Karnataka

ನಮ್ಮ ಮೆಟ್ರೋದಲ್ಲಿ ವಿವಿಧ 236 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಮೇಂಟೇನರ್ಸ್, ಸ್ಟೇಷನ್ ಕಂಟ್ರೋಲರ್/ಟ್ರೇನ್ ಅಪರೇಟರ್, ಸೆಕ್ಷನ್ ಇಂಜಿನಿಯರ್ ಸೇರಿ ಒಟ್ಟು 236 ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲಾಗುವುದು.

24-4-2023 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ.

ಅಭ್ಯರ್ಥಿಗಳು ಆನ್​ಲೈನ್ (Online) ಮೂಲಕ ಅರ್ಜಿ ಸಲ್ಲಿಸಬೇಕು.

ವಿದ್ಯಾರ್ಹತೆ

ಅಭ್ಯರ್ಥಿಗಳು ನಿಗದಿಪಡಿಸಿದ ಅಗತ್ಯ ಶೈಕ್ಷಣಿಕ ಅರ್ಹತೆಯಲ್ಲಿ ಕನಿಷ್ಠ ಶೇ. 50 ರಷ್ಟು ಅಂಕಗಳನ್ನು ಗಳಿಸಿರಬೇಕು.

ಮೇಂಟೇನರ್ ಹುದ್ದೆಗೆ ಮೆಟ್ರಿಕ್ಯುಲೇಷನ್ ಜೊತೆಗೆ ಮುಂದಿನ ಯಾವುದೇ ಇಂಜಿನಿಯರಿಂಗ್ ಟ್ರೇಡ್ ನಲ್ಲಿ ಎರಡು ವರ್ಷಗಳ ಐಟಿಐ ಪದವಿ ಪಡೆದಿರಬೇಕು.

ಸ್ಟೇಷನ್ ಕಂಟ್ರೋಲರ್ ಹುದ್ದೆಗೆ ಯಾವುದೇ ಬ್ಯಾಂಕ್ ನಲ್ಲಿ ಮೂರು ವರ್ಷಗಳ ಡಿಪ್ಲೋಮಾ ಪದವಿ ಪಡೆದಿರಬೇಕು.

*ಸೆಕ್ಷನ್ ಇಂಜಿನಿಯರ್ ಹುದ್ದೆಗೆ ಸಿವಿಲ್ ಇಂಜಿನಿಯರಿಂಗ್ ಅಥವಾ ತತ್ಸಮಾನ ಪದವಿ ಪಡೆದಿರಬೇಕು.

ವಯೋಮಿತಿ

ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಠ 35 ವರ್ಷ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 40 ವರ್ಷ. 2ಎ, 2ಬಿ ಇತರ ವರ್ಗದ ಅಭ್ಯರ್ಥಿಗೆ 38 ವರ್ಷ ನಿಗದಿಪಡಿಸಲಾಗಿದ್ದು, ಮಾಜಿ ಸೈನಿಕರಿಗೆ ಸಂಸ್ಥೆಯ ನಿಯಮಾನುಸಾರ ವಯೋಸಡಿಲಿಕೆ ಇದೆ.

ಪ್ರಮುಖ ದಿನಾಂಕಗಳು

ಅರ್ಜಿ ಸಲ್ಲಿಸಲು ಕೊನೆಯ ದಿನ 24-04-2023

ಶುಲ್ಕ ಪಾವತಿಗೆ ಕೊನೆಯ ದಿನ 27-04-2023

ಮೆಂಟೇನರ್ ಮತ್ತು ಸೆಕ್ಷನ್ ಇಂಜಿನಿಯರ್ ಹುದ್ದೆಗಳಿಗೆ 7-06-2023 ರಂದು ಪರೀಕ್ಷೆ ನಡೆಯಲಿದೆ.

ಸ್ಟೇಷನ್ ಕಂಟ್ರೋಲರ್/ಟ್ರೇ ನ್‌ಅಪರೇಟರ್ ಹುದ್ದೆಗಳಿಗೆ 8-06-2023 ರಂದು ಪರೀಕ್ಷೆ ನಡೆಯಲಿದೆ.

ವೇತನ

ಸ್ಟೇಷನ್ ಕಂಟ್ರೋಲರ್ ಗೆ 35,000 ರೂ.ನಿಂದ 82,660 ರೂ.ಸೆಕ್ಷನ್ ಇಂಜಿನಿಯರ್ ಗೆ 40,000 ರೂ.ನಿಂದ 94,500 ರೂ.ಮೆಂಟೇನರ್ಸ್ ಗೆ 25,000 ರೂ.ನಿಂದ 59,000 ರೂ.ಮಾಸಿಕ ವೇತನ ಇರಲಿದೆ.ಇದನ್ನು ಓದಿ –ನಿರ್ಭಯಾಳ ಸಹೋದರನನ್ನು ಪೈಲಟ್ ಆಗಲು ಸಹಾಯ ಮಾಡಿದ ರಾಹುಲ್ ಗಾಂಧಿ

Team Newsnap
Leave a Comment

Recent Posts

ಕ್ರೇಜಿವಾಲ್ ಗೆ ಮಧ್ಯಂತರ ಜಾಮೀನು ಪರಿಗಣನೆಗೆ ಸುಪ್ರೀಂ ಸೂಚನೆ

ನವದೆಹಲಿ : ಲೋಕಸಭೆ ಚುನಾವಣೆಯನ್ನು ಹಿನ್ನಲೆಯಲ್ಲಿ ರದ್ದಾಗಿರುವ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌… Read More

May 3, 2024

ಬಿಜೆಪಿ ಜೊತೆಗಿನ ಮೈತ್ರಿ ಸದ್ಯಕ್ಕೆ ನನಗೆ ಮುಖ್ಯ ಅಲ್ಲ: ಎಚ್ ಡಿ ಕೆ

ರಾಯಚೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತೀವ್ರ ಪೇಚಿಗೆ ಸಿಲುಕಿರುವ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ… Read More

May 3, 2024

ಹೆಚ್.ಡಿ ರೇವಣ್ಣ ವಿರುದ್ಧ ಕಿಡ್ನಾಪ್ ಕೇಸ್ ದಾಖಲು

ಮೈಸೂರು : ಮೈಸೂರು ಜಿಲ್ಲೆ ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಮಗನಿಂದ ರೇವಣ್ಣ ವಿರುದ್ಧ ದೂರು ದಾಖಲಿಸಲಾಗಿದ್ದು ,ಎಫ್‍ಐಆರ್… Read More

May 3, 2024

ರಾಮನಗರ : ಐಜೂರಿನಲ್ಲಿ ಕರಡಿ ಪ್ರತ್ಯಕ್ಷ

ರಾಮನಗರ : ಮೂರು ದಿನಗಳ ಹಿಂದೆ ಕರಡಿಯೊಂದು ಐಜೂರಿನ ಜನವಸತಿ ಪ್ರದೇಶದಲ್ಲಿ ನಿರ್ಭೀತಿಯಿಂದ ಓಡಾಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.… Read More

May 3, 2024

ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಕೇಸ್ ದಾಖಲು

ಬೆಂಗಳೂರು : . ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದ್ದು , ಸಂತ್ರಸ್ತೆಯೊಬ್ಬರು ಜಡ್ಜ್ ಮುಂದೆ ಸಿಆರ್ ಪಿಸಿ… Read More

May 3, 2024

ಪೊಲೀಸ್ ಠಾಣೆ ಸಮೀಪದಲ್ಲೇ ಪತ್ನಿಯನ್ನು ಕೊಂದ ಪತಿ

ಬೆಂಗಳೂರು : ಕೋರಮಂಗಲದ ಆರನೇ ಬ್ಲಾಕ್ ನಲ್ಲಿ , ಕಿರುಕುಳದ ದೂರು ನೀಡಿದ ಪತ್ನಿಯನ್ನು ಪೊಲೀಸ್ ಠಾಣೆ ಎದುರಲ್ಲೇ ಪತಿ… Read More

May 3, 2024