ಹಿಂದೂಗಳ ಪವಿತ್ರ ದಿನಗಳಲ್ಲಿ ಅತ್ಯಂತ ಪವಿತ್ರವಾದ ಮೂರುವರೆ ಶುಭ ಮುಹೂರ್ತಗಳಲ್ಲಿ ಯುಗಾದಿ, ಅಕ್ಷಯ ತೃತೀಯ, ವಿಜಯ ದಶಮಿ ಮತ್ತು ಬಲಿಪಾಡ್ಯಮಿ ಅರ್ಧ ದಿವಸ ಶುಭಕಾರ್ಯಗಳಿಗೆ ಪ್ರಶಸ್ತವಾದ ದಿನಗಳು. ಈ ದಿನಗಳು ಪಂಚಾಂಗ ನೋಡುವ ಅವಶ್ಯಕತೆ ಇರುವುದಿಲ್ಲ ಎಂದೇ ನಂಬಲಾಗಿದೆ.
ಈ ದಿವಸ ಸಾಮಾನ್ಯವಾಗಿ ಶುಭ ಕೆಲಸಗಳನ್ನು ಮಾಡಿದರೆ ಅಕ್ಷಯವಾಗಿ ಪರಿಣಮಿಸುವುದು. ಈ ದಿವಸ ಜೀವನದ ಹೊಸ ಹೊಸ ಉದ್ಯೋಗಗಳನ್ನು ಪ್ರಾರಂಭಿಸುವುದು ಶುಭಕರ. ಈ ತೃತೀಯ ತಿಥಿ ಜತೆ ರೋಹಿಣಿ ನಕ್ಷತ್ರವಿದ್ದರೆ, ಮಹಾಪುಣ್ಯಕರವೆಂದು ಪುರಾಣದಲ್ಲಿ ಹೇಳಲಾಗಿದೆ.
ಸಮೃದ್ಧಿಯ ಸಂಕೇತವಾಗಿರುವ ಅಕ್ಷಯ ತೃತೀಯ ದಿನಕ್ಕೆ ಪೌರಾಣಿಕ ಮತ್ತು ಧಾರ್ಮಿಕ ಹಿನ್ನೆಲೆ ಇದೆ. ಈ ದಿನ ಕೈಗೊಳ್ಳುವ ಶುಭಕಾರ್ಯಗಳು ಯಶಸ್ಸು ತಂದುಕೊಡುತ್ತವೆ ಎಂಬ ನಂಬಿಕೆ.
ಪುರಾಣಗಳಲ್ಲಿ ಉಲ್ಲೇಖವಾಗಿರುವ ಅಕ್ಷಯ ತೃತೀಯದ ಮಹತ್ವ
ದ್ವಾಪರ ಯುಗದಲ್ಲಿ ಸುಧಾಮ ಕೃಷ್ಣನಿಂದ ಸಹಾಯ ಪಡೆಯಲು ದ್ವಾರಕೆಗೆ ಬಂದ ದಿನವೂ ಅಕ್ಷಯ ತೃತೀಯವಾಗಿತ್ತು. ಅಂದು ಶ್ರೀಕೃಷ್ಣನ ಅರಮನೆಯ ವೈಭೋಗ ಕಂಡು ಬಡವನಾದ ತಾನು ತಂದಿದ್ದ ಅವಲಕ್ಕಿಯನ್ನು ಕೃಷ್ಣನಿಗೆ ಕೊಡಲು ಹಿಂಜರಿದು ಆತನಿಂದ ಸಹಾಯವನ್ನು ಯಾಚಿಸದೆ ಸುಧಾಮ ಮನೆಗೆ ಹಿಂದಿರುಗುತ್ತಾನೆ.ಆದರೆ, ಆತನಿಗೆ ಅಚ್ಚರಿ ಕಾದಿರುತ್ತದೆ. ಅವನ ಪುಟ್ಟ ಗುಡಿಸಲು ಅರಮನೆಯಾಗಿ ಬದಲಾಗಿರುತ್ತದೆ. ಸುಧಾಮನ ಸತ್ಯ, ಸರಳತೆಗೆ ಕೃಷ್ಣ ಕೊಡುಗೆಯನ್ನೇ ನೀಡಿರುತ್ತಾನೆ. ಮಂಗಳಕರವಾದ ಅಕ್ಷಯ ತೃತೀಯದಲ್ಲಿ ನಾವು ಗಳಿಸುವ ಸ್ನೇಹ, ಸಂತಸ, ಸಂಪತ್ತು ಯಾವುದೇ ಆಗಿರಲಿ. ಅದು ಅಕ್ಷಯವಾಗುತ್ತದೆ.
