ರಾಜ್ಯ ದಲ್ಲಿ ಮತ್ತೆ 7 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ.
ಮಂಗಳೂರು ಪೋಲಿಸ್ ಕಮೀಷನರ್ ಶಶಿಕುಮಾರ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದ್ದು, ಮುಂದಿನ ಆದೇಶದವರೆಗೆ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಉಪ ಪೊಲೀಸ್ ಮಹಾನಿರೀಕ್ಷಕರನ್ನಾಗಿ ನೇಮಿಸಲಾಗಿದೆ.
ಬೆಂಗಳೂರು ನಗರ ಸಂಚಾರ ಪಶ್ಚಿಮ ವಿಭಾಗದ ಉಪ ಪೊಲೀಸ್ ಆಯುಕ್ತರಾಗಿದ್ದ ಕುಲದೀಪ್ ಕುಮಾರ್ ಆರ್ ಜೈನ್ ವರ್ಗಾವಣೆ ಮಾಡಲಾಗಿದೆ.ಮಾನಹಾನಿ ಹೇಳಿಕೆ ನೀಡದಂತೆ ಡಿ. ರೂಪಾಗೆ ಕೋರ್ಟ್ ನಿರ್ಬಂಧ – ರೋಹಿಣಿಗೆ ಬಿಗ್ ರಿಲೀಪ್
ಬೆಂಗಳೂರಿನ ವೈರ್ಲೆಸ್ ಪೊಲೀಸ್ ಅಧೀಕ್ಷಕರಾಗಿದ್ದ ಐಪಿಎಸ್ ಡೆಕ್ಕಾ ಕಿಶೋರ್ ಬಾಬು ವರ್ಗಾಯಿಸಲಾಗಿದೆ
ಬೆಂಗಳೂರು ನಗರದ ನಗರ ಸಶಸ್ತ್ರ ಮೀಸಲು ಪಡೆಯ ಪ್ರಧಾನ ಕಚೇರಿಯ ಉಪ ಪೊಲೀಸ್ ಆಯುಕ್ತರಾಗಿದ್ದ ಮುಹಮ್ಮದ್ ಸುಜೀತಾ ಎಂ.ಎಸ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದ್ದು, ಮುಂದಿನ ಆದೇಶದವರೆಗೆ ಬೆಂಗಳೂರು ನಗರ ಸಂಚಾರ ದಕ್ಷಿಣದ ಉಪ ಪೊಲೀಸ್ ಆಯುಕ್ತರಾಗಿ ಹೊಸದಾಗಿ ರಚಿಸಲಾದ ಹುದ್ದೆಯಲ್ಲಿ ನೇಮಿಸಲಾಗಿದೆ.
ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಶು ಗಿರಿ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದ್ದು, ಮುಂದಿನ ಆದೇಶದವರೆಗೆ ಉಪ ಪೊಲೀಸ್ ಆಯುಕ್ತರು, ನಗರ ಸಶಸ್ತ್ರ ಮೀಸಲು ಪಡೆಯ ಪ್ರಧಾನ ಕಚೇರಿ, ಬೆಂಗಳೂರು ನಗರ ಉಪಾಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಐಪಿಎಸ್ ಅಧಿಕಾರಿ ಮೊಹಮ್ಮದ್ ಸುಜೀತಾ ಎಂ.ಎಸ್ ವರ್ಗಾವಣೆ.
ಬೆಳಗಾವಿಯ ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾದ ಶ್ರೀಮತಿ ಯಶೋಧಾ ವಂಟಗೋಡಿ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ ಮತ್ತು ಮುಂದಿನ ಆದೇಶದವರೆಗೆ ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ನೇಮಿಸಲಾಗಿದೆ.
- ಭ್ರೂಣ ಲಿಂಗ ಪತ್ತೆ ಪ್ರಕರಣ – ಮೈಸೂರಿನಲ್ಲಿ 17 ಮಂದಿ ವಿರುದ್ಧ ಎಫ್ಐಆರ್ ದಾಖಲು
- ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
- ಇಬ್ಬರು ಮಕ್ಕಳು ಬಿಸಿಲ ಝಳಕ್ಕೆ ಬಲಿ
- ರಾಜ್ಯದಲ್ಲಿ ಇಂದಿನಿಂದ ನರೇಂದ್ರ ಮೋದಿ ಪ್ರಚಾರ
- ಮೈಸೂರು : ಇವಿಎಂ, ವಿವಿ ಪ್ಯಾಟ್ ಗಳಿಗೆ ಬಿಗಿ ಭದ್ರತೆ: ಸ್ಟ್ರಾಂಗ್ ರೂಂ ಪರಿಶೀಲಿಸಿದ ಡಿಸಿ ಡಾ ರಾಜೇಂದ್ರ
- ಕೇಂದ್ರದಿಂದ ರಾಜ್ಯಕ್ಕೆ 3,454 ಕೋಟಿ ರು ಬರಪರಿಹಾರ ಘೋಷಣೆ