Karnataka

ಸಚಿವರಿಗೆ ಖಾತೆ ಹಂಚಿಕೆ ಅಧೀಕೃತ – ರಾಜ್ಯಪತ್ರದಲ್ಲಿ ಪ್ರಕಟ : ಖಾತೆಗಳಲ್ಲಿ ಕೊಂಚ ಅದಲು – ಬದಲು

ಕೊನೆಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದ ಸಚಿವರಿಗೆ ಖಾತೆಗಳನ್ನು ಅಧೀಕೃತವಾಗಿ ಹಂಚಿಕೆ ಮಾಡಲಾಗಿದೆ.

ಸಿಎಂ ಕಳುಹಿಸಿದ್ದ ಪಟ್ಟಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಕಿತ ಹಾಕಿದ ತಕ್ಷಣವೇ ಸರ್ಕಾರ ರಾಜ್ಯಪತ್ರ ಹೊರಡಿಸಿದೆ.

ಸಾರಿಗೆ ಖಾತೆಯಿಂದ ಅಸಮಾಧಾನಗೊಂಡಿದ್ದ ರಾಮಲಿಂಗಾರೆಡ್ಡಿಗೆ ಸಾರಿಗೆ ಖಾತೆಯ ಜೊತೆಗೆ ಹೆಚ್ಚುವರಿಯಾಗಿ ಮುಜರಾಯಿ ಖಾತೆ ನೀಡಲಾಗಿದೆ.

ಸಮಾಜ ಕಲ್ಯಾಣ ಅಥವಾ ಕಂದಾಯ ಖಾತೆ ಬಗ್ಗೆ ಒಲವು ಹೊಂದಿದ್ದರೆನ್ನಲಾದ ಕೆ.ಹೆಚ್ ಮುನಿಯಪ್ಪಗೆ ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ಜೊತೆಗೆ ಗ್ರಾಹಕ ವ್ಯವಹಾರಗಳ ಖಾತೆ ಜವಾಬ್ದಾರಿ ನೀಡಲಾಗಿದೆ.

ಡಿಸಿಎಂ ಡಿಕೆಶಿಗೆ ಬೆಂಗಳೂರು ನಗರ ಅಭಿವೃದ್ಧಿ, ಜಲಸಂಪನ್ಮೂಲ, ಆರ್.ಬಿ.ತಿಮ್ಮಾಪುರ ಬಳಿ ಇದ್ದ ಮುಜರಾಯಿ ಖಾತೆ ರಾಮಲಿಂಗಾ ರೆಡ್ಡಿಗೆ ಹೆಚ್ಚುವರಿ ಖಾತೆಯಾಗಿ ನೀಡಲಾಗಿದೆ. ಎಂಬಿ ಪಾಟೀಲ್‍ಗೆ ಹೆಚ್ಚುವರಿ ಆಗಿ ನೀಡಲಾಗಿದ್ದ ಐಟಿಬಿಟಿ ಸಿಎಂ ಬಳಿಯೇ ಉಳಿಸಿಕೊಂಡಿದ್ದಾರೆ.

ಎಂ.ಸಿ.ಸುಧಾಕರ್ ಗೆ ಉನ್ನತ ಶಿಕ್ಷಣ ಖಾತೆ ನೀಡಲಾಗಿದೆ. ಮೊದಲು ವೈದ್ಯಕೀಯ ಶಿಕ್ಷಣ ನೀಡಲಾಗಿತ್ತು. ಶರಣ ಪ್ರಕಾಶ್ ಪಾಟೀಲ್‍ಗೆ ವೈದ್ಯಕೀಯ ಶಿಕ್ಷಣ ನೀಡಲಾಗಿದೆ. ಮೊದಲು ಉನ್ನತ ಶಿಕ್ಷಣ ಖಾತೆ ನೀಡಲಾಗಿತ್ತು ಎರಡು ಖಾತೆಯನ್ನ ಇಬ್ಬರಿಗೆ ಅದಲು ಬದಲು ಮಾಡಲಾಗಿದೆ.

ಯಾರಿಗೆ ಯಾವ ಖಾತೆ..?:

  • ಸಿದ್ದರಾಮಯ್ಯ – ಹಣಕಾಸು, ಸಂಪುಟ ವ್ಯವಹಾರ, ಡಿಪಿಎಆರ್, ಗುಪ್ತಚರ, ವಾರ್ತಾ ಇಲಾಖೆ, ಐಟಿಬಿಟಿ
  • ಡಿಕೆಶಿ – ಜಲಸಂಪನ್ಮೂಲ, ಬೆಂಗಳೂರು ಅಭಿವೃದ್ಧಿ
  • ಪರಮೇಶ್ವರ್ – ಗೃಹ ಇಲಾಖೆ
  • ಹೆಚ್.ಕೆ.ಪಾಟೀಲ್ – ಸಣ್ಣ ನೀರಾವರಿ, ಕಾನೂನು ಮತ್ತು ಸಂಸದೀಯ ವ್ಯವಹಾರ
  • ಕೆ.ಎಚ್.ಮುನಿಯಪ್ಪ – ಆಹಾರ ಮತ್ತು ನಾಗರಿಕ ಸರಬರಾಜು
  • ಕೆ.ಜೆ.ಜಾರ್ಜ್ – ಇಂಧನ
  • ಎಂ.ಬಿ.ಪಾಟೀಲ್ – ಬೃಹತ್ ಮತ್ತು ಮಧ್ಯಮ ಕೈಗಾರಿಕಾ
  • ರಾಮಲಿಂಗಾರೆಡ್ಡಿ – ಸಾರಿಗೆ-ಮುಜರಾಯಿ
  • ಸತೀಶ್ ಜಾರಕಿಹೊಳಿ – ಲೋಕೋಪಯೋಗಿ ಇಲಾಖೆ
  • ಪ್ರಿಯಾಂಕ್ ಖರ್ಗೆ – ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್
  • ಜಮೀರ್ ಅಹಮದ್ – ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತ ಕಲ್ಯಾಣ
  • ಕೃಷ್ಣಬೈರೇಗೌಡ – ಕಂದಾಯ ಇಲಾಖೆ
  • ದಿನೇಶ್ ಗುಂಡೂರಾವ್ – ಆರೋಗ್ಯ ಮತ್ತು ಕುಟುಂಬ ಕಲ್ಯಾಣ
  • ಚಲುವರಾಯಸ್ವಾಮಿ – ಕೃಷಿ ಇಲಾಖೆ
  • ಕೆ. ವೆಂಕಟೇಶ್- ಪಶು ಸಂಗೋಪನೆ, ರೇಷ್ಮೆ
  • ಡಾ.ಹೆಚ್.ಸಿ ಮಹದೇವಪ್ಪ – ಸಮಾಜ ಕಲ್ಯಾಣ
  • ಈಶ್ವರ್ ಖಂಡ್ರೆ – ಅರಣ್ಯ ಮತ್ತು ಪರಿಸರ
  • ಕೆ.ಎನ್.ರಾಜಣ್ಣ – ಸಹಕಾರ

