತ್ರಗಳ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಮುಕ್ತಾಯವಾಗಿದ್ದು , ಮೇ 7ರಂದು ಉತ್ತರ… Read More
ಮೈಸೂರು: ಮೈಸೂರು ಕೊಡುಗು ಲೋಕಸಭಾ ಚುನಾವಣೆ ಶಾಂತಿಯುತವಾಗಿ ನಡೆದಿದ್ದು ಮೈಸೂರಿನ ಪಡುವಾರಹಳ್ಳಿಯಲ್ಲಿರುವ ಮಹಾರಾಣಿ ನಿರ್ವಹಣಾ ಕಾಲೇಜಿಗೆ ಚುನಾವಣಾ ಸಿಬ್ಬಂದಿ ಇವಿಎಂ,… Read More
ತಮಿಳನಾಡಿಗೆ 275 ಕೋಟಿ ರೂ.'ನೆರೆ ಪರಿಹಾರ' ಘೋಷಣೆ ನವದೆಹಲಿ : ಕೇಂದ್ರವು ಕರ್ನಾಟಕಕ್ಕೆ 3,454 ಕೋಟಿ ರೂ. ಬರಪರಿಹಾರ, ತಮಿಳಿನಾಡಿಗೆ… Read More
This website uses cookies.
Leave a Comment