ತಮ್ಮ ತವರುಕ್ಷೇತ್ರ ಹೊಸಪೇಟೆಯ ವೇಣುಗೋಪಾಲಸ್ವಾಮಿ ದೇಗುಲದಲ್ಲಿ ಸಚಿವ ಆನಂದ್ ಸಿಂಗ್ ಬುಧವಾರ ಬೆಳಗಿನಿಂದ ವಿಶೇಷಪೂಜೆಯಲ್ಲಿ ಪಾಲ್ಗೊಂಡಿದ್ದಾರೆ.
ಈ ಪೂಜೆಗೊಂದು ಮಹತ್ವವಿದೆ. ಈ ಹಿಂದೆ ಕಾಂಗ್ರೆಸ್ ಪಕ್ಷದಲ್ಲಿದ್ದ ಸಮಯದಲ್ಲೂ ಆನಂದ್ ಸಿಂಗ್ ಇದೇ ರೀತಿ ವಿಶೇಷಪೂಜೆ ನಡೆಸಿದ ನಂತರವೇ ರಾಜೀನಾಮೆ ನೀಡಿದ್ದರು. ಹೀಗಾಗಿ ಇಂದಿನ ಈ ಧಾರ್ಮಿಕ ಕಾರ್ಯಕ್ರಮ ರಾಜಕೀಯ ವಲಯದಲ್ಲಿ ಗಮನ ಸೆಳೆದಿದೆ. ತಮ್ಮ ಕುಟುಂಬದವರೊಂದಿಗೆ ಹೋಮ-ಹವನದಲ್ಲಿ ಆನಂದ್ ಸಿಂಗ್ ಭಾಗಿಯಾಗಿದ್ದಾರೆ.
ಇತ್ತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆನಂದ್ಸಿಂಗ್ ವಿಚಾರವಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ.
ಆನಂದ್ ಸಿಂಗ್ ತಮ್ಮ ಮೂರು ದಶಕದ ಗೆಳೆಯ. ಮಾತುಕತೆಗೆ ಬರಲು ಇಂದು ಆಹ್ವಾನ ನೀಡಿದ್ದೇನೆ. ನಾಳೆ ನಾನು ಬೆಂಗಳೂರಿನಲ್ಲಿ ಇರದ ಕಾರಣ ಇಂದು ಬರದಿದ್ದರೆ ನಾಡಿದ್ದು ಬರುವಂತೆ ಹೇಳಿದ್ದೇನೆ. ಅವರು ರಾಜೀನಾಮೆ ನೀಡಿಲ್ಲ ಎಂದು ಸಿಎಂ ಬೆಂಗಳೂರಿನಲ್ಲಿ ಸುದ್ದಿಗಾರರಿಗೆ ತಿಳಿಸಿದರು.
ಮಾಜಿಮುಖ್ಯಮಂತ್ರಿ ಬಿಎಸ್ವೈ ಅವರು ಈಗ ಅಖಾಡಕ್ಕೆ ಇಳಿದಿದ್ದು, ಆನಂದ್ ಸಿಂಗ್ ಪ್ರಕರಣ ಸುಖಾಂತ್ಯಗೊಳಿಸಲು ಯತ್ನಿಸಿದ್ದಾರೆ. ಈಗ ಸುರಪುರಕ್ಕೆ ಹೋಗಿರುವ ವಿಶೇಷ ಹೆಲಿಕಾಪ್ಟರ್ನಲ್ಲಿ ಶಾಸಕ ರಾಜೂಗೌಡ ಹೊಸಪೇಟೆಗೆ ತೆರಳಿ ಆನಂದ್ ಸಿಂಗ್ ಅವರನ್ನು ಇಂದು ಸಂಜೆ ವೇಳೆಗೆ ಬೆಂಗಳೂರಿಗೆ ಕರೆ ತರುತ್ತಾರೆ ಎಂದು ಮೂಲಗಳು ಹೇಳಿವೆ.
ವಿಶೇಷ ಪೂಜೆ ನಡೆಸುತ್ತಿರುವ ಸಚಿವ ಆನಂದ್ ಸಿಂಗ್ ಅವರು ದೇವರ ಮುಂದೆ ಇಂದು ಚೀಟಿ ಇಟ್ಟಿದ್ದಾರೆ. ಆದರಲ್ಲಿ ಏನು ಬರದಿದೆ ಎಂಬುದು ಮಾತ್ರ ಇನ್ನೂ ನಿಗೂಢವಾಗಿಯೇ ಇದೆ.
ಜನರ ಸಮಸ್ಯೆಗಳಿಗಿಂತ ಟಿವಿ ಚಾನಲ್ ಗಳಿಗೆ ಗಂಡ ಹೆಂಡ್ತಿ ಜಗಳಗಳ ಬಗ್ಗೆಯೇ ಹೆಚ್ಚು ಆಸಕ್ತಿ: ಸಿಎಂ ವ್ಯಂಗ್ಯ ಫೇಕ್ ನ್ಯೂಸ್… Read More
ಹಾಸನ: 10 ವರ್ಷದ ಬಾಲಕನೊಬ್ಬ ಹೃದಯಘಾತದಿಂದ ಸಾವನ್ನಪ್ಪಿರುವ ಘಟನೆ ಹಾಸನದ ಅಲೂರು ತಾಲೂಕಿನ ಚಿನ್ನಪುರದಲ್ಲಿ ನಡೆದಿದೆ. ಮೃತ ಬಾಲಕ ಸಚಿನ್… Read More
ಮೈಸೂರು: ಶುಕ್ರವಾರ ( 20-09-2024 ) ರಾತ್ರಿ ದಸರಾ ಗಜಪಡೆಯ ಆನೆ ಧನಂಜಯ ಮತ್ತೊಂದು ಆನೆ ಕಂಜನ್ ಮೇಲೆ ಏಕಾಏಕಿ… Read More
ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More
ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More
ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More
This website uses cookies.
Leave a Comment