ರಾಯಚೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಚ್ ಡಿ ಕುಮಾರಸ್ವಾಮಿ ಅವರು, ಪ್ರಜ್ವಲ್ ರೇವಣ್ಣ 400 ಮಹಿಳೆಯರನ್ನು ರೇಪ್ ಮಾಡಿದ್ದಾರೆ ಎಂದು ರಾಹುಲ್ ಗಾಂಧಿ ಹೇಳುತ್ತಾರೆ. ಅವರಿಗೆ ಈ ಮಾಹಿತಿ ಕೊಟ್ಟವರು ಯಾರು? ರಾಜ್ಯ ಸರ್ಕಾರ ಕೊಡ್ತಾ? ಈ ಕುರಿತು ಬೇಕಾಬಿಟ್ಟಿ ಹೇಳಿಕೆ ನೀಡಿರುವ ರಾಹುಲ್ಗೆ ಮೊದಲು ಎಸ್ಐಟಿಯಿಂದ ನೋಟಿಸ್ ಕೊಡಿಸಲಿ ಎಂದು ಸಿಎಂ ಸಿದ್ದರಾಮಯ್ಯಗೆ ಎಚ್.ಡಿ. ಕುಮಾರಸ್ವಾಮಿ ಸವಾಲು ಹಾಕಿದರು.
ಈಗ ಬಿಡುಗಡೆಯಾಗಿರುವ ವಿಡಿಯೊಗಳಲ್ಲಿ ಪ್ರಜ್ವಲ್ ಮುಖ ಕಾಣುತ್ತಿಲ್ಲ. ಹಾಗಂತ ನಾನೇನು ಆ ವಿಡಿಯೊಗಳನ್ನು ನೋಡಿಲ್ಲ. ಇಷ್ಟಾದರೂ ಸಹಿಸಿಕೊಂಡಿದ್ದೇವೆ. ಕಾಂಗ್ರೆಸ್ನ ಮಹಾನಾಯಕ ತೋಟದಲ್ಲಿ ಏನೇನಾಗಿದೆ? 6–7 ಜನರನ್ನು ಹೋಟೆಲ್ನಲ್ಲಿ ಇಟ್ಟೀದಿಯಲ್ಲ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದರು.ಹೆಚ್.ಡಿ ರೇವಣ್ಣ ವಿರುದ್ಧ ಕಿಡ್ನಾಪ್ ಕೇಸ್ ದಾಖಲು
ನಂತರ ಪತ್ರಕರ್ತರೊಬ್ಬರು ಬಿಜೆಪಿ ಮೈತ್ರಿ ಏನಾಗಬಹುದು ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಸದ್ಯಕ್ಕೆ ತನಗೆ ಮೈತ್ರಿ ಮುಖ್ಯ ಅಲ್ಲ. ಮುಂದೆ ನೋಡೋಣ ಎಂದು ಹೇಳಿದರು.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು