February 20, 2026

Newsnap Kannada

The World at your finger tips!

charmadi ghat

ಮತ್ತೆ ಚಾರ್ಮಾಡಿ ಘಾಟ್‌ನಲ್ಲಿ ಗುಡ್ಡ ಕುಸಿತ

Spread the love

ಚಿಕ್ಕಮಗಳೂರು: ಇಂದು ಚಾರ್ಮಾಡಿ ಘಾಟ್ ತಪ್ಪಲಿನಲ್ಲಿ ಭಾರೀ ಮಳೆಯಾಗುತ್ತಿದ್ದು , ಮತ್ತೆ ಗುಡ್ಡ ಕುಸಿದಿದೆ.

ಘಾಟಿಯ 8 ಮತ್ತು 9ನೇ ತಿರುವಿನಲ್ಲಿ ಗುಡ್ಡ , ಬಂಡೆಗಳು ಕುಸಿದಿದ್ದು ,ಮಳೆ ನೀರಿನ ಜೊತೆ ರಸ್ತೆಗೆ ಕಲ್ಲುಗಳು ತೇಲಿಕೊಂಡು ಬಂದಿವೆ.

ಎಂದಿನಂತೆ ವಾಹನ‌ ಸಂಚಾರವಿದ್ದು , ವಾಹನ ಸವಾರರಿಗೆ ಯಾವುದೇ ತೊಂದರೆ ಆಗುವುದಿಲ್ಲ.

ಇದನ್ನು ಓದಿ –ರಸ್ತೆಯಲ್ಲಿ ಬಿದ್ದು ಮನುಷ್ಯರು ಸಾಯುತ್ತಾರೆ – ಕೋಡಿಮಠದ ಸ್ವಾಮೀಜಿ

ಚಿಕ್ಕಮಗಳೂರು-ದಕ್ಷಿಣ ಕನ್ನಡ ಜಿಲ್ಲೆಯನ್ನು ಚಾರ್ಮಾಡಿ ಘಾಟ್ ಸಂಪರ್ಕಿಸುತ್ತದೆ. ಬೆಂಗಳೂರಿನಿಂದದಕ್ಷಿಣ ಕನ್ನಡ, ಉಡುಪಿ ಭಾಗಗಳಿಗೆ ತೆರಳುವ ಮಂದಿ ಶಿರಾಡಿ ಮೂಲಕ ತೆರಳುತ್ತಿದ್ದರು. ಆದರೆ ಶಿರಾಡಿ ಘಾಟಿಯಲ್ಲಿ ಅಲ್ಲಲ್ಲಿ ಗುಡ್ಡ ಕುಸಿತದ ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಚಾರ್ಮಾಡಿ ಘಾಟಿ ರಸ್ತೆಯಲ್ಲಿ ವಾಹನಗಳ ಸಂಚಾರ ಹೆಚ್ಚಾಗಿದೆ.

error: Content is protected !!