ಮಂಡ್ಯ ಜಿಲ್ಲಾ ಹಾಲು ಒಕ್ಕೂಟದಲ್ಲಿ ಹಾಲಿಗೆ ನೀರು ಮಿಶ್ರಣ ಹಗರಣದ ನಂತರ ಈಗ ಹಾಲಿಗೆ ರಾಸಾಯನಿಕ ಬೆರೆಸುತ್ತಿರುವ ಅಂಶ ಬೆಳಕಿಗೆ ಬಂದಿದೆ.
ಈ ಸಂಗತಿ ರೈತರಲ್ಲಿ ಹಾಗೂ ಸಾರ್ವಜನಿಕರಲ್ಲಿ ಮನ್ಮುಲ್ ಮೇಲಿನ ವಿಶ್ವಾಸವನ್ನು ಕಡಿಮೆ ಮಾಡುತ್ತಿದೆ.
ಕಳೆದ ವರ್ಷವಷ್ಟೇ ಮನ್ಮುಲ್ಗೆ ಸರಬರಾಜು ಆಗುವ ಹಾಲಿಗೆ ನೀರು ಮಿಶ್ರಣವಾಗುತ್ತಿದೆ ಎಂಬ ಹಗರಣ ಬೆಳಕಿಗೆ ಬಂದಿತ್ತು.
ಪ್ರಕರಣ ಸಿಐಡಿ ತನಿಖೆಯಲ್ಲಿರುವಾಗಲೇ ಹಾಲಿಗೆ ರಾಸಾಯನಿಕ ಕಲಬೆರಕೆ ಹಗರಣ ಬೆಳಕಿಗೆ ಬಂದಿರುವುದು ರೈತರಲ್ಲಿ ಆತಂಕ ಮೂಡಿದೆ.
ಬೆಳಕಿಗೆ ಬಂದಿದ್ದು ಎಲ್ಲಿ ?
ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೆ.ಹೊನ್ನಗೆರೆ ಡೈರಿಯಿಂದ ಪೂರೈಕೆಯಾಗುತ್ತಿದ್ದ ಹಾಲಿನಲ್ಲಿ ಮೊದಲಿಗೆ ರಾಸಾಯನಿಕ ಮಿಶ್ರಣ ಪತ್ತೆಯಾಗಿದೆ.
ಗ್ರಾಮದಲ್ಲಿ ಶೇಖರಣೆಯಾದ ಹಾಲಿಗೆ ನೀರು ಹಾಗೂ ರಾಸಾಯನಿಕ ಬೆರಸಿ ಮನ್ಮುಲ್ಗೆ ವಂಚನೆ ಮಾಡುತ್ತಿರುವ ಬಗ್ಗೆ ಅಧಿಕಾರಿಗಳಿಗೆ ಅನುಮಾನ ಬಂದಿದೆ.
ನಂದಿನಿ ಹಾಲಿನ ಮೇಲೆ ಅನುಮಾನ ಮೂಡುವಂತೆ ವಂಚಕರು ಪ್ಲ್ಯಾನ್ ಮಾಡಿದ್ದಾರೆ.
ಪ್ರತಿನಿತ್ಯ 35 ಕ್ಯಾನ್ ಹಾಲು ಸರಬರಾಜು ಮಾಡುತ್ತಿದ್ದ ಕೆ.ಹೊನ್ನಲಗೆರೆ ಡೈರಿಯ ಮೇಲೆ ಅನುಮಾನ ವ್ಯಕ್ತಪಡಿಸಿದ ಅಧಿಕಾರಿಗಳು ಪರಿಶೀಲನೆ ನಡೆಸಿದಾಗ ಇದು ಬೆಳಕಿಗೆ ಬಂದಿದೆ. ಇದೀಗ ಕೆ.ಹೊನ್ನಲಗೆರೆ ಡೈರಿಯಲ್ಲಿ ಹಾಲು ಶೇಖರಣೆ ಸ್ಥಗಿತಗೊಳಿಸುವಂತೆ ಮನ್ಮುಲ್ ಆಡಳಿತ ಮಂಡಳಿ ಆದೇಶ ಹೊರಡಿಸಿದೆ.
ರಾಸಾಯನಿಕ ಹೇಗೆ ಬೆರಿಸುತ್ತಾರೆ ? :
ಪರೀಕ್ಷೆಯಲ್ಲಿ ಹಾಲಿನ ಗುಣಮಟ್ಟ ಹೆಚ್ಚು ತೋರಿಸುವಂತೆ ರಾಸಾಯನಿಕ ಬೆರಕೆ ಮಾಡಲಾಗುತ್ತಿತ್ತು.
ಹಾಲಿಗೆ ನೀರು ಹಾಕಿದಾಗ ಕಡಿಮೆ ಕೊಬ್ಬಿನಾಂಶ ತೋರಬಾರದೆಂದು ರಾಸಾಯನಿಕ ಬೆರಕೆ ಮಾಡಲಾಗುತ್ತಿತ್ತು.
ಉಪ್ಪಿನಾಂಶದ ರಾಸಾಯನಿಕ ಕಲಬೆರಕೆಯನ್ನು ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ.
ಟ್ಯಾಂಕರ್ನೊಳಗೆ ಮತ್ತೊಂದು ಬೇಬಿ ಟ್ಯಾಂಕ್ ನಿರ್ಮಿಸಿ ಕೋಟಿ ಕೋಟಿ ಹಣವನ್ನು ಹಾಲಿನ ರೂಪದಲ್ಲಿ ಮನ್ಮುಲ್ಗೆ ವಂಚಿಸುತ್ತಿದ್ದ ಗ್ಯಾಂಗ್ನ ನಿಜರೂಪ ಬಯಲಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಸಪ್ತಪದಿ ತುಳಿದ ಮೂರೇ ದಿನದಲ್ಲಿ ಹೃದಯಾಘಾತದಿಂದ ನವವಿವಾಹಿತ ಅಕಾಲಿಕ ಸಾವು
ಏ.7 ಕ್ಕೆ ಮೇಲುಕೋಟೆ ವೈರಮುಡಿ ಉತ್ಸವ
ಮಂಡ್ಯದಲ್ಲಿ ಭೀಕರ ಅಪಘಾತ: ಸಾಫ್ಟ್ವೇರ್ ಇಂಜಿನಿಯರ್ ದಾರುಣ ಸಾವು