ಸಿಎಂ ಬಸವರಾಜ ಬೊಮ್ಮಾಯಿ ಜೊತೆ ಮಾತುಕತೆ ಮಾಡಿ ಚರ್ಚೆ ನಡೆಸಿದ ಬಳಿಕ ಸಚಿವ ಆನಂದ್ ಸಿಂಗ್ ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ.
ಸಚಿವ ಆನಂದ್ ಸಿಂಗ್ ಅವರೊಂದಿಗೆ ಮಾತುಕತೆ ನಡೆಸಿರುವ ಬೊಮ್ಮಾಯಿ ಅವರು, ಸಚಿವರ ಮನವೊಲಿಕೆಗೆ ಮಾಡಲು ಯಶಸ್ವಿಯಾಗಿದ್ದಾರೆ.
ಸಿಎಂ ನಾಳೆ ದೆಹಲಿಗೆ ಭೇಟಿ ನೀಡಿದ ವೇಳೆ ಹೈಕಮಾಂಡ್ನೊಂದಿಗೆ ಚರ್ಚೆ ನಡೆಸಿ ಸೂಕ್ತ ತೀರ್ಮಾನ ಕೈಗೊಳ್ಳುವ ಬಗ್ಗೆ ಸಿಎಂ ಭರವಸೆ ನೀಡಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ.
ಈ ನಡುವೆ ಸಿಎಂ ಭೇಟಿ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಸಚಿವ ಆನಂದ್ ಸಿಂಗ್, ನಾನು ಸಿಎಂ ಭೇಟಿ ಮಾಡಿದ್ದೆ. ನನ್ನ ನಿಲುವನ್ನು ಮತ್ತೊಮ್ಮೆ ಸಿಎಂ ಗಮನಕ್ಕೆ ತಂದಿದ್ದೇನೆ. ಅವರೂ ಕೂಡ ಸಕಾರಾತ್ಮಕವಾಗಿ ಸ್ಪಂದಿಸಲಿದ್ದಾರೆ. ನನ್ನ ಭಾವನಗೆಳಿಗೆ ಸಿಎಂ ಸ್ಪಂಧಿಸಲಿದ್ದಾರೆ. ನಮ್ಮ ರಾಜ್ಯಾಧ್ಯಕ್ಷರನ್ನ ಸಹ ಭೇಟಿ ಮಾಡಿದ್ದೆ, ಅವರೂ ಸಹ ಮೊದಲು ಅಧಿಕಾರ ವಹಿಸಿಕೊಳ್ಳುವಂತೆ ಹೇಳಿದ್ದಾರೆ. ನನ್ನ ಮನವಿಯನ್ನೂ ಅವರ ಗಮನಕ್ಕೂ ತಂದಿದ್ದೇನೆ ಎಂದು ಸ್ಪಷ್ಟಪಡಿಸಿದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