ಪಾಂಡವರು ವನವಾಸದಲ್ಲಿದ್ದಾಗ ಕೃಷ್ಣನ ಆದೇಶದಂತೆ ಸೂರ್ಯನನ್ನು ಪ್ರಾರ್ಥಿಸಿ, ದ್ರೌಪದಿ ಅಕ್ಷಯ ಪಾತ್ರೆ ಪಡೆದಿದ್ದು ಅಕ್ಷಯ ತೃತೀಯ ದಿವಸವೇ ಆಗಿದೆ. ಪಾಂಡವರು ತಮ್ಮ ವನವಾಸ, ಅಜ್ಞಾತವಾಸದ ನಂತರ ಶಸ್ತ್ರಾಸ್ತ್ರಗಳನ್ನು ಪುನಃ ಪಡೆದಿದ್ದು ಅಕ್ಷಯ ತೃತೀಯದಂದು. ಚಾಮುಂಡೇಶ್ವರಿ ರಾಕ್ಷಸರನ್ನು ಸಂಹರಿಸಿದ್ದು ಕೂಡ ಅಕ್ಷಯ ತೃತೀಯ ದಿನದಂದೇ.
ಬದರಿಯಲ್ಲಿ ಈ ಶುಭದಿನದಂದು ಮಂದಿರದ ದ್ವಾರ ತೆಗೆದು ನಾರಾಯಣನ ಅನುಗ್ರಹಕ್ಕೆ ಪಾತ್ರರಾಗಲು ಅವಕಾಶ ನೀಡುವುದರಿಂದ ಮುಕ್ತಿದ್ವಾರವನ್ನು ತೆಗೆಯುವ ಶುಭತಿಥಿಯೂ ಹೌದು.
ಈ ಅಕ್ಷಯ ತೃತೀಯ ದಿವಸ ರವಿ ಮತ್ತು ಚಂದ್ರ ಏಕಕಾಲದಲ್ಲಿ ಅತ್ಯುಚ್ಛ ಪ್ರಮಾಣ ತಲುಪಿ ಉಚ್ಛರಾಶಿಯಲ್ಲಿ ಉಜ್ವಲತೆ ಉಂಟಾಗುವುದರಿಂದ ಎಲ್ಲಾ ಶುಭ ಕಾರ್ಯಗಳಿಗೆ ಅತ್ಯಂತ ಪ್ರಶಸ್ತವಾಗಿರುತ್ತದೆ. ರವಿ ಆತ್ಮ ಮತ್ತು ದೇಹಕಾರಕ, ಚಂದ್ರ ಮನಸ್ಸುಕಾರಕ, ದೇಹ ಮತ್ತು ಮನಸ್ಸು ಪರಿಪೂರ್ಣತೆ ಹೊಂದುವ ದಿವಸವಾಗಿದೆ.
ಬೆಂಗಳೂರು : ಕೋರಮಂಗಲದ ಆರನೇ ಬ್ಲಾಕ್ ನಲ್ಲಿ , ಕಿರುಕುಳದ ದೂರು ನೀಡಿದ ಪತ್ನಿಯನ್ನು ಪೊಲೀಸ್ ಠಾಣೆ ಎದುರಲ್ಲೇ ಪತಿ… Read More
ನವದೆಹಲಿ ,ಮೇ 3 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,250 ರೂಪಾಯಿ ದಾಖಲಾಗಿದೆ. 24… Read More
ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More
ಹಾಸನ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಕುರಿತು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದ ಮಾಜಿ… Read More
ನವದೆಹಲಿ ,ಮೇ 2 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,550 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ವಿದ್ಯಾರ್ಥಿಯೊಬ್ಬ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಪಿಹೆಚ್ಡಿ (PhD) ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪವಾಗಿ ಮೃತಪಟ್ಟಿದ್ದಾನೆ. ರಂಗನಾಥ್ ನಾಯಕ್ (27)… Read More
This website uses cookies.
Leave a Comment