ಚಿತ್ರವೊಂದರಲ್ಲಿ ಚಿತ್ರರಸಿಕರಿಗೆ ಅದರಲ್ಲೂ “ಪವರ್ಸ್ಟಾರ್’ ಪುನೀತ್ ರಾಜ್ಕುಮಾರ್ ಅಭಿಮಾನಿಗಳಿಗೆ ಏನೇನು ಕೊಡಬೇಕು ಎಂಬುದನ್ನು ಚೆನ್ನಾಗಿ ಅರಿತಿರುವುದರಿಂದಲೇ ಕನ್ನಡ ಚಿತ್ರರಂಗದಲ್ಲಿ ಯಶಸ್ಸಿನ ಮೆಟ್ಟಿಲು ಏರುತ್ತಿರುವ ನಿರ್ದೇಶಕ ಎಂಬ ಖ್ಯಾತಿಗೆ ಪಾತ್ರರಾಗಿದ್ದಾರೆ ಸಂತೋಷ್ ಆನಂದ್ ರಾಮ್. ಇದಕ್ಕೆ ಉದಾಹರಣೆಯೆಂದರೆ “ರಾಜಕುಮಾರ’ ಮತ್ತು “ಯುವರತ್ನ’.
ಈ ಇಬ್ಬರ ಜೋಡಿ ಯಶಸ್ವಿಯಾಗಿರುವುದರಿಂದಲೇ ಇವರಿಂದ ಹೊಸ ಚಿತ್ರದ ನಿರೀಕ್ಷೆ ಇಟ್ಟುಕೊಂಡಿದ್ದಾರೆ ಅಭಿಮಾನಿಗಳು. ಈಗ ಇವರಿಗೆ ಖುಷಿ ಕೊಡುವ ಸುದ್ದಿಯೊಂದನ್ನು ಸ್ವತಃ ಸಂತೋಷ್ ಆನಂದ್ ರಾಮ್ ಅವರೇ ಪ್ರಕಟಿಸಿದ್ದಾರೆ. ಅದೆಂದರೆ, ಮುಂದಿನ ವರ್ಷ ನಮ್ಮ ಕಾಂಬಿನೇಷನ್ನಲ್ಲಿ ಹೊಸ ಚಿತ್ರ ಸೆಟ್ಟೇರಲಿದೆ ಎಂದು.
ತಮ್ಮ ಟ್ವಿಟರ್ ಖಾತೆಯಲ್ಲಿ ಪುನೀತ್ ಜೊತೆಗಿರುವ ಚಿತ್ರವನ್ನು ಹಂಚಿಕೊಂಡಿದ್ದಾರೆ. ಪುನೀತ್ ಮತ್ತು ನನ್ನ ಕಾಂಬಿನೇಷನ್ನ ಹೊಸ ಚಿತ್ರದ ಬಗ್ಗೆ ಅಭಿಮಾನಿಗಳು ಹಾಗೂ ಪ್ರೇಕ್ಷಕರು ಯಾವಾಗಲೂ ಕೇಳುತ್ತಿದ್ದರು ಎಂದೂ ಹೇಳಿಕೊಂಡಿದ್ದಾರೆ. ಈ ಚಿತ್ರವನ್ನೂ ಹೊಂಬಾಳೆ ಫಿಲಂಸ್ನವರೇ ನಿರ್ಮಿಸುತ್ತಿರುವುದು. ಈ ವಿಷಯವನ್ನೂ ಅವರೇ ತಿಳಿಸಿದ್ದಾರೆ.
ನಿಮ್ಮೆಲ್ಲರ ಪ್ರೀತಿಗೆ ಧನ್ಯವಾದಗಳು. “ನಿಮ್ಮ ಅಭಿಮಾನ ನಮಗೆ ಶ್ರೀ ರಕ್ಷೆ’ ಎಂದೂ ಬರೆದುಕೊಂಡಿದ್ದಾರೆ.
ಹೆಚ್.ಡಿ ರೇವಣ್ಣಗೆ ಮಧ್ಯಾಹ್ನದಿಂದ ಹೊಟ್ಟೆ ಉರಿ, ಎದೆನೋವು ಬೌರಿಂಗ್ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ಮಾಡಿಸಿದ್ದ ಎಸ್ಐಟಿ ಅಧಿಕಾರಿಗಳು ಎದೆ ಉರಿ… Read More
ಬೆಂಗಳೂರು : ಸೋಮವಾರ ಬಾಗಲಕೋಟೆ ಮತ್ತು ಬೀದರ್ ಜಿಲ್ಲೆಗಳಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜಿತರಾಗಿದ್ದ ಸರ್ಕಾರಿ ಶಾಲಾ ಮುಖ್ಯೋಪಾಧ್ಯಾಯರು ಮತ್ತು ಸಹಾಯಕ… Read More
ನವದೆಹಲಿ : ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನದಲ್ಲಿ ಶೇ. 9.45% ರಷ್ಟು ಮತದಾನವಾಗಿದೆ ಎಂದು ಎಂದು ಚುನಾವಣಾ… Read More
ಶಿವಮೊಗ್ಗ : ರಾಷ್ಟ್ರ ಮಟ್ಟದಲ್ಲಿ ಹಾಸನದ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈ ಪ್ರಕರಣ ಸದ್ದು ಮಾಡುತ್ತಿದ್ದು, ಪ್ರಜ್ವಲ್… Read More
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (PM Narendra Modi) ಮೊದಲ ಬಾರಿಗೆ ಪ್ರಜ್ವಲ್ ರೇವಣ್ಣ (Prajwal Revanna) ವಿಡಿಯೋ ಪ್ರಕರಣಕ್ಕೆ… Read More
ಮಂಡ್ಯ :ನೆನ್ನೆ ಮಳೆಯಿಂದಾಗಿ ಮರವೊಂದು ಕಾರಿನ ಮೇಲೆ ಬಿದ್ದ ಪರಿಣಾಮ ವ್ಯಕ್ತಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ ನಗರದ ಜನರಲ್… Read More
This website uses cookies.
Leave a Comment