ನವದೆಹಲಿ: ಚುನಾವಣಾ ಆಯೋಗವು ಇಂದು ಮಧ್ಯಾಹ್ನ 3:30ಕ್ಕೆ ಮಹತ್ವದ ಸುದ್ದಿಗೋಷ್ಠಿ ಆಯೋಜಿಸಿದ್ದು, ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭಾ ಚುನಾವಣೆಗಳ ದಿನಾಂಕ ಘೋಷಿಸುವ ನಿರೀಕ್ಷೆಯಿದೆ.
ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭಾ ಚುನಾವಣಾ ವೇಳಾಪಟ್ಟಿಯನ್ನು ಚುನಾವಣಾ ಆಯೋಗ (ECI) ಇಂದು ಮಧ್ಯಾಹ್ನ 3:30ಕ್ಕೆ ಪ್ರಕಟಿಸಲಿದೆ ಎಂದು ಮೂಲಗಳು ತಿಳಿಸಿವೆ.
ಅದೇ ಸಮಯದಲ್ಲಿ, ಕರ್ನಾಟಕದ ಸಂಡೂರು, ಶಿಗ್ಗಾಂವಿ, ಹಾಗೂ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಗಳಿಗೂ ದಿನಾಂಕ ಘೋಷಿಸುವ ಸಾಧ್ಯತೆ ಇದೆ. ಈ ಪ್ರಕಟಣೆ, ನಾಮಪತ್ರ ಸಲ್ಲಿಕೆ, ಮತದಾನ ದಿನಾಂಕಗಳು, ಮತ್ತು ಫಲಿತಾಂಶಗಳ ಘೋಷಣೆಯ ದಿನಾಂಕಗಳನ್ನು ಒಳಗೊಂಡಂತೆ, ಚುನಾವಣಾ ಪ್ರಕ್ರಿಯೆಯ ವಿವಿಧ ಹಂತಗಳ ಮಾಹಿತಿ ನೀಡುವ ಸಾಧ್ಯತೆ ಇದೆ.
More Stories
ಶಾಸಕ ಮುನಿರತ್ನನಿಗೆ ಜಾಮೀನು : ಬಿಗ್ ರಿಲೀಪ್
ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ಉಪಚುನಾವಣೆ : ನ13 ರಂದು ಮತದಾನಕ್ಕೆ ಮುಹೂರ್ತ
ಮಂಡ್ಯದಲ್ಲಿ ಪುನೀತ್ ರಾಜ್ಕುಮಾರ್ ಹೆಸರಲ್ಲಿ ವಂಚನೆ