ಭ್ರಷ್ಟಾಚಾರಕ್ಕೆ ಮತ್ತೊಂದು ಹೆಸರು ಕಾಂಗ್ರೆಸ್ ಎಂದು ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಆರೋಪಿಸಿದರು.
ಕಾಂಗ್ರೆಸ್ ಅಧಿಕಾರದಲ್ಲಿ ಇರಲಿ, ಇಲ್ಲದಿರಲಿ, ನಿರಂತರವಾಗಿ ಭ್ರಷ್ಟಾಚಾರ ಮಾಡಿಕೊಂಡು ಬಂದಿದೆ. ಕಾಂಗ್ರೆಸ್ ಪಕ್ಷವು ಅಧಿಕಾರದ್ದಲ್ಲಿದ್ದಾಗ ಲೂಟಿಹೊಡೆದಿದೆ ಎಂದು ದೂರಿದರು. ಮೈಸೂರಿನಲ್ಲಿ ಗುರುವಾರ ಕೇಂದ್ರ ಸಚಿವರು ವರದಿಗಾರರೊಂದಿಗೆ ಮಾತನಾಡಿದರು.
ರಸಗೊಬ್ಬರಕ್ಕೆ ಸಂಬಂಧಿಸಿದಂತೆ ಸ್ವಲ್ಪ ಸಮಸ್ಯೆ ಆಗಿದೆ. ಈ ವಿಷಯವನ್ನು ಕೇಂದ್ರ ಸರ್ಕಾರವು ಗಂಭೀರವಾಗಿ ಪರಿಗಣಿಸಿದೆ. ರಸಗೊಬ್ಬರವನ್ನು ಹೊರ ದೇಶಗಳಿಂದ ತರಿಸಿಕೊಳ್ಳಲಾಗುತ್ತಿದೆ. ದೇಶದಲ್ಲೇ ರಸಗೊಬ್ಬರ ಉತ್ಪಾದನೆ ಹೆಚ್ಚಿಸಿ, ಸ್ವಾವಲಂಬಿಯಾಗುವುದಕ್ಕೆ ಆದ್ಯತೆ ಕೊಡಲಾಗುತ್ತಿದೆ ಎಂದು ಶೋಭಾ ಕರಂದ್ಲಾಜೆ ಉತ್ತರಿಸಿದರು.
ಕೃಷಿ ಕಾಯ್ದೆಗಳ ವಿರುದ್ಧ ನಡೆಯುತ್ತಿರುವ ಹೋರಾಟ ರಾಜಕೀಯ ಪ್ರೇರಿತ ಎಂದು ಜರಿದರು. ಕೇಂದ್ರವು ರೈತರ ಹಿತಕ್ಕೆ ಬದ್ಧವಾಗಿದೆ ಎಂದು ಅವರು ಪುನರುಚ್ಚರಿಸಿದರು.
ಇದಕ್ಕೂ ಮುನ್ನ ಸಚಿವರು ಅರಮನೆ ಅಂಗಳದಲ್ಲಿ ಮಾವುತರು ಹಾಗೂ ಕಾವಾಡಿಗರಿಗೆ ಏರ್ಪಡಿಸಿದ್ದ ಉಪಾಹಾರ ಕೂಟದಲ್ಲಿ ಪಾಲ್ಗೊಂಡಿದ್ದರು. ತಾವು 2008 ರಲ್ಲಿ ಉಸ್ತುವಾರಿ ಸಚಿವರಾಗಿದ್ದಾಗ ಮಾವುತರು ಹಾಗೂ ಕಾವಾಡಿಗರಿಗೆ ಉಪಾಹಾರ ಕೊಡುವುದನ್ನು ಆರಂಭಿಲಾಯಿತು. ಹಿಂದೆ ಅವರಿಗೆ ಗೌರವಧನವಾಗಿ 5 ಸಾವಿರರೂ. ನೀಡಲಾಗುತ್ತಿತ್ತು. ಆದರೆ ಈಗ ಅವರನ್ನು ಸರ್ಕಾರಿ ನೌಕರರೆಂದು ಪರಿಗಣಿಸಲಾಗಿದೆ. ತಿಂಗಳ ಸಂಬಳವನ್ನು ಕೊಡಲಾಗುತ್ತಿದೆ ಎಂದು ಕೇಂದ್ರ ಸಚಿವರು ನುಡಿದರು.
ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More
ಹಾಸನ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಕುರಿತು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದ ಮಾಜಿ… Read More
ನವದೆಹಲಿ ,ಮೇ 2 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,550 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ವಿದ್ಯಾರ್ಥಿಯೊಬ್ಬ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಪಿಹೆಚ್ಡಿ (PhD) ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪವಾಗಿ ಮೃತಪಟ್ಟಿದ್ದಾನೆ. ರಂಗನಾಥ್ ನಾಯಕ್ (27)… Read More
(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More
ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More
This website uses cookies.
Leave a Comment