October 17, 2024

Newsnap Kannada

The World at your finger tips!

rto , lokayukta , Karnataka

ಲಂಚದ ಆರೋಪ : ರಾಜ್ಯದ ವಿವಿಧ RTO ಚೆಕ್‌ಪೋಸ್ಟ್‌ಗಳಲ್ಲಿ ಲೋಕಾಯುಕ್ತ ದಾಳಿ

Spread the love

ಬೀದರ್: ಇಂದು ಬೆಳಗಿನ ಜಾವ, ರಾಜ್ಯದ ವಿವಿಧ ಜಿಲ್ಲೆಗಳ ಆರ್‌ಟಿಒ ಚೆಕ್‌ಪೋಸ್ಟ್‌ಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳ ತಂಡ ದಾಳಿ ನಡೆಸಿದೆ.

ಆರ್‌ಟಿಒ ಚೆಕ್‌ಪೋಸ್ಟ್‌ಗಳಲ್ಲಿ ಲಂಚ ವಸೂಲಿಯ ಆರೋಪ ಬಂದಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯದ ಬೀದರ್, ಬಳ್ಳಾರಿ, ಕೋಲಾರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಲಾಗಿದೆ.

ಬೀದರ್:

ಬೀದರ್ ಜಿಲ್ಲೆಯ ಹುಮ್ನಾಬಾದ್‌ ಹೊರ ವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ 9 ರ ಆರ್‌ಟಿಒ ಚೆಕ್‌ಪೋಸ್ಟ್‌ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸಾರಿಗೆ ವಾಹನ ಸವಾರರಿಂದ ಹಣ ವಸೂಲಿ ಹಾಗೂ ಸಹಾಯಕ ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ ಲಂಚ ವಸೂಲಿಯ ಆರೋಪದ ಮೇಲೆ ಈ ದಾಳಿ ನಡೆದಿದೆ.
ಲೋಕಾಯುಕ್ತ ಎಸ್ಪಿ ಬಿ.ಕೆ. ಉಮೇಶ್‌ ನೇತೃತ್ವದಲ್ಲಿ ನಾಲ್ಕು ಅಧಿಕಾರಿಗಳ ತಂಡ ಈ ದಾಳಿಯನ್ನು ನಡೆಸಿ, ಆರ್‌ಟಿಒ ಕಚೇರಿಯ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.

ಬಳ್ಳಾರಿ :

ಬಳ್ಳಾರಿ ತಾಲೂಕಿನ ಪಿಡಿ ಹಳ್ಳಿ ಸಮೀಪದ ಆರ್‌ಟಿಒ ಚೆಕ್‌ಪೋಸ್ಟ್ ಮೇಲೂ ಲೋಕಾಯುಕ್ತ ತಂಡ ದಾಳಿ ನಡೆಸಿದ್ದು, ಮಧ್ಯರಾತ್ರಿ 2 ಗಂಟೆಗೆ ದಾಳಿ ಪ್ರಾರಂಭವಾಗಿದೆ. ಚೆಕ್‌ಪೋಸ್ಟ್‌ನಲ್ಲಿ ಸಂಗ್ರಹಿಸಲಾಗಿದ್ದ ಹಣವನ್ನು ವಶಪಡಿಸಿಕೊಂಡು, ತಪಾಸಣೆ ಮುಂದುವರಿಸಲಾಗಿದೆ.


ಈ ದಾಳಿಯನ್ನು ಲೋಕಾಯುಕ್ತ ಎಸ್ಪಿ ಸಿದ್ದರಾಜು ನೇತೃತ್ವದಲ್ಲಿ ಡಿವೈಎಸ್ಪಿ ವಸಂತಕುಮಾರ್, ರಫೀಕ್ ಹಾಗೂ ಸಂಗಮೇಶ್ ಸೇರಿದ ತಂಡ ನಡೆಸಿದೆ.ಇದನ್ನು ಓದಿ –ನಾಗಮಂಗಲ ಗಲಭೆಗೆ ಟ್ವಿಸ್ಟ್ – ದೂರು ನೀಡಿದ್ದ ಪಿಎಸ್‌ಐ ಅಮಾನತು

ಕೋಲಾರ:

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ತಾಡಿಗೋಲ ಕ್ರಾಸ್‌ ಬಳಿ ಇರುವ ಆರ್‌ಟಿಒ ಚೆಕ್‌ಪೋಸ್ಟ್‌ ಮೇಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಕಳೆದ ಮೂರು ಗಂಟೆಗಳಿನಿಂದ ತೀವ್ರ ತಪಾಸಣೆ ಮಾಡುತ್ತಿದ್ದಾರೆ. ಚೆಕ್‌ಪೋಸ್ಟ್‌ನ ದಾಖಲೆಗಳ ಪರಿಶೀಲನೆಗೂ ಅಧಿಕಾರಿಗಳು ತೊಡಗಿದ್ದಾರೆ.

Copyright © All rights reserved Newsnap | Newsever by AF themes.
error: Content is protected !!