ನಿರೂಪಕಿ,ನಟಿ ಅನುಶ್ರೀಗೆ ಮತ್ತೆ ಡ್ರಗ್ಸ್ ಕಂಟಕ ಕಾಡುತ್ತಿದೆ.
ಈ ಕಂಟಕದಿಂದ ಪಾರಾಗಲು ಪ್ರಯತ್ನ ಮುಂದುವರೆಸಿರುವ ಅನುಶ್ರೀ ಮುಂಬಯಿಗೆ ಹಾರಿ ಹೋಗಿದ್ದಾರೆ. ಅಲ್ಲಿಂದಲೇ ತಮ್ಮ ವಕೀಲರಿಗೆ ಕರೆ ಮಾಡಿ ಮಾತುಕತೆ ನಡೆಸಿದ್ದಾರೆ.
ಡ್ರಗ್ಸ್ ಪ್ರಕರಣ ಎದುರಿಸುತ್ತಿರುವ ಕಿಶೋರ್ ಅಮನ್ ಶೆಟ್ಟಿ ಸಹಿ ಹಾಕಿರುವ ಆರೋಪ ಪಟ್ಟಿಯಲ್ಲಿ
ಅನುಶ್ರೀ ಹೆಸರು ಉಲ್ಲೇಖವಾಗಿತ್ತು. ಆದರೆ ಈ ಬಗ್ಗೆ ಪ್ರತಿಕ್ರಿಯಿಸಲು ನಿನ್ನೆ ಅನುಶ್ರೀ ಎಲ್ಲಿಯೂ ಸಂಪರ್ಕಕ್ಕೆ ಸಿಕ್ಕಿರಲಿಲ್ಲ.
ಅಲ್ಲದೆ ಬೆಂಗಳೂರಿನ ಮನೆಯಲ್ಲೂ ಇರಲಿಲ್ಲ. ಕೊನೆಗೆ ಅವರು ಮುಂಬೈಗೆ ತೆರಳಿದ್ದಾರೆ ಎಂಬ ಮಾಹಿತಿ ಲಭ್ಯವಾಗಿತ್ತು.
ಸದ್ಯ ತಮ್ಮ ಆಪ್ತರ ಜೊತೆ ಅನುಶ್ರೀ ಮುಂಬೈನಲ್ಲಿರುವುದು ಖಚಿತವಾಗಿದೆ. ಅಲ್ಲಿಂದಲೇ ತಮ್ಮ ವಕೀಲರ ಜೊತೆ ಪ್ರಕರಣ ಸಂಬಂಧ ಚರ್ಚೆ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
- ಕರ್ನೂಲಿನಲ್ಲಿ ಭೀಕರ ರಸ್ತೆ ಅಪಘಾತ: ಮಂಡ್ಯದ ನಟಿ `ಪವಿತ್ರ ಜಯರಾಂ’ ಸಾವು
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ಪ್ರಜ್ವಲ್ ಪ್ರಕರಣ : ಸಿಬಿಐಗೆ ವಹಿಸಲ್ಲ – ಸಿಎಂ ಸಿದ್ದು
- ಕೊಡಗು: ಬಾಲಕಿಯನ್ನು ಭೀಕರ ಹತ್ಯೆಗೈದ ಆರೋಪಿ ಆತ್ಮಹತ್ಯೆ
- ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