ಅಮೆರಿಕ ಸೇನೆಯ ಭಾರೀ ಕಾರ್ಯಾಚರಣೆಗೆ ಹೆದರಿ ಐಸಿಸ್ ಮುಖ್ಯಸ್ಥ ಅಬು ಇಬ್ರಾಹಿಂ ಅಲ್ ಹಾಶಿಮಿ ಅಲ್ ಖುರೈಶಿ ಸೇರಿ 13 ಮಂದಿ ಕುಟುಂಬ ಸದಸ್ಯರು ಆತ್ಮಾಹುತಿ ಮಾಡಿಕೊಂಡು ಸಾವನ್ನಪ್ಪಿದ್ದಾರೆ.
2011 ರಲ್ಲಿ ಪಾಕಿಸ್ತಾನದ ಅಬೋಟಾಬಾದ್ ನಗರಕ್ಕೆ ರಹಸ್ಯವಾಗಿ ನುಗ್ಗಿ ಅಲ್ಖೈದಾ ಮುಖ್ಯಸ್ಥ ಒಸಾಮಾ ಬಿನ್ ಲಾಡೆನ್ ನನ್ನು ಅಮೇರಿಕಾ ಸೇನೆ ಹತ್ಯೆ ಮಾಡಿ ರೀತಿಯಲ್ಲೇ ಅಮೆರಿಕ ಸೇನೆ ಮತ್ತೊಮ್ಮೆ ಕಾರ್ಯಾಚರಣೆ ನಡೆಸಿದೆ.
ಈ ಕಾರ್ಯಾಚರಣೆಗೆ ಹೆದರಿ ಅಲ್ ಖುರೈಶಿ ಆತ್ಮಹತ್ಯೆ ಮಾಡಿಕೊಂಡು ಮಾತ್ರವಲ್ಲದೇ ತನ್ನ ಕುಟುಂಬ ಸದಸ್ಯರನ್ನೂ ಸಾಯಿಸಿದ್ದಾನೆ.
ಕಾರ್ಯಾಚರಣೆ ಹೇಗೆ ನಡೆಯಿತು ?
ಸಿರಿಯಾದ ಇದ್ಲಿಬ್ ಪ್ರಾಂತ್ಯದ ಅಟ್ಮೇಹ್ ನಗರದ ಮನೆಯೊಂದರಲ್ಲಿ ಇಬ್ರಾಹಿಂ ಅಡಗಿದ್ದಾನೆ ಎಂಬ ಖಚಿತ ಮಾಹಿತಿ ಅಮೆರಿಕ ಸೇನೆಗೆ ಸಿಕ್ಕಿತ್ತು.
ಈ ಮಾಹಿತಿ ಆಧಾರಿಸಿ ವಿಶೇಷ ಪಡೆಗಳೊಂದಿಗೆ ಬುಧವಾರ ರಾತ್ರಿ ರಹಸ್ಯವಾಗಿ ಹೆಲಿಕಾಪ್ಟರ್ನಲ್ಲಿ ಆಗಮಿಸಿ ದಾಳಿ ನಡೆಸಿದೆ.
ಆಲಿವ್ ಮರಗಳಿಂದ ಸುತ್ತುವರೆದ 2 ಅಂತಸ್ತಿನ ಮನೆಯ ಮೇಲೆ ಹೆಲಿಕಾಪ್ಟರ್ನಲ್ಲಿ ಇಳಿದ ಅಮೆರಿಕ ಯೋಧರು ಶರಣಾಗುವಂತೆ ಸೂಚಿಸಿದ್ದಾರೆ.
ಈ ಸಂದರ್ಭದಲ್ಲಿ ಆತನ ಅಂಗರಕ್ಷಕರು ಅಮೆರಿಕ ಯೋಧರ ಮೇಲೆ ದಾಳಿ ನಡೆಸಿದ್ದಾರೆ. ಇದಕ್ಕೆ ಪ್ರತಿಯಾಗಿ ಅಮೆರಿಕ ಯೋಧರು ದಾಳಿ ನಡೆಸಿದ್ದು ಸುಮಾರು 2 ಗಂಟೆ ಗುಂಡಿನ ಚಕಮಕಿ ನಡೆದಿದೆ.ತಾನು ಸಿಕ್ಕಿಬೀಳುವುದು ಖಚಿತ ಎನ್ನುವುದು ತಿಳಿಯುತ್ತಿದ್ದಂತೆ ಇಬ್ರಾಹಿಂ ತನ್ನ ಕುಟುಂಬ ಸದಸ್ಯರೊಂದಿಗೆ ಬಾಂಬ್ ಸ್ಫೋಟಿಸಿಕೊಂಡು ಸಾವನ್ನಪ್ಪಿದ್ದಾನೆ.
ಅಮೆರಿಕ ಅಧ್ಯಕ್ಷ ಜೋ ಬೈಡನ್ ಶ್ವೇತ ಭವನದಲ್ಲಿ ಪ್ರತಿಕ್ರಿಯಿಸಿ, ಕಾರ್ಯಾಚರಣೆ ನಡೆಸಿ ಐಸಿಸ್ ಮುಖ್ಯಸ್ಥ ಅಬು ಇಬ್ರಾಹಿಂನನ್ನು ಕೊಂದು ಹಾಕಿದ್ದೇವೆ. ಈ ದಾಳಿಯಲ್ಲಿ ನಾಲ್ವರು ಮಹಿಳೆಯರು ಮತ್ತು 6 ಮಕ್ಕಳು ಸೇರಿ 13 ಮಂದಿ ಬಲಿಯಾಗಿದ್ದಾರೆ. ನಮ್ಮ ಸೇನೆಯ ಒಬ್ಬ ಯೋಧ ಸಹ ಗಾಯಗೊಂಡಿಲ್ಲ. ಈ ಕಾರ್ಯಾಚರಣೆಯಲ್ಲಿ ತೊಡಗಿದ್ದ ಯೋಧರೆಲ್ಲರೂ ಸುರಕ್ಷಿತವಾಗಿ ಮರಳಿದ್ದಾರೆ ಎಂದು ತಿಳಿಸಿದ್ದಾರೆ.
ಬೆಂಗಳೂರು : ನೆನ್ನೆ ವಿಶೇಷ ತನಿಖಾ ತಂಡ (ಎಸ್ಐಟಿ) , ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರಿಂದ ಲೈಂಗಿಕ ಶೋಷಣೆಗೆ ಒಳಗಾಗಿದ್ದಳು… Read More
ನವದೆಹಲಿ : ಲೋಕಸಭೆ ಚುನಾವಣೆಯನ್ನು ಹಿನ್ನಲೆಯಲ್ಲಿ ರದ್ದಾಗಿರುವ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್… Read More
ರಾಯಚೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತೀವ್ರ ಪೇಚಿಗೆ ಸಿಲುಕಿರುವ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ… Read More
ಮೈಸೂರು : ಮೈಸೂರು ಜಿಲ್ಲೆ ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಮಗನಿಂದ ರೇವಣ್ಣ ವಿರುದ್ಧ ದೂರು ದಾಖಲಿಸಲಾಗಿದ್ದು ,ಎಫ್ಐಆರ್… Read More
ರಾಮನಗರ : ಮೂರು ದಿನಗಳ ಹಿಂದೆ ಕರಡಿಯೊಂದು ಐಜೂರಿನ ಜನವಸತಿ ಪ್ರದೇಶದಲ್ಲಿ ನಿರ್ಭೀತಿಯಿಂದ ಓಡಾಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.… Read More
ಬೆಂಗಳೂರು : . ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದ್ದು , ಸಂತ್ರಸ್ತೆಯೊಬ್ಬರು ಜಡ್ಜ್ ಮುಂದೆ ಸಿಆರ್ ಪಿಸಿ… Read More
This website uses cookies.
Leave a Comment