ಮದುವೆ ಸಮಾರಂಭಗಳಲ್ಲಿ ಪಾಲ್ಗೊಳ್ಳುವವರ ಸಂಖ್ಯೆಯನ್ನು 500ಕ್ಕೆ ಮಿತಿಗೊಳಿಸಿ ಸರ್ಕಾರ ಮಾರ್ಗಸೂಚಿ ಆದೇಶ ಹೊರಡಿಸಿದೆ.
ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಓಮಿಕ್ರಾನ್ ಸೋಂಕು ಪತ್ತೆಯಾಗಿರುವುದು ಆತಂಕದ ಸಂಗತಿಯಾಗಿದೆ ಹೀಗಾಗಿ ಹೊಸ ತಳಿ ನಿಯಂತ್ರಣಕ್ಕಾಗಿ ಸರ್ಕಾರ ಹಲವು ನಿರ್ಬಂಧಗಳನ್ನು ವಿಧಿಸಲು ಮುಂದಾಗಿದೆ.
ರಾಜ್ಯದಲ್ಲಿ ಓಮಿಕ್ರಾನ್ ಪತ್ತೆಯಾಗುತ್ತಿದ್ದಂತೆ ಎಚ್ಚೆತ್ತುಕೊಂಡಿರುವ ಸರ್ಕಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಆರ್.ಅಶೋಕ್ ಓಮಿಕ್ರಾನ್ ನಿಯಂತ್ರಿಸುವ ಉದ್ದೇಶದಿಂದ ಹಲವು ನಿರ್ಬಂಧಗಳನ್ನು ವಿಧಿಸುವ ಬಗ್ಗೆ ಚರ್ಚೆ ನಡೆಸಲಾಗಿದೆ ಎಂದರು
ಮದುವೆ ಸಮಾರಂಭಗಳಲ್ಲಿ ಪಾಲ್ಗೊಳ್ಳುವವರ ಸಂಖ್ಯೆಯನ್ನು 500ಕ್ಕೆ ಸೀಮಿತಗೊಳಿಸಲು ನಿರ್ಧರಿಸಲಾಗಿದೆ. ಯಾವುದೇ ಸಮಾರಂಭಗಳಲ್ಲಿ ಹೆಚ್ಚು ಜನರು ಪಾಲ್ಗೊಳ್ಳುವುದರಿಂದ ಸೋಂಕು ವೇಗವಾಗಿ ಹರಡುವ ಭೀತಿ ಇದೆ. ಅದನ್ನು ಈಗಿನಿಂದಲೇ ತಪ್ಪಿಸುವುದು ಅನಿವಾರ್ಯವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ
- ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ
- ಪ್ರಜ್ವಲ್ ಪೆಂಡ್ರೈವ್ ಪ್ರಕರಣ : 10 ಪೆನ್ ಡ್ರೈವ್ ಪ್ರೀತಂ ಗೌಡ ಆಪ್ತರ ಮನೆಯಲ್ಲಿ ಪತ್ತೆ