Team Newsnap
Leave a Comment
Share
Published by
Team Newsnap

Recent Posts

ಪಾದಚಾರಿಗಳ ಮೇಲೆ ಬೈಕ್ ಹರಿದು ನಾಲ್ವರು ಸಾವು

ವಿಜಯಪುರ: ಮೂತ್ರ ವಿಸರ್ಜನೆಗೆಂದು ರಸ್ತೆ ದಾಟುತ್ತಿದ್ದ ಯುವಕರ ಮೇಲೆ ಬೈಕ್ ಹರಿದು ಜಾತ್ರೆಗೆಂದು ಬಂದ ಯುವಕರು ಅಪಘಾತದಲ್ಲಿ ಸಾವನ್ನಪ್ಪಿದ ಘಟನೆ… Read More

September 6, 2024

ಇದು ಸಮರ್ಥನೆಯಲ್ಲ..! ನೇರ ನುಡಿ..!

ಶಿಕ್ಷಣ ಮತ್ತು ವ್ಯವಸ್ಥೆ "ಗುರುವಿನ ಗುಲಾಮನಾಗುವ ತನಕ ದೊರೆಯದಣ್ಣಾ ಮುಕುತಿ".. ಮೊದಲನೆಯಯದಾಗಿ ನನಗೆ ವಿದ್ಯೆ ಕಲಿಸಿ ಸಮಾಜದಲ್ಲಿ ಒಂದು ಉತ್ತಮವಾಗಿ… Read More

September 5, 2024

ಗುರು ಎಂಬೊ ಅರಿವಿನ ವಿಸ್ತಾರ….

'ಗುರುವಿನ ಗುಲಾಮನಾಗುವ ತನಕದೊರೆಯದಣ್ಣ ಮುಕುತಿ".ಎಂದು ಪುರಂದರದಾಸರು ಗುರುವಿನ ಮಹಿಮೆಯನ್ನು ಬಹು ಹಿಂದೆಯೇ ಹೇಳಿದ್ದಾರೆ,  ಪ್ರಾಚೀನ ಕಾಲದಲ್ಲಿ ಗುರು ತನ್ನ ಶಿಷ್ಯನಿಗೆ  ತನ್ನ… Read More

September 5, 2024

ನಿಸ್ವಾರ್ಥ ಜೀವಿ ಜ್ಞಾನದ ಭುವಿ

"ಗುರುವಿನ ಗುಲಾಮನಾಗುವ ತನಕ ದೊರೆಯದೆನ್ನ ಮುಕುತಿ"ಎಂಬಂತೆ ವಿದ್ಯಾರ್ಥಿಗಳು ಗುರುವಿನ ಗುಲಾಮನಾದಾಗಲೇ ಅಪ್ರತಿಮ ಬದುಕು ರೂಪಿಸಿಕೊಳ್ಳುವನು ಎಂಬುದು ಅಕ್ಷರಶಃ ಸತ್ಯ.ಅಕ್ಷರಗಳ ಕಲಿಸುತ… Read More

September 5, 2024

ಸಿದ್ದರಾಮಯ್ಯ ನ್ಯಾಯಾಲಯದ ತೀರ್ಪು ಬರುವ ಮೊದಲು ರಾಜೀನಾಮೆ ನೀಡಲಿ: ಬಿ ಎಸ್ ಯಡಿಯೂರಪ್ಪ

ಶಿವಮೊಗ್ಗ: ಮುಖ್ಯಮಂತ್ರಿ ಸಿದ್ದರಾಮಯ್ಯ ಯಾಲಯದ ತೀರ್ಪು ಬರುವ ಮೊದಲೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವುದು ಒಳ್ಳೆಯದು ಎಂದು ಮಾಜಿ ಸಿಎಂ… Read More

September 5, 2024

ಹೆಣ್ಣು ಮಗುವಿಗೆ ಜನ್ಮ ನೀಡಿದ ಮಿಲನಾ ನಾಗರಾಜ್ ಜೋಡಿ

ಮಿಲನಾ ನಾಗರಾಜ್ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ತಾಯಿ ಮತ್ತು ಮಗು ಇಬ್ಬರೂ ಆರೋಗ್ಯವಾಗಿದ್ದಾರೆ. ಈ ಸಂತಸದ ಸುದ್ದಿಯನ್ನು ಡಾರ್ಲಿಂಗ್… Read More

September 5, 2024