January 30, 2026

Newsnap Kannada

The World at your finger tips!

anand singh1

ರಾಜೀನಾಮೆ ನಿರ್ಧಾರದಿಂದ ಹಿಂದಕ್ಕೆ ಸರಿದ ಸಚಿವ ಆನಂದ್ ಸಿಂಗ್

Spread the love

ಸಿಎಂ ಬಸವರಾಜ ಬೊಮ್ಮಾಯಿ ಜೊತೆ ಮಾತುಕತೆ ಮಾಡಿ ಚರ್ಚೆ ನಡೆಸಿದ ಬಳಿಕ ಸಚಿವ ಆನಂದ್ ಸಿಂಗ್ ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ.

ಸಚಿವ ಆನಂದ್ ಸಿಂಗ್ ಅವರೊಂದಿಗೆ ಮಾತುಕತೆ ನಡೆಸಿರುವ ಬೊಮ್ಮಾಯಿ ಅವರು, ಸಚಿವರ ಮನವೊಲಿಕೆಗೆ ಮಾಡಲು ಯಶಸ್ವಿಯಾಗಿದ್ದಾರೆ.

ಸಿಎಂ ನಾಳೆ ದೆಹಲಿಗೆ ಭೇಟಿ ನೀಡಿದ ವೇಳೆ ಹೈಕಮಾಂಡ್​​ನೊಂದಿಗೆ ಚರ್ಚೆ ನಡೆಸಿ ಸೂಕ್ತ ತೀರ್ಮಾನ ಕೈಗೊಳ್ಳುವ ಬಗ್ಗೆ ಸಿಎಂ ಭರವಸೆ ನೀಡಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ.

ಈ ನಡುವೆ ಸಿಎಂ ಭೇಟಿ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಸಚಿವ ಆನಂದ್ ಸಿಂಗ್, ನಾನು ಸಿಎಂ ಭೇಟಿ ಮಾಡಿದ್ದೆ. ನನ್ನ ನಿಲುವನ್ನು ಮತ್ತೊಮ್ಮೆ ಸಿಎಂ ಗಮನಕ್ಕೆ ತಂದಿದ್ದೇನೆ. ಅವರೂ ಕೂಡ ಸಕಾರಾತ್ಮಕವಾಗಿ ಸ್ಪಂದಿಸಲಿದ್ದಾರೆ. ನನ್ನ ಭಾವನಗೆಳಿಗೆ ಸಿಎಂ ಸ್ಪಂಧಿಸಲಿದ್ದಾರೆ. ನಮ್ಮ ರಾಜ್ಯಾಧ್ಯಕ್ಷರನ್ನ ಸಹ ಭೇಟಿ ಮಾಡಿದ್ದೆ, ಅವರೂ ಸಹ‌ ಮೊದಲು ಅಧಿಕಾರ ವಹಿಸಿಕೊಳ್ಳುವಂತೆ ಹೇಳಿದ್ದಾರೆ. ನನ್ನ ಮನವಿಯನ್ನೂ ಅವರ ಗಮನಕ್ಕೂ ತಂದಿದ್ದೇನೆ ಎಂದು ಸ್ಪಷ್ಟಪಡಿಸಿದರು.

error: Content is protected !!