Karnataka

ಜು.19 ರಿಂದ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭ – ಸಚಿವೆ ಲಕ್ಷ್ಮಿ

ಬೆಂಗಳೂರು: ಗೃಹಲಕ್ಷ್ಮಿ ಯೋಜನೆ ನಿರೀಕ್ಷೆಯಲ್ಲಿದ್ದ ಮಹಿಳೆಯರು ಜುಲೈ 19 ರಿಂದ ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಅವರು ಶನಿವಾರ ಸುದ್ದಿಗೋಷ್ಠಿ ನಡೆಸಿ, ಜು.17 ರಂದು (ಸೋಮವಾರ) ಗೃಹಲಕ್ಷ್ಮಿ ಯೋಜನೆ ಆ್ಯಪ್‌ಗೆ ಚಾಲನೆ ನೀಡಲಾಗುವುದು. ಜು.19 ರಿಂದ ಅರ್ಜಿ ಸಲ್ಲಿಸಬಹುದು ಎಂದರು.

ಪಡಿತರ ಚೀಟಿಯಲ್ಲಿ ಯಜಮಾನಿ ಮಹಿಳೆ ಎಂದು ಗುರುತಿಸಿರುವ ಮಹಿಳೆಯು ಯೋಜನೆಯ ಫಲಾನುಭವಿಯಾಗುತ್ತಾರೆ. ಆದರೆ ಫಲಾನುಭವಿ ಯಜಮಾನಿ ಮಹಿಳೆ ಅಥವಾ ಆಕೆಯ ಪತಿ ಆದಾಯ ತೆರಿಗೆ ಅಥವಾ ಜಿಎಸ್‌ಟಿ ಪಾವತಿದಾರರಾಗಿರಬಾರದು. ಅಂತಹವರಿಗೆ ಈ ಯೋಜನೆ ಸೌಲಭ್ಯ ಸಿಗಲಿದೆ ಎಂದು ಸಚಿವರು ಸ್ಪಷ್ಟಪಡಿಸಿದರು.

ಈಗಾಗಲೇ ಪಡಿತರ ಕಾರ್ಡ್‌ನಲ್ಲಿ ಗುರುತಿಸಲಾಗಿರುವ ಪ್ರತಿಯೊಬ್ಬ ಯಜಮಾನಿ ಮಹಿಳೆಗೂ ಅರ್ಜಿ ಸಲ್ಲಿಕೆಯ ದಿನಾಂಕ, ಸಮಯ ಹಾಗೂ ನೋಂದಣಿ ಮಾಡಿಸುವ ಸ್ಥಳದ ವಿವರಗಳನ್ನು SMS ಮೂಲಕ ತಿಳಿಸಲಾಗುವುದು ಎಂದು ಮಾಹಿತಿ ನೀಡಿದರು.7.27 ಲಕ್ಷ ರು ತನಕ ಆದಾಯ ತೆರಿಗೆ ಪಾವತಿ ಅಗತ್ಯವಿಲ್ಲ: ಕೇಂದ್ರ ವಿತ್ತ ಸಚಿವೆ ನಿರ್ಮಲಾ

ಗ್ರಾಮಾಂತರ ಪ್ರದೇಶದಲ್ಲಿರುವವರು ತಾವು ವಾಸಿಸುವ ಗ್ರಾಮದ ಸಮೀಪವಿರುವ ಗ್ರಾಮ-ಒನ್ ಕೇಂದ್ರ ಅಥವಾ ಬಾಪೂಜಿ ಸೇವಾ ಕೇಂದ್ರದಲ್ಲಿ ಯೋಜನೆಗೆ ಅರ್ಜಿ ಸಲ್ಲಿಸಬಹುದು. ಹಾಗೆಯೇ ನಗರ ಪ್ರದೇಶದಲ್ಲಿ ಅವರ ಸಮೀಪವಿರುವ ಕರ್ನಾಟಕ-ಒನ್, ಬೆಂಗಳೂರು-ಒನ್, ಬಿಬಿಎಂಪಿ ವಾರ್ಡ್ ಕಚೇರಿ ಮತ್ತು ಸ್ಥಳೀಯ ನಗರಾಡಳಿತ ಸಂಸ್ಥೆಯ ಕಚೇರಿಗಳಲ್ಲಿ ಅರ್ಜಿ ಹಾಕಬಹುದು ಎಂದು ತಿಳಿಸಿದರು.

Team Newsnap
Leave a Comment

Recent Posts

ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ

2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್​ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More

May 18, 2024

SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ

ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More

May 17, 2024

ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More

May 17, 2024

ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್‌ನಲ್ಲಿ ಘೋಷಣೆ… Read More

May 16, 2024

ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ

ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More

May 16, 2024

ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ

ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More

May 16, 2024