ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಮತ್ತೋರ್ವ ಶಾಸಕ ಅಸಮಾಧಾನಗೊಂಡಿದ್ದಾರೆ. ರೋಹಿಣಿ ಸಿಂಧೂರಿ ಹೋದ ಕಡೆಯಲ್ಲಾ ಸರ್ಕಾರದ ವಿರುದ್ಧವೇ ನಡೆಯುವ ಪ್ರವೃತ್ತಿ ರೂಢಿಸಿಕೊಂಡಿದ್ದಾರೆ ಅಂತಾ ಶಾಸಕ ತನ್ವೀರ್ ಸೇಠ್ ಆರೋಪ ಮಾಡಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿರುವ ಅವರು, ಸರ್ಕಾರವನ್ನೇ ಪ್ರಶ್ನಿಸುವ ಪ್ರವೃತ್ತಿಯನ್ನ ರೋಹಿಣಿ ಸಿಂಧೂರಿ ಬೆಳೆಸಿಕೊಂಡಿದ್ದಾರೆ ಎಂದರು. ಈ ಹಿಂದೆ ಸರ್ಕಾರದ ವಿರುದ್ಧವೇ ಕೆಎಟಿಗೆ ಹೋಗಿದ್ದರು. ಸರ್ಕಾರಿ ಸಭೆಯಲ್ಲಿ ಜನಪ್ರತಿನಿಧಿಗಳು ಮಾತನಾಡುವುದು ವೈಯಕ್ತಿಕವಲ್ಲ. ಜನರ ಸಮಸ್ಯೆಯನ್ನ ಪ್ರಸ್ತಾಪ ಮಾಡುತ್ತಾರೆ. ಶಾಸಕರಿಗೆ ಯಾವುದೇ ಸಮಸ್ಯೆಗಳಿಲ್ಲ, ಜನರ ಸಮಸ್ಯೆಗಳನ್ನಷ್ಟೇ ಪ್ರಸ್ತಾಪ ಮಾಡುತ್ತಾರೆ. ಆದ್ರೆ ಅಧಿಕಾರ ಇದೆ ಅಂತ ಪತ್ರ ಬರೆಯೋಕೆ ಆಗುತ್ತಾ? ಅಥವಾ ತಪ್ಪನ್ನ ತಿದ್ದುಕೊಳ್ಳಬೇಕಾ ಅಂತಾ ತನ್ವೀರ್ ಸೇಠ್ ಪ್ರಶ್ನೆ ಮಾಡಿದ್ದಾರೆ.
ಈಗಾಗಲೇ ರೋಹಿಣಿ ಸಿಂಧೂರಿ ವಿರುದ್ಧ ಕೆ.ಆರ್ ನಗರದ ಶಾಸಕ ಸಾರಾ ಮಹೇಶ್, ಹುಣಸೂರು ಶಾಸಕ ಮಂಜುನಾಥ್, ನಂಜನಗೂಡು ಶಾಸಕ ಹರ್ಷವರ್ಧನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದೀಗ ನರಸಿಂಹ ರಾಜ ಕ್ಷೇತ್ರದ ಶಾಸಕ ತನ್ವೀರ್ ಸೇಠ್ ಕೂಡ ಸಿಂಧೂರಿ ವಿರುದ್ಧ ಬೇಸರ ಹೊರಹಾಕಿದ್ದಾರೆ.
ಬೆಂಗಳೂರು : 10 ವರ್ಷದ ಬಾಲಕಿಗೆ ಚಾಕ್ಲೆಟ್ ಕೊಡಿಸುವುದಾಗಿ ನಂಬಿಸಿ ಕಾಮುಕನೊಬ್ಬ ಅತ್ಯಾಚಾರ ಎಸೆಗಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ… Read More
ಬೆಂಗಳೂರು : ಸಿಎಂ ಸಿದ್ದರಾಮಯ್ಯ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸಲ್ಲ ಎಂದು ಮತ್ತೊಮ್ಮೆ ಸ್ಪಷ್ಟನೆ ನೀಡಿದ್ದಾರೆ. ಪ್ಲೆಸ್ ಕ್ಲಬ್… Read More
ನವದೆಹಲಿ ,ಮೇ 20 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,400 ರೂಪಾಯಿ ದಾಖಲಾಗಿದೆ. 24… Read More
ಪ್ರಕರಣದಿಂದ ಸ್ವಾರ್ಥ ರಾಜಕಾರಣಿಗಳಿಗೆ, ಕೆಲ ಮಾಧ್ಯಮಗಳಿಗೆ, ಗಂಜಿ ಗಿರಾಕಿಗಳಿಗೆ ಮಾತ್ರ ಲಾಭ ?! ಬರಗಾಲದಿಂದ ರಾಜ್ಯದಲ್ಲಿ ಆಗಿರುವ ಅನಾಹುತ ,… Read More
ಕುಂದಾಪುರ : ಮೇ 16 ರ ರಾತ್ರಿ ಗೋಪಾಡಿ ಗ್ರಾಮದ ಮೂಡುಗೋಪಾಡಿಯ ನಿವಾಸಿ ಜಯಂತಿ ಶೆಟ್ಟಿ (61) ಅವರ ಮೃತದೇಹ… Read More
2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More
This website uses cookies.
Leave a Comment