February 21, 2026

Newsnap Kannada

The World at your finger tips!

dcc1

ಡಿಸಿಸಿ ಬ್ಯಾಂಕ್ ನಲ್ಲಿ ಕಾಂಗ್ರೆಸ್ ಗೆ ಮತ್ತೊಂದು ಏಟು – ನರಸಿಂಹಯ್ಯ ಆಯ್ಕೆ ಅನರ್ಹ

Spread the love

ಮಂಡ್ಯ ಡಿಸಿಸಿ ಬ್ಯಾಂಕ್ ನ ನಿರ್ದೇಶಕ ರಾಗಿ ಆಯ್ಕೆ ಯಾಗಿರುವ ನಾಗಮಂಗಲ ತಾಲೂಕು ಹರದಹಳ್ಳಿ ಎಚ್ ಎಸ್ ನರಸಿಂಹಯ್ಯ ಅವರನ್ನು ಸಹಕಾರ ಇಲಾಖೆ ಮೈಸೂರು ವಿಭಾಗದ ಜಂಟಿ ನಿರ್ದೇಶಕರು ಅನರ್ಹಗೊಳಿಸಿ ತೀರ್ಪು ನೀಡಿದ್ದಾರೆ.

ಈ ತೀರ್ಪಿನಿಂದಾಗಿ ಕಾಂಗ್ರೆಸ್
ಬೆಂಬಲಿತ ರು ಎಂದು ಗುರುತಿಸಿಕೊಂಡಿರುವ ಎಚ್ ಎಸ್ ನರಸಿಂಹಯ್ಯ ಇಂದು ನಡೆಯುವ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆಯಲ್ಲಿ ಮತದಾನದ ಹಕ್ಕಿನಿಂದ ವಂಚಿತರಾಗಿದ್ದಾರೆ.

ಜಂಟಿ ನಿರ್ದೇಶಕರ ಮಧ್ಯಂತರ ತೀರ್ಪಿನಿಂದಾಗಿ ಡಿಸಿಸಿ ಬ್ಯಾಂಕ್ ನಲ್ಲಿದ್ದ 7 ಸದಸ್ಯರ ಬಲ ಈಗ 6ಕ್ಕೆ ಕುಸಿದಂತಾಗಿದೆ.
ನಾಗಮಂಗಲ ತಾಲೂಕಿನ ಕೃಷಿ ಪತ್ತಿನ ಸಹಕಾರ ಸಂಘದ ಮೂಲಕ ಆಯ್ಕೆಯಾದ ನರಸಿಂಹಯ್ಯ ಅವರು ಸರಿಯಾದ ದಾಖಲೆ ನೀಡದೇ ಆಯ್ಕೆ ಯಾಗಿದ್ದಾರೆಂದು ನಾಗಮಂಗಲ ತಾಲೂಕಿನ ಕಲ್ಲುವೀರನ ಕೊಪ್ಪಲು ಎಚ್ ರಮೇಶ್ ಜಂಟಿ ನಿರ್ದೇಶಕರ ನ್ಯಾಯಾಲಯದಲ್ಲಿ ದಾವೆ ಹೂಡಿದ್ದರು.

ವಾದಗಳನ್ನು ಆಲಿಸಿದ ನ್ಯಾಯಾಲಯ ವು ನರಸಿಂಹಯ್ಯ ಅವರ ಆಯ್ಕೆಯನ್ನು ಅನರ್ಹ ಎಂದು ಘೋಷಿಸಿತು. ಈ ಕಾರಣದಿಂದ ನರಸಿಂಹಯ್ಯ ನವರು ಇಂದಿನ ಮತದಾನದ ಹಕ್ಕಿನಿಂದ ವಂಚಿತರಾದರು.

ಈ ತೀರ್ಪು ಕಾಂಗ್ರೆಸ್ ಗೆ ಮತ್ತೊಂದು ಆಘಾತ ತಂದಿದೆ.

error: Content is protected !!