ಸಿಎಂ ಬಿಎಸ್ವೈಗೆ ಈಗ ಮತ್ತೊಂದು ಸಂಕಷ್ಟ ಎದುರಾಗಿದೆ. ಆಪರೇಷನ್ ಕಮಲಕ್ಕೆ ಆಮಿಷ ಒಡ್ಡಿದ ಪ್ರಕರಣದ ತನಿಖೆಗೆ ರಾಜ್ಯ ಹೈಕೋರ್ಟ್ ಅಸ್ತು ಎಂದಿದೆ.
ಆಪರೇಷನ್ ಕಮಲಕ್ಕಾಗಿ ಬಿ.ಎಸ್. ಯಡಿಯೂರಪ್ಪ ಆಮಿಷ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಎಸ್ ವೈ ವಿರುದ್ಧ ತನಿಖೆ ಹೈಕೋರ್ಟ್ ಮಾಡಲು
ಸೂಚಿಸಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೆ ದೇವದುರ್ಗ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಎಫ್ಐಆರ್ಗೆ ನೀಡಿದ್ದ ತಡೆಯಾಜ್ಞೆಯನ್ನು ಹೈಕೋರ್ಟ್ ತೆರವುಗೊಳಿಸಿದೆ.
ಪ್ರಕರಣ ರದ್ದು ಕೋರಿ ಬಿಎಸ್ವೈ ಅರ್ಜಿ ಸಲ್ಲಿಸಿದ್ದರು. ಶಾಸಕ ನಾಗನಗೌಡ ಪುತ್ರ ಶರಣಗೌಡ ದೂರು ನೀಡಿ ಜೆಡಿಎಸ್ ಬಿಟ್ಟು ಬಿಜೆಪಿ ಸೇರಲು ಬಿಎಸ್ ವೈ, ಶಿವನಗೌಡ ನಾಯಕ್, ಪ್ರೀತಮ್ ಗೌಡ ಪತ್ರಕರ್ತ ಎಂ.ಬಿ.ಮರಮಕಲ್ ಆಮಿಷ ಒಡ್ಡಿದ್ದಾರೆ ಎಂದು ದೂರು ದಾಖಲಿಸಿದ್ದರು.