February 18, 2026

Newsnap Kannada

The World at your finger tips!

muraga durga

ಲೈಂಗಿಕ ದೌರ್ಜನ್ಯ ಆರೋಪ: ಮುರುಘಾ ಸ್ವಾಮೀಜಿ ಬೇಲ್ ತಿರಸ್ಕರಿಸಿದ ಚಿತ್ರದುರ್ಗ ಕೋರ್ಟ್

Spread the love

ಹಾಸ್ಟೆಲ್ ನ ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಮೇಲೆ ಬಂಧನಕ್ಕೊಳಾಗಿರುವ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಸ್ವಾಮೀಜಿಗೆ ಜಾಮೀನು ಅರ್ಜಿಯನ್ನು ಗುರುವಾರ ಚಿತ್ರದುರ್ಗ ನ್ಯಾಯಾಲಯ ತಿರಸ್ಕರಿಸಿದೆ.

ಇದರಿಂದಾಗಿ ಸ್ವಾಮೀಜಿಗೆ ಜೈಲೇ ಗತಿಯಾಗಿದೆ.ಸುತ್ತೂರು ದೇಶಿಕೇಂದ್ರ ಶ್ರೀಗಳಿಂದ ಸೆ 28 ರಂದು ಶ್ರೀರಂಗಪಟ್ಟಣ ದಸರಾ ಉದ್ಘಾಟನೆ 

ಜಾಮೀನು ಕೋರಿ ಸ್ವಾಮೀಜಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಚಿತ್ರದುರ್ಗದ ಎರಡನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ ಆರೋಪಿಗೆ ಜಾಮೀನು ನೀಡಲು ನಿರಾಕರಿಸಿದೆ.

ಪೋಕ್ಸೊ ಕಾಯ್ದೆಯಡಿ ಬಂಧನಕ್ಕೊಳಗಾಗಿರುವ ಚಿತ್ರದುರ್ಗದ ಮುರುಘಾ ಸ್ವಾಮೀಜಿಗೆ ಬುಧವಾರ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶಿವಮೊಗ್ಗದಿಂದ ಇಂದು ಮತ್ತೆ ಚಿತ್ರದುರ್ಗಕ್ಕೆ ಕರೆತರಲಾಗಿತ್ತು.

ನ್ಯಾಯಾಲಯದ ಸೂಚನೆ ಮೇರೆಗೆ ಸ್ವಾಮೀಜಿಗಳನ್ನು ಮೆಗ್ಗಾನ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬುಧವಾರ ರಾತ್ರಿ ಶಿವಮೂರ್ತಿ ಅವರನ್ನು ಪೊಲೀಸ್‌ ವಾಹನದಲ್ಲಿ ಚಿತ್ರದುರ್ಗದ ಕಾರಾಗೃಹದಿಂದ ಶಿವಮೊಗ್ಗ ಕಾರಾಗೃಹಕ್ಕೆ ಕರೆ ತರಲಾಯಿತು. ಬಳಿಕ ಅಲ್ಲಿಂದ ಮೆಗ್ಗಾನ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು.

error: Content is protected !!