ಆಸ್ಟ್ರೇಲಿಯಾ ಹಾಗೂ ಭಾರತದ ನಡುವಿನ ಪಂದ್ಯ ಜಿದ್ದಾಜಿದ್ದಿನಿಂದ ನಡೆಯುತ್ತಿದ್ದರೆ ಇತ್ತ ಸ್ಟೇಡಿಯಂನಲ್ಲಿ ಕುತೂಹಲಕಾರಿ ಘಟನೆಯೊಂದು ನಡೆದಿದೆ.
ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಎರಡನೇ ಏಕದಿನ ಪಂದ್ಯದ ಸಂದರ್ಭದಲ್ಲಿ ಯುವಕನೋರ್ವ ಪ್ರೇಮ ನಿವೇದನೆ ಮಾಡಿದ ಘಟನೆ ನಡೆದಿದೆ.
ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹಾಗೂ ಶ್ರೇಯಸ್ ಐಯ್ಯರ್ ಬ್ಯಾಟಿಂಗ್ ನಡೆಸುತ್ತಿದ್ದರು. ಭಾರತದ ಇನ್ನಿಂಗ್ಸ್ನ 20ನೇ ಓವರ್ನಲ್ಲಿ ಈ ಘಟನೆ ನಡೆದಿದೆ. ಕುತೂಹಲಕಾರಿ ಸಂಗತಿ ಎಂದರೆ ಯುವಕ ಭಾರತೀಯನಾಗಿದ್ದು ಯುವತಿ ಆಸ್ಟ್ರೇಲಿಯಾ ಪ್ರಜೆಯಾಗಿದ್ದಾಳೆ. ಟೀಮ್ ಇಂಡಿಯಾದ ಜರ್ಸಿ ತೊಟ್ಟಿದ್ದ ಯುವಕ ಆಸ್ಟ್ರೇಲಿಯಾದ ಯುವತಿಗೆ ಪ್ರೇಮ ನಿವೇದನೆಯನ್ನು ಮಾಡಿದ್ದಾನೆ.
ಈ ಪ್ರೇಮ ನಿವೇದನೆಗೆ ಪ್ರೇಯಸಿಯೂ ಕೂಡ ಒಪ್ಪಿಗೆಯನ್ನು ಸೂಚಿಸಿರುವುದು ಕಂಡು ಬಂದಿದೆ. ಹೀಗಾಗಿ ಇಬ್ಬರೂ ಮೈದಾನದಲ್ಲೇ ಅಪ್ಪಿಕೊಂಡು ಸಂಭ್ರಮ ಹಂಚಿಕೊಂಡಿದ್ದಾರೆ. ಬಳಿಕ ಯುವಕ ಆ ಯುವತಿಗೆ ಮೈದಾನದಲ್ಲೇ ಉಂಗುರವನ್ನು ಕೂಡ ತೊಡಿಸಿದ್ದಾನೆ.
ಈ ಎಲ್ಲಾ ದೃಶ್ಯಗಳು ಮೈದಾನದ ದೊಡ್ಡ ಪರದೆಯಲ್ಲಿ ಬಿತ್ತರವಾಗುತ್ತಿತ್ತು. ಈ ದೃಶ್ಯವನ್ನು ಮೈದಾನದಲ್ಲಿ ಆಡುತ್ತಿದ್ದ ಆಟಗಾರರು ಕೂಡ ಕಂಡು ಚಪ್ಪಾಳೆ ತಟ್ಟುವ ಮೂಲಕ ಶುಭ ಹಾರೈಸಿದ್ದಾರೆ. ಟಿವಿ ನೇರಪ್ರಸಾರದಲ್ಲೂ ಈ ದೃಶ್ಯಗಳು ಪ್ರಸಾರವಾಗಿದ್ದು ಕೋಟ್ಯಂತರ ಪ್ರೇಕ್ಷಕರ ಸಮ್ಮುಖದಲ್ಲಿ ಈ ಪ್ರೇಮ ನಿವೇದನೆ ವಿಶಿಷ್ಟವಾಗಿ ನಡೆದಿದೆ.
ರಾಮನಗರ : ಮೇಕೆದಾಟು (Mekedatu) ಬಳಿಯ ಸಂಗಮದ ಕಾವೇರಿ ನದಿಯಲ್ಲಿ ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರು ಪಾಲಾದ ಘಟನೆ… Read More
ಬೆಂಗಳೂರು: ಮಾಜಿ ಸಿಎಂ ಎಸ್.ಎಂ ಕೃಷ್ಣ (91) ಆರೋಗ್ಯದಲ್ಲಿ ಏರುಪೇರು ಆಗಿದೆ. ವೈದ್ಯರ ಸೂಚನೆ ಮೇರೆಗೆ ಮಣಿಪಾಲ್ ಆಸ್ಪತ್ರೆಗೆ ಎಸ್.ಎಂ… Read More
ಬೆಂಗಳೂರು: ಮಹಿಳೆಯರ ಮೇಲಿನ ಸತತ ದೌರ್ಜನ್ಯದ ಆರೋಪಗಳ ಹಿನ್ನೆಲೆಯಲ್ಲಿ ಸಂಸದ ಪ್ರಜ್ವಲ್ ರೇವಣ್ಣರನ್ನು ಜೆಡಿಎಸ್ ನಿಂದ ಅಮಾನತು ಮಾಡಲಾಗಿದೆ. ಈ… Read More
ಮೈಸೂರು : ಶ್ರೀನಿವಾಸ್ ಪ್ರಸಾದ್ (Srinivas Prasad) ಅವರ ಅಂತ್ಯಕ್ರಿಯೆ ನಾಳೆ ಮಾಡಲಾಗುತ್ತದೆ ಎಂದು ಮಗಳು ಪ್ರತಿಮಾ ಪ್ರಸಾದ್… Read More
ಮೈಸೂರು : ಉದಯಗಿರಿ ಪೊಲೀಸ್ ಠಾಣೆಯಲ್ಲಿ ಭ್ರೂಣ ಲಿಂಗ ಪತ್ತೆ ಹಾಗೂ ಗರ್ಭಪಾತ ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ 17 ಮಂದಿ… Read More
ಬೆಂಗಳೂರು: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ (76) ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು ಮೂತ್ರಕೋಶ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದ ಅವರು… Read More
This website uses cookies.
Leave a Comment