ಶಾಲಾ ಶುಲ್ಕ ಸಮರಕ್ಕೆ ಎಸ್.ಎಸ್.ಎಲ್.ಸಿ ಪರೀಕ್ಷೆಯಿಂದ ವಂಚಿತಳಾದ ವಿದ್ಯಾರ್ಥಿನಿಯೊಬ್ಬಳು ಮನನೊಂದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕೊರಟಗೆರೆ ತಾಲೂಕಿನ ಹನುಮಂತಪುರದಲ್ಲಿ ಜರುಗಿದೆ.
ಎನ್.ಗ್ರೀಷ್ಮಾ ನಾಯಕ್ (16) ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ
ಈಕೆ ಮೂಡಬಿದರೆ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ವ್ಯಾಸಂಗ ಮಾಡುತ್ತಿದ್ದಾಳೆ. ಕಳೆದ ವರ್ಷದ ಶಾಲಾ ಶುಲ್ಕ, ವಸತಿ, ಊಟದ ಬಿಲ್ ಬಾಕಿ ಇತ್ತು. ಇದರಿಂದ ಈ ಬಾರಿ ಶಾಲೆಗೆ ಸೇರಲು ಅವಕಾಶ ನೀಡಿಲ್ಲ.
ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆಯಲು ನೋಂದಾಯಿಸಿ ಕೊಂಡಿಲ್ಲ. ಇದರಿಂದ ಮನನೊಂದ ವಿದ್ಯಾರ್ಥಿನಿ ಗ್ರೀಷ್ಮಾ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾಳೆ.
ಈ ವಿಷಯ ತಿಳಿಯುತ್ತಿದ್ದಂತೆಯೇ ಪೋಷಕರು ಮಗಳನ್ನು ರಕ್ಷಿಸಿದ್ದಾರೆ.
9ನೇ ತರಗತಿಯಲ್ಲಿ ಗ್ರೀಷ್ಮಾ ಶೇ.96ರಷ್ಟು ಅಂಕಗಳಿಸಿದ್ದಳು.
ಇಷ್ಟೊಂದು ಪ್ರತಿಭಾವಂತ ವಿದ್ಯಾರ್ಥಿನಿ ಶುಲ್ಕ ಪಾವತಿಸದ ಕಾರಣ ಎ.ಎಸ್.ಎಲ್.ಸಿ ಪರೀಕ್ಷೆಗೆ ಅವಕಾಶ ನೀಡಿಲ್ಲ. ವಿಷಯ ತಿಳಿದ ಶಿಕ್ಷಣ ಸಚಿವ ಸುರೇಶ್ ಕುಮಾರ್, ವಿದ್ಯಾರ್ಥಿನಿ ಮನೆಗೆ ಭೇಟಿ ನೀಡಿದ್ದಾರೆ. ಬರುವ ಆಗಸ್ಟ್ ನಲ್ಲಿ ಪರೀಕ್ಷೆ ತೆಗೆದುಕೊಳ್ಳಲು ಅವಕಾಶ ನೀಡುವುದಾಗಿ ಭರವಸೆ ನೀಡಿದ್ದಾರೆ.
ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More
ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More
ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More
ಎಳ್ಳು ನೋಡಲು ಪುಟ್ಟದಾಗಿದ್ದು ಕಟುವಾದ ಯಾವ ವಾಸನೆಯೂ ಇಲ್ಲದ, ತನ್ನೊಡನೆ ಬೆರೆತ ಇತರ ವಸ್ತುಗಳ ಪರಿಮಳವನ್ನು ತನ್ನೊಡನೆ ಹೀರಿಕೊಳ್ಳುವ ವಿಶೇಷಗುಣ… Read More
ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,240 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ಇಂದು ಆರ್.ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಇಂದಿನಿಂದ… Read More
This website uses cookies.
Leave a Comment