ಮಲಯಾಳಂ ಚಿತ್ರರಂಗದ ನಿರ್ದೇಶಕ ಅಲಿ ಅಕ್ಬರ್ ಹಾಗೂ ಅವರ ಪತ್ನಿ ಹಿಂದೂ ಧರ್ಮಕ್ಕೆ ಮತಾಂತರಗೊಂಡಿದ್ದಾರೆ.
ಕಳೆದ ಕೆಲ ದಿನಗಳ ಹಿಂದೆಯಷ್ಟೇ ಅಲಿ ಅಕ್ಬರ್ ತಾವು ಹಿಂದೂ ಧರ್ಮಕ್ಕೆ ಮತಾಂತರ ಆಗುವುದಾಗಿ ಹೇಳಿಕೊಂಡಿದ್ದರು.
ಅದರಂತೇ ಇದೀಗ ಅವರು ಹಿಂದೂ ಧರ್ಮಕ್ಕೆ ಮತಾಂತರಗೊಂಡಿದ್ದಾರೆ.
ಹಿಂದೂ ಸೇವಾ ಕೇಂದ್ರದ ಸ್ಥಾಪಕ ಪ್ರತೀಶ್ ವಿಶ್ವನಾಥ್ ಅವರು ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಈ ವಿಚಾರವನ್ನು ಹಂಚಿಕೊಂಡಿದ್ದಾರೆ.
ಅಲಿ ಅಕ್ಬರ್ ಪೂಜೆ, ಹೋಮ ಮಾಡುವ ಫೋಟೋಗಳನ್ನು ಶೇರ್ ಮಾಡಿ “ಇತಿಹಾಸ ಈಗ ತಾನಾಗಿಯೇ ಮರುಕಳಿಸುತ್ತಿದೆ. ಅಲಿ ಅಕ್ಬರ್ ಈಗ ರಾಮಸಿಂಹನ್” ಎಂದು ಬರೆದುಕೊಂಡಿದ್ದಾರೆ.
ಹಿಂದೂ ಧರ್ಮಕ್ಕೆ ಮತಾಂತರ ಆದ ನಂತರ ಅಲಿ ಅಕ್ಬರ್ ತಮ್ಮ ಹೆಸರನ್ನು ರಾಮಸಿಂಹನ್ ಎಂದು ಬದಲಾಯಿಸಿಕೊಂಡಿದ್ದಾರೆ.
ಅಲಿ ಅಕ್ಬರ್ ಅವರು ಹಿಂದೂ ಧಮಕ್ಕೆ ಯಾವ ಉದ್ದೇಶಕ್ಕಾಗಿ ಮತಾಂತರ ಆಗಲು ಬಯಸಿದ್ದರು ಎಂಬುದನ್ನು ಕೂಡ ಅವರು ಈ ಹಿಂದೆಯೇ ತಿಳಿಸಿದ್ದರು.
ಮಿಲಿಟರಿ ಅಧಿಕಾರಿ ಬಿಪಿನ್ ರಾವತ್ ನಿಧನಕ್ಕೆ ಸಂಬಂಧಿಸಿದ ಸೋಶಿಯಲ್ ಮೀಡಿಯಾ ಪೋಸ್ಟ್ಗಳಿಗೆ ಕೆಲವು ಮುಸ್ಲಿಮರು ಖುಷಿಯ ಎಮೋಜಿಗಳ ಕಮೆಂಟ್ ಮಾಡಿದ್ದನ್ನು ಅಲಿ ಅಕ್ಬರ್ ಖಂಡಿಸಿದ್ದರು.
ಬಿಪಿನ್ ರಾವತ್ ಅವರ ಸಾವಿಗೆ ಅಗೌರವ ಸೂಚಿಸಿದ ಕೆಲವು ದೇಶವಿರೋಧಿ ಮುಸ್ಲಿಮರ ಕೃತ್ಯವನ್ನು ಯಾವುದೇ ಮುಸ್ಲಿಂ ನಾಯಕರೂ ಖಂಡಿಸಿಲ್ಲ ಈ ಬಗ್ಗೆ ಅಲಿ ಅಕ್ಬರ್ ಆಕ್ರೋಶ ವ್ಯಕ್ತಪಡಿಸಿದ್ದರು.
ಈ ಕಾರಣಕ್ಕಾಗಿ ಮುಸ್ಲಿಂ ಧರ್ಮದಲ್ಲಿನ ನಂಬಿಕೆಯನ್ನು ಕೈ ಬಿಡುವುದಾಗಿ ಅಲಿ ಅಕ್ಬರ್ ಹೇಳಿದ್ದರು.
ಮದ್ದೂರು : ಎಸ್ ಎಸ್ ಎಲ್ ಸಿ ಪರೀಕ್ಷೆ ಯಲ್ಲಿ ಕಡಿಮೆ ಅಂಕ ಬಂದಿದೆ ಎಂದು ಮನನೊಂದ ವಿ ಇಬ್ಬರ… Read More
ಬೆಂಗಳೂರು : ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿ ಸದ್ಯ ನಾಯಾಂಗ ಬಂಧನದಲ್ಲಿರುವ ಮಾಜಿ ಸಚಿವ ಹೆಚ್ಡಿ ರೇವಣ್ಣ ಸೋಮವಾರದವರೆಗೆ… Read More
ಎಸ್ಎಸ್ಎಲ್ ಸಿ 2024ರ ಫಲಿತಾಂಶದಲ್ಲಿ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.ಉಡುಪಿಗೆ ಪ್ರಥಮ ಸ್ಥಾನ ಲಭ್ಯವಾಗಿದೆ.8,59,967 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಅವರಲ್ಲಿ… Read More
ಬೆಂಗಳೂರು : ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣ ಸಂಬಂಧ ನ್ಯಾಯಾಂಗ ಬಂಧನಕ್ಕೊಳಗಾಗಿರುವ ಜೆಡಿಎಸ್ ಶಾಸಕ ಹಾಗೂ ಮಾಜಿ ಸಚಿವ ಹೆಚ್.… Read More
ಬೆಂಗಳೂರು: ನಾಳೆ ( ಮೇ 9 ) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ SSLC ಪರೀಕ್ಷೆ-… Read More
ರಾಯಚೂರು: ತಾಲೂಕಿನ ಹೆಂಬೆರಾಳ ಗ್ರಾಮದಲ್ಲಿ ಈಜು ಕಲಿಯಲು ಹೋಗಿದ್ದ ಬಾಲಕ ನೀರುಪಾಲಾದ ಘಟನೆ ನಡೆದಿದೆ. ವಿನಾಯಕ (10) ಜೇಗರ್ಕಲ್ ಮಲ್ಲಾಪೂರು… Read More
This website uses cookies.
Leave a Comment