ರಾಜ್ಯಪಾಲ ಥವಾರ್ ಚಂದ್ ಗೆಹ್ಲೊಟ್ ಅವರನ್ನು ಕರ್ನಾಟಕ ಮಾಧ್ಯಮ ಅಕಾಡೆಮಿ ನಿಯೋಗ ಗುರುವಾರ ಸೌಹಾರ್ದಯುತ ಭೇಟಿ ಮಾಡಿ ಚರ್ಚೆ ನಡೆಸಿತು.
ಜುಲೈ 1 ರಂದು ಆಯೋಜಿಸಲಿರುವ ಕಾರ್ಯಕ್ರಮ ಉದ್ಘಾಟನೆ ಮಾಡಲು ಆಗಮಿಸುವಂತೆ ರಾಜ್ಯಪಾಲರನ್ನು ಆಹ್ವಾನಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ರಾಜ್ಯಪಾಲರು, ಪತ್ರಕರ್ತರ ಬಗ್ಗೆ ತಮಗೆ ವಿಶೇಷ ಗೌರವವಿದ್ದು, ಕಾರ್ಯಕ್ರಮಕ್ಕೆ ಬರಲು ಪ್ರಯತ್ನ ಮಾಡುವುದಾಗಿ ತಿಳಿಸಿದರು.
ಇದೇ ಸಂದರ್ಭದಲ್ಲಿ ಮಾಧ್ಯಮ ಅಕಾಡೆಮಿ ಅಧ್ಯಕ್ಷ ಸದಾಶಿವ ಶೆಣೈ ಅವರು, ಕನ್ನಡ ಪತ್ರಿಕೋದ್ಯಮ ಬಗ್ಗೆ ಮಾಹಿತಿಯುಳ್ಳ “ಕನ್ನಡ ಜರ್ನಲಿಸಮ್ ಮತ್ತು ಟಿಎಸ್ಆರ್” ಪುಸ್ತಕವನ್ನು ರಾಜ್ಯಪಾಲರಿಗೆ ನೀಡಿದರು.
ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಅವರು, ತಾವು ಬರೆದ “ಕೋವಿಡ್ ಕಥೆಗಳು” ಪುಸ್ತಕವನ್ನು ಕೊಡುಗೆಯಾಗಿ ನೀಡಿದರು. ರಾಜ್ಯದಲ್ಲಿ ಮೃತಪಟ್ಟ ಪತ್ರಕರ್ತರ ಕುಟುಂಬಗಳಿಗೆ ಸರ್ಕಾರದಿಂದ ಆರ್ಥಿಕ ನೆರವು ಕೊಡಿಸಿರುವುದನ್ನು ಈ ಪುಸ್ತಕದಲ್ಲಿ ದಾಖಲು ಮಾಡಿರುವುದಾಗಿ ವಿವರಿಸಿದರು.
ನಿಯೋಗದಲ್ಲಿ ಅಕಾಡೆಮಿ ಸದಸ್ಯರಾದ ನಾಗಾರ್ಜುನ ದ್ವಾರಕನಾಥ್, ಬದ್ರುದ್ದೀನ್, ಶಿವರಾಜ್, ಎಸ್.ಲಕ್ಷ್ಮಿನಾರಾಯಣ, ಶಿವಕುಮಾರ್ ಬೆಳ್ಳಿತಟ್ಟೆ ಅವರಿದ್ದರು.
ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More
ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು : ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆದರಿಕೆ ಕರೆಗಳು ಬಂದ… Read More
ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More
ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More
ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More
This website uses cookies.
Leave a Comment